AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಭರ್ಜರಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್

Vijay Hazare Trophy 2023: ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಹಬ್ ಯುವರಾಜ್ 136 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 121 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ರೈಲ್ವೇಸ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತು.

Sanju Samson: ಭರ್ಜರಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್
Sanju Samson
TV9 Web
| Edited By: |

Updated on: Dec 05, 2023 | 6:30 PM

Share

ಬೆಂಗಳೂರಿನ ಕಿನಿ ಸ್ಪೋರ್ಟ್ಸ್​​ ಅರೇನಾ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟೂರ್ನಿಯ ರೌಂಡ್​ 7 ಪಂದ್ಯದಲ್ಲಿ ಕೇರಳ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ರೈಲ್ವೇಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೇರಳ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಇನಿಂಗ್ಸ್​ ಆರಂಭಿಸಿದ ರೈಲ್ವೇಸ್ ಪ್ರಥಮ್ ಸಿಂಗ್ 77 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 61 ರನ್ ಬಾರಿಸಿದರು. ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಹಬ್ ಯುವರಾಜ್ 136 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 121 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ರೈಲ್ವೇಸ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತು.

256 ರನ್​ಗಳ ಗುರಿಯನ್ನು ಬೆನ್ನತ್ತಿದ ಕೇರಳ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 26 ರನ್​ಗಳಿಗೆ ರೋಹನ್ ಕುನ್ನುಮ್ಮಲ್ (0), ಸಚಿನ್ ಬೇಬಿ (9) ಹಾಗೂ ಸಲ್ಮಾನ್ ನಝೀರ್ (2) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಗೂಡಿದ ಸಂಜು ಸ್ಯಾಮ್ಸನ್ ಹಾಗೂ ಶ್ರೇಯಸ್ ಗೋಪಾಲ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಅಲ್ಲದೆ 63 ಎಸೆತಗಳಲ್ಲಿ 53 ರನ್​ಗಳ ಕೊಡುಗೆ ನೀಡಿ ಶ್ರೇಯಸ್ ಕೂಡ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಸಂಜು ಸ್ಯಾಮ್ಸನ್ 139 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 128 ರನ್ ಬಾರಿಸಿದರು. ಅಲ್ಲದೆ 50ನೇ ಓವರ್​ನ 5ನೇ ಎಸೆತದಲ್ಲಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು.

ಇತ್ತ ಸಂಜು ಸ್ಯಾಮ್ಸನ್ ಅವರ ಏಕಾಂಗಿ ಹೋರಾಟದ ಹೊರತಾಗಿಯೂ ಈ ಪಂದ್ಯದಲ್ಲಿ ಕೇರಳ ತಂಡಕ್ಕೆ ಗೆಲುವು ದಕ್ಕಲಿಲ್ಲ. ಅಂತಿಮವಾಗಿ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 237 ರನ್​ಗಳಿಸಿ ಕೇರಳ ತಂಡವು 18 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಕೇರಳ ಪ್ಲೇಯಿಂಗ್ ಇಲೆವೆನ್: ರೋಹನ್ ಕುನ್ನುಮ್ಮಲ್ , ಸಚಿನ್ ಬೇಬಿ , ಸಂಜು ಸ್ಯಾಮ್ಸನ್ (ನಾಯಕ) , ಶ್ರೇಯಸ್ ಗೋಪಾಲ್ , ಸಲ್ಮಾನ್ ನಿಜಾರ್ , ಕೃಷ್ಣ ಪ್ರಸಾದ್ , ಅಬ್ದುಲ್ ಬಸಿತ್ , ಬಾಸಿಲ್ ತಂಪಿ , ಅಖಿನ್ ಸತಾರ್ , ವೈಶಾಖ್ ಚಂದ್ರನ್ , ಅಖಿಲ್ ಸ್ಕಾರಿಯಾ.

ಇದನ್ನೂ ಓದಿ: IPL 2024: ವರ್ಷದ ಕ್ರೀಡಾ ಫ್ರಾಂಚೈಸ್ ಪ್ರಶಸ್ತಿ ಪಡೆದ RCB

ರೈಲ್ವೇಸ್ ಪ್ಲೇಯಿಂಗ್ ಇಲೆವೆನ್: ಶಿವಂ ಚೌಧರಿ , ವಿವೇಕ್ ಸಿಂಗ್ , ಪ್ರಥಮ್ ಸಿಂಗ್ , ಭಾರ್ಗವ್ ಮೆರಾಯ್ , ಉಪೇಂದ್ರ ಯಾದವ್ (ನಾಯಕ) , ಸಾಹಬ್ ಯುವರಾಜ್ , ರಾಹುಲ್ ಶರ್ಮಾ , ಕರ್ಣ್ ಶರ್ಮಾ , ಅಶುತೋಷ್ ಶರ್ಮಾ , ರಾಜ್ ಚೌಧರಿ , ಹಿಮಾಂಶು ಸಂಗ್ವಾನ್.

Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು