AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ಹೆಸರಿಸಿದ ಸಂಜಯ್ ಬಂಗಾರ್

Team India: ಏಕದಿನ ವಿಶ್ವಕಪ್​ನಲ್ಲಿ ಬ್ಯಾಟರ್​ ಸ್ಥಾನಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕು ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಏಕದಿನ ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ಹೆಸರಿಸಿದ ಸಂಜಯ್ ಬಂಗಾರ್
Team India
TV9 Web
| Edited By: |

Updated on: Aug 26, 2023 | 10:43 PM

Share

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಚರ್ಚೆಗಳು ಜೋರಾಗುತ್ತಿದೆ. 10 ತಂಡಗಳ ನಡುವಣ ಈ ಟೂರ್ನಿಯಲ್ಲಿ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡ ಯಾವುದೆಂಬ ಚರ್ಚೆ ಒಂದೆಡೆಯಾದರೆ, ಈ ಸಲ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಆಟಗಾರರು ಯಾರೆಲ್ಲಾ ಎಂಬ ಕುತೂಹಲ ಮತ್ತೊಂದೆಡೆ. ಆದರೆ ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್.

ಖಾಸಗಿ ಚಾನೆಲ್​ವೊಂದರ ಚರ್ಚೆಯಲ್ಲಿ ಕಾಣಿಸಿಕೊಂಡ ಸಂಜಯ್ ಬಂಗಾರ್, ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾ ಹೇಗಿರಬೇಕೆಂದು ಸಲಹೆ ನೀಡಿದ್ದಾರೆ. ಈ ಸಲಹೆಯೊಂದಿಗೆ ಬಲಿಷ್ಠ 15 ಸದಸ್ಯರ ತಂಡವನ್ನು ಕೂಡ ಆಯ್ಕೆ ಮಾಡಿದ್ದಾರೆ. ಹಾಗಿದ್ರೆ ಬಂಗಾರ್ ಹೆಸರಿಸಿರುವ ಆಟಗಾರರ ಸಂಯೋಜನೆ ಹೇಗಿದೆ ಎಂದು ನೋಡೋಣ…

ಬ್ಯಾಟರ್​ಗಳು:

ಏಕದಿನ ವಿಶ್ವಕಪ್​ನಲ್ಲಿ ಬ್ಯಾಟರ್​ ಸ್ಥಾನಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕು ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಆಲ್​ರೌಂಡರ್​ಗಳು:

ಏಕದಿನ ವಿಶ್ವಕಪ್ ತಂಡದಲ್ಲಿ ಆಲ್​ರೌಂಡರ್​ಗಳಾಗಿ ಮೂವರಿಗೆ ಸ್ಥಾನ ನೀಡಬೇಕೆಂದು ಅಭಿಪ್ರಾಯಪಟ್ಟಿರುವ ಸಂಜಯ್ ಬಂಗಾರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಅವರನ್ನು ಈ ಸ್ಥಾನಗಳಿಗೆ ಆಯ್ಕೆ ಮಾಡಿದ್ದಾರೆ.

ಸ್ಪಿನ್ ಬೌಲರ್​:

ಪರಿಪೂರ್ಣ ಸ್ಪಿನ್ ಬೌಲರ್​ ಆಗಿ ಸಂಜಯ್ ಬಂಗಾರ್ ಆಯ್ಕೆ ಮಾಡಿರುವುದು ಕುಲ್ದೀಪ್ ಯಾದವ್ ಅವರನ್ನು ಮಾತ್ರ.

ವೇಗದ ಬೌಲರ್‌ಗಳು:

ವೇಗದ ಬೌಲರ್​ಗಳ ಪಟ್ಟಿಯಲ್ಲಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಇರಬೇಕೆಂದು ಸಂಜಯ್ ಬಂಗಾರ್ ತಿಳಿಸಿದ್ದಾರೆ. ಹಾಗೆಯೇ ಎಡಗೈ ವೇಗಿಯಾಗಿ ಅರ್ಷದೀಪ್ ಸಿಂಗ್​ಗೆ ಸ್ಥಾನ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ODI World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಸಂಜಯ್ ಬಂಗಾರ್ ಅವರ ಏಕದಿನ ವಿಶ್ವಕಪ್ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ