AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಬಡ ಫುಟ್ಬಾಲ್​ ಆಟಗಾರನ ನೆರವಿಗೆ ನಿಂತ ಸಂಜು ಸ್ಯಾಮ್ಸನ್​

ಆದರ್ಶ್ ಪೋರ್ಚುಗಲ್‌ನ ಸ್ಟಾರ್ ಸ್ಟ್ರೈಕರ್ ಕ್ರಿಸ್ಟಿಯಾನೋ ರೊನಾಲ್ಡೊ ಅವರ ಅಭಿಮಾನಿಯಾಗಿದ್ದು, ಮುಂದೊಂದು ದಿನ ಅವರು ಭಾರತದ ಸ್ಟಾರ್ ಫುಟ್‌ಬಾಲ್ ಆಟಗಾರರಾಗುತ್ತಾರೆ.

Sanju Samson: ಬಡ ಫುಟ್ಬಾಲ್​ ಆಟಗಾರನ ನೆರವಿಗೆ ನಿಂತ ಸಂಜು ಸ್ಯಾಮ್ಸನ್​
Sanju Samson
TV9 Web
| Edited By: |

Updated on: Nov 13, 2021 | 8:29 PM

Share

ಕೇರಳದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಬಡ ಆಟಗಾರರೊಬ್ಬರ ಕನಸು ಈಡೇರಿಸಲು ಸಹಾಯ ಹಸ್ತ ಚಾಚುವ ಮೂಲಕ ಸುದ್ದಿಯಾಗಿದ್ದಾರೆ. ಸ್ಯಾಮ್ಸನ್ ತನ್ನ ರಾಜ್ಯದ ಫುಟ್ಬಾಲ್ ಆಟಗಾರ ಆದರ್ಶ್ ಅವರ ಆಕಾಂಕ್ಷೆಗಳನ್ನು ಈಡೇರಿಸಲು ನೆರವಾಗಿದ್ದು, ಅದರಂತೆ ಯುವ ಫುಟ್ಬಾಲ್ ಆಟಗಾರನಿಗೆ ಸ್ಪೇನ್​ಗೆ ತೆರಳಲು ವಿಮಾನ ಟಿಕೆಟ್‌ಗಾಗಿ ವ್ಯವಸ್ಥೆ ಮಾಡಿದ್ದಾರೆ. ಆದರ್ಶ್​ ಕೇರಳದ ಉದಯೋನ್ಮುಖ ಫುಟ್ಬಾಲ್ ಆಟಗಾರ. ಈತನ ಪ್ರತಿಭೆ ಗುರುತಿಸಿದ ಸ್ಪೇನ್‌ನ ಫುಟ್‌ಬಾಲ್ ಕ್ಲಬ್‌ ಒಂದು ತಿಂಗಳ ತರಬೇತಿಗಾಗಿ ಆಯ್ಕೆ ಮಾಡಿತ್ತು. ಆದರೆ ಸ್ಪೇನ್​ಗೆ ಕಳುಹಿಸಿ ಕೊಡುವ ಆರ್ಥಿಕ ಪರಿಸ್ಥಿತಿಯಲ್ಲಿ ಆದರ್ಶ್ ಕುಟುಂಬವಿರಲಿಲ್ಲ. ಈ ಬಗ್ಗೆ ಆದರ್ಶ್ ಚೆಂಗನ್ನೂರು ಶಾಸಕ ಮತ್ತು ಕೇರಳ ಸಂಸ್ಕೃತಿ ಮತ್ತು ಯುವ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರ ಸಹಾಯವನ್ನು ಕೋರಿದ್ದರು.

ಈ ಫುಟ್ಬಾಲ್ ಆಟಗಾರನ ಕಥೆಯನ್ನು ಸಚಿವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಇದಾದ ಬಳಿಕ ಕಾರಕ್ಕೋಡ್‌ನ ಲಿಯೋ ಕ್ಲಬ್ ಆದರ್ಶ್‌ಗೆ 50 ಸಾವಿರ ರೂ. ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಉಳಿದ ಮೊತ್ತವನ್ನು ಕೇರಳ ಸಚಿವರು ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್​ ಕೂಡ ಯುವ ಫುಟ್ಬಾಲ್​ ಆಟಗಾರನ ನೆರವಿಗೆ ಧಾವಿಸಿದ್ದಾರೆ. ಅದರಂತೆ ಸ್ಪೇನ್​ಗೆ ತೆರಳಲು ವಿಮಾನದ ಟಿಕೆಟ್ ಕೊಡಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇರಳ ಸಚಿವ ಸಾಜಿ ಚೆರಿಯನ್, “ಒಂದು ವಾರದ ಹಿಂದೆ ಆದರ್ಶ್ ಎಂಬ ಯುವಕ ನನ್ನನ್ನು ಭೇಟಿಯಾಗಲು ಬಂದಿದ್ದ. ಅವರು ಅದ್ಭುತ ಫುಟ್ಬಾಲ್ ಆಟಗಾರ. ಸ್ಪೇನ್‌ನ ಮೂರನೇ ಡಿವಿಷನ್ ಲೀಗ್‌ಗೆ ಸಂಯೋಜಿತವಾದ ಕ್ಲಬ್‌ನೊಂದಿಗೆ ಒಂದು ತಿಂಗಳ ಕಾಲ ತರಬೇತಿ ಪಡೆಯುವ ಅವಕಾಶವ ಪಡೆದಿದ್ದನು. ಆದರೆ ಆದರ್ಶ್ ಅವರ ಆರ್ಥಿಕ ಸ್ಥಿತಿಯು ಸ್ಪೇನ್‌ಗೆ ತೆರಳುವಂತಿರಲಿಲ್ಲ. ಹೀಗಾಗಿ ಅವರು ನನ್ನ ಬಳಿ ಸಹಾಯ ಕೇಳಿದರು. ಆದರ್ಶ್ ಅವರ ತರಬೇತಿಯ ಸಮಯದಲ್ಲಿ ಐದು ಪಂದ್ಯಗಳನ್ನು ಆಡುವ ಅವಕಾಶ ಸಿಗಲಿದೆ. ಒಂದು ವೇಳೆ ಆತನ ಪ್ರದರ್ಶನ ಉತ್ತಮವಾಗಿದ್ದರೆ ಈ ಫುಟ್ಬಾಲ್ ಕ್ಲಬ್​ ಒಪ್ಪಂದವನ್ನು ಮಾಡಿಕೊಳ್ಳಲಿದೆ.

ಈ ಕಷ್ಟಕರ ಪರಿಸ್ಥಿತಿಯಲ್ಲಿ, ನಮ್ಮ ರಾಜ್ಯದ ಸ್ಟಾರ್ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಆದರ್ಶ್ ಅವರ ವಿಮಾನ ಟಿಕೆಟ್‌ಗೆ ವ್ಯವಸ್ಥೆ ಮಾಡಿದ್ದಾರೆ. ಅದೇ ವೇಳೆ ಉಳಿದ ಮೊತ್ತಕ್ಕೆ ರಾಜ್ಯ ಕ್ರೀಡಾ ಇಲಾಖೆಗೂ ನೆರವು ಕೇಳಿದ್ದೇವೆ. ಅದರಂತೆ ಶೀಘ್ರದಲ್ಲೇ ಆದರ್ಶ್ ಅವರನ್ನು ನಾವು ಸ್ಪೇನ್‌ಗೆ ಕಳುಹಿಸಿ ಕೊಡಲಿದ್ದೇವೆ. ಆದರ್ಶ್ ಪೋರ್ಚುಗಲ್‌ನ ಸ್ಟಾರ್ ಸ್ಟ್ರೈಕರ್ ಕ್ರಿಸ್ಟಿಯಾನೋ ರೊನಾಲ್ಡೊ ಅವರ ಅಭಿಮಾನಿಯಾಗಿದ್ದು, ಮುಂದೊಂದು ದಿನ ಅವರು ಭಾರತದ ಸ್ಟಾರ್ ಫುಟ್‌ಬಾಲ್ ಆಟಗಾರರಾಗುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಕೇರಳ ಸಚಿವ ಸಾಜಿ ಚೆರಿಯನ್ ಬರೆದುಕೊಂಡಿದ್ದಾರೆ.

ಇದರೊಂದಿಗೆ ಸಂಜು ಸ್ಯಾಮ್ಸನ್ ಬಡ ಫುಟ್ಬಾಲ್ ಆಟಗಾರನಿಗೆ ನೀಡಿರುವ ಸಹಾಯ ಹಸ್ತದ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಟೀಮ್ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ಸ್ಯಾಮ್ಸನ್​ ಅವರ ದೊಡ್ಡ ಮನಸ್ಸಿಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Explained: ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮತ್ತೊಂದು ಭಾರತ-ಪಾಕಿಸ್ತಾನ್…ಆದರೆ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

(Sanju Samson Sponsors Flight Ticket For Budding Footballer From Kerala)

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!