AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ಹೆಸರಿಸಿದ ಸಂಜಯ್ ಬಂಗಾರ್

Team India: ಏಕದಿನ ವಿಶ್ವಕಪ್​ನಲ್ಲಿ ಬ್ಯಾಟರ್​ ಸ್ಥಾನಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕು ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಏಕದಿನ ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ಹೆಸರಿಸಿದ ಸಂಜಯ್ ಬಂಗಾರ್
Team India
TV9 Web
| Edited By: |

Updated on: Aug 26, 2023 | 10:43 PM

Share

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಚರ್ಚೆಗಳು ಜೋರಾಗುತ್ತಿದೆ. 10 ತಂಡಗಳ ನಡುವಣ ಈ ಟೂರ್ನಿಯಲ್ಲಿ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡ ಯಾವುದೆಂಬ ಚರ್ಚೆ ಒಂದೆಡೆಯಾದರೆ, ಈ ಸಲ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಆಟಗಾರರು ಯಾರೆಲ್ಲಾ ಎಂಬ ಕುತೂಹಲ ಮತ್ತೊಂದೆಡೆ. ಆದರೆ ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್.

ಖಾಸಗಿ ಚಾನೆಲ್​ವೊಂದರ ಚರ್ಚೆಯಲ್ಲಿ ಕಾಣಿಸಿಕೊಂಡ ಸಂಜಯ್ ಬಂಗಾರ್, ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾ ಹೇಗಿರಬೇಕೆಂದು ಸಲಹೆ ನೀಡಿದ್ದಾರೆ. ಈ ಸಲಹೆಯೊಂದಿಗೆ ಬಲಿಷ್ಠ 15 ಸದಸ್ಯರ ತಂಡವನ್ನು ಕೂಡ ಆಯ್ಕೆ ಮಾಡಿದ್ದಾರೆ. ಹಾಗಿದ್ರೆ ಬಂಗಾರ್ ಹೆಸರಿಸಿರುವ ಆಟಗಾರರ ಸಂಯೋಜನೆ ಹೇಗಿದೆ ಎಂದು ನೋಡೋಣ…

ಬ್ಯಾಟರ್​ಗಳು:

ಏಕದಿನ ವಿಶ್ವಕಪ್​ನಲ್ಲಿ ಬ್ಯಾಟರ್​ ಸ್ಥಾನಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕು ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಆಲ್​ರೌಂಡರ್​ಗಳು:

ಏಕದಿನ ವಿಶ್ವಕಪ್ ತಂಡದಲ್ಲಿ ಆಲ್​ರೌಂಡರ್​ಗಳಾಗಿ ಮೂವರಿಗೆ ಸ್ಥಾನ ನೀಡಬೇಕೆಂದು ಅಭಿಪ್ರಾಯಪಟ್ಟಿರುವ ಸಂಜಯ್ ಬಂಗಾರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಅವರನ್ನು ಈ ಸ್ಥಾನಗಳಿಗೆ ಆಯ್ಕೆ ಮಾಡಿದ್ದಾರೆ.

ಸ್ಪಿನ್ ಬೌಲರ್​:

ಪರಿಪೂರ್ಣ ಸ್ಪಿನ್ ಬೌಲರ್​ ಆಗಿ ಸಂಜಯ್ ಬಂಗಾರ್ ಆಯ್ಕೆ ಮಾಡಿರುವುದು ಕುಲ್ದೀಪ್ ಯಾದವ್ ಅವರನ್ನು ಮಾತ್ರ.

ವೇಗದ ಬೌಲರ್‌ಗಳು:

ವೇಗದ ಬೌಲರ್​ಗಳ ಪಟ್ಟಿಯಲ್ಲಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಇರಬೇಕೆಂದು ಸಂಜಯ್ ಬಂಗಾರ್ ತಿಳಿಸಿದ್ದಾರೆ. ಹಾಗೆಯೇ ಎಡಗೈ ವೇಗಿಯಾಗಿ ಅರ್ಷದೀಪ್ ಸಿಂಗ್​ಗೆ ಸ್ಥಾನ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ODI World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಸಂಜಯ್ ಬಂಗಾರ್ ಅವರ ಏಕದಿನ ವಿಶ್ವಕಪ್ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ