AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಮಾಜಿ ಆಟಗಾರ

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ತೆಂಡೂಲ್ಕರ್-ಅ್ಯಂಡರ್ಸನ್ ಸರಣಿಯ ನಾಲ್ಕನೇ ಪಂದ್ಯವು ಬುಧವಾರದಿಂದ (ಜುಲೈ 23) ಶುರುವಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ಅರ್ಷದೀಪ್ ಸಿಂಗ್ ಅಲಭ್ಯರಾಗಿದ್ದಾರೆ.

IND vs ENG: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಮಾಜಿ ಆಟಗಾರ
Team India
ಝಾಹಿರ್ ಯೂಸುಫ್
|

Updated on: Jul 22, 2025 | 3:11 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ನಾಳೆಯಿಂದ (ಜುಲೈ 23) ಶುರುವಾಗಲಿದೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಆಡುವ ಬಳಗವನ್ನು ಹೆಸರಿಸಿದ್ದಾರೆ. ಅಲ್ಲದೆ ಕಳೆದ ಬಾರಿ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್​ನಿಂದ ಇಬ್ಬರು ಕೈ ಬಿಟ್ಟಿದ್ದಾರೆ.

ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಅವರನ್ನೇ ಮುಂದುವರೆಸಿದ್ದು, ಮೂರನೇ ಕ್ರಮಾಂಕಕ್ಕೆ ಎಡಗೈ ಯುವ ದಾಂಡಿಗ ಸಾಯಿ ಸುದರ್ಶನ್ ಅವರನ್ನು ಹೆಸರಿಸಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕರುಣ್ ನಾಯರ್ ಅವರನ್ನು ಕೈ ಬಿಟ್ಟು ಸುದರ್ಶನ್​ಗೆ ಅವಕಾಶ ನೀಡಬೇಕೆಂದು ಸಂಜಯ್ ಮಂಜ್ರೇಕರ್ ಆಗ್ರಹಿಸಿದ್ದಾರೆ.

ಇನ್ನು 4ನೇ ಮತ್ತು 5ನೇ ಕ್ರಮಾಂಕಗಳಲ್ಲಿ ಶುಭ್​​ಮನ್ ಗಿಲ್ ಹಾಗೂ ರಿಷಭ್ ಪಂತ್ ಅವರನ್ನು ಹೆಸರಿಸಲಾಗಿದ್ದು, 6ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್​​ಗೆ ಸ್ಥಾನ ನೀಡಿದ್ದಾರೆ. 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಇದ್ದರೆ, 8ನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಿದ್ದಾರೆ.

ಹಾಗೆಯೇ ವೇಗಿಗಳಾಗಿ ಜಸ್​​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ಒಂದು ವೇಳೆ ಪ್ರಸಿದ್ಧ್ ಕೃಷ್ಣ ಅವರನ್ನು ಕಣಕ್ಕಿಳಿಸದಿದ್ದರೆ ಅನ್ಶುಲ್ ಕಂಬೋಜ್​ಗೆ ಅವಕಾಶ ನೀಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಹ ಸಂಜಯ್ ಮಂಜ್ರೇಕರ್ ಮುಂದಿಟ್ಟಿದ್ದಾರೆ. ಅದರಂತೆ ಸಂಜಯ್ ಮಂಜ್ರೇಕರ್ ಅವರ ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗ ಈ ಕೆಳಗಿನಂತಿದೆ…

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್, ರಿಷಭ್ ಪಂತ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ಬರೋಬ್ಬರಿ 13 ಸಿಕ್ಸ್​: ಟಿ10 ಪಂದ್ಯದಲ್ಲಿ ತೂಫಾನ್ ಸೆಂಚುರಿ ಸಿಡಿಸಿದ ಜೋಶ್

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!