AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಭರ್ಜರಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್

Vijay Hazare Trophy 2023: ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಹಬ್ ಯುವರಾಜ್ 136 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 121 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ರೈಲ್ವೇಸ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತು.

Sanju Samson: ಭರ್ಜರಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್
Sanju Samson
TV9 Web
| Edited By: |

Updated on: Dec 05, 2023 | 6:30 PM

Share

ಬೆಂಗಳೂರಿನ ಕಿನಿ ಸ್ಪೋರ್ಟ್ಸ್​​ ಅರೇನಾ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟೂರ್ನಿಯ ರೌಂಡ್​ 7 ಪಂದ್ಯದಲ್ಲಿ ಕೇರಳ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ರೈಲ್ವೇಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೇರಳ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಇನಿಂಗ್ಸ್​ ಆರಂಭಿಸಿದ ರೈಲ್ವೇಸ್ ಪ್ರಥಮ್ ಸಿಂಗ್ 77 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 61 ರನ್ ಬಾರಿಸಿದರು. ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಹಬ್ ಯುವರಾಜ್ 136 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 121 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ರೈಲ್ವೇಸ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತು.

256 ರನ್​ಗಳ ಗುರಿಯನ್ನು ಬೆನ್ನತ್ತಿದ ಕೇರಳ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 26 ರನ್​ಗಳಿಗೆ ರೋಹನ್ ಕುನ್ನುಮ್ಮಲ್ (0), ಸಚಿನ್ ಬೇಬಿ (9) ಹಾಗೂ ಸಲ್ಮಾನ್ ನಝೀರ್ (2) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಗೂಡಿದ ಸಂಜು ಸ್ಯಾಮ್ಸನ್ ಹಾಗೂ ಶ್ರೇಯಸ್ ಗೋಪಾಲ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಅಲ್ಲದೆ 63 ಎಸೆತಗಳಲ್ಲಿ 53 ರನ್​ಗಳ ಕೊಡುಗೆ ನೀಡಿ ಶ್ರೇಯಸ್ ಕೂಡ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಸಂಜು ಸ್ಯಾಮ್ಸನ್ 139 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 128 ರನ್ ಬಾರಿಸಿದರು. ಅಲ್ಲದೆ 50ನೇ ಓವರ್​ನ 5ನೇ ಎಸೆತದಲ್ಲಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು.

ಇತ್ತ ಸಂಜು ಸ್ಯಾಮ್ಸನ್ ಅವರ ಏಕಾಂಗಿ ಹೋರಾಟದ ಹೊರತಾಗಿಯೂ ಈ ಪಂದ್ಯದಲ್ಲಿ ಕೇರಳ ತಂಡಕ್ಕೆ ಗೆಲುವು ದಕ್ಕಲಿಲ್ಲ. ಅಂತಿಮವಾಗಿ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 237 ರನ್​ಗಳಿಸಿ ಕೇರಳ ತಂಡವು 18 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಕೇರಳ ಪ್ಲೇಯಿಂಗ್ ಇಲೆವೆನ್: ರೋಹನ್ ಕುನ್ನುಮ್ಮಲ್ , ಸಚಿನ್ ಬೇಬಿ , ಸಂಜು ಸ್ಯಾಮ್ಸನ್ (ನಾಯಕ) , ಶ್ರೇಯಸ್ ಗೋಪಾಲ್ , ಸಲ್ಮಾನ್ ನಿಜಾರ್ , ಕೃಷ್ಣ ಪ್ರಸಾದ್ , ಅಬ್ದುಲ್ ಬಸಿತ್ , ಬಾಸಿಲ್ ತಂಪಿ , ಅಖಿನ್ ಸತಾರ್ , ವೈಶಾಖ್ ಚಂದ್ರನ್ , ಅಖಿಲ್ ಸ್ಕಾರಿಯಾ.

ಇದನ್ನೂ ಓದಿ: IPL 2024: ವರ್ಷದ ಕ್ರೀಡಾ ಫ್ರಾಂಚೈಸ್ ಪ್ರಶಸ್ತಿ ಪಡೆದ RCB

ರೈಲ್ವೇಸ್ ಪ್ಲೇಯಿಂಗ್ ಇಲೆವೆನ್: ಶಿವಂ ಚೌಧರಿ , ವಿವೇಕ್ ಸಿಂಗ್ , ಪ್ರಥಮ್ ಸಿಂಗ್ , ಭಾರ್ಗವ್ ಮೆರಾಯ್ , ಉಪೇಂದ್ರ ಯಾದವ್ (ನಾಯಕ) , ಸಾಹಬ್ ಯುವರಾಜ್ , ರಾಹುಲ್ ಶರ್ಮಾ , ಕರ್ಣ್ ಶರ್ಮಾ , ಅಶುತೋಷ್ ಶರ್ಮಾ , ರಾಜ್ ಚೌಧರಿ , ಹಿಮಾಂಶು ಸಂಗ್ವಾನ್.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು