AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Out: ಹುಟ್ಟುಹಬ್ಬದ ದಿನ ರೋಹಿತ್ ಶರ್ಮಾಗೆ ಬಹುದೊಡ್ಡ ಮೋಸ: ಇದು ಅಂಪೈರ್ ಮಾಡಿದ ಎಡವಟ್ಟು

IPl 2023 MI vs RR: ಐಪಿಎಲ್ 2023ರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಔಟಾಗಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಇದರ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.

Rohit Sharma Out: ಹುಟ್ಟುಹಬ್ಬದ ದಿನ ರೋಹಿತ್ ಶರ್ಮಾಗೆ ಬಹುದೊಡ್ಡ ಮೋಸ: ಇದು ಅಂಪೈರ್ ಮಾಡಿದ ಎಡವಟ್ಟು
Rohit Sharma Out MI vs RR
Vinay Bhat
|

Updated on:May 01, 2023 | 11:33 AM

Share

ಭಾರತ ಕ್ರಿಕೆಟ್ ತಂಡದ ಹಾಗೂ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ರೋಹಿತ್ ಶರ್ಮಾ (Rohit Sharma) ಭಾನುವಾರ 36ನೇ ವಸಂತಕ್ಕೆ ಕಾಲಿಟ್ಟರು. ವಿಶೇಷ ಎಂದರೆ ಇವರ ಹುಟ್ಟುಹಬ್ಬದ ದಿನವೇ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (MI vs RR) ಪಂದ್ಯ ಏರ್ಪಡಿಸಲಾಗಿತ್ತು. ಇದರಲ್ಲಿ ಹಿಟ್​ಮ್ಯಾನ್ ಪಡೆ 6 ವಿಕೆಟ್​ಗಳ ರೋಚಕ ಜಯ ಕೂಡ ಸಾಧಿಸಿತು. ಕೊನೆಯ 6 ಎಸೆತಗಳಲ್ಲಿ ಮುಂಬೈ ಗೆಲುವಿಗೆ 17 ರನ್ ಬೇಕಾಗಿದ್ದಾಗ ಟಿಮ್ ಡೇವಿಡ್ (Tim David) ಮೊದಲ ಮೂರು ಎಸೆತಗಳಲ್ಲಿ ಮೂರು ಸಿಕ್ಸರ್ ಸಿಡಿಸಿ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಆದರೆ, ಜನ್ಮದಿನ ಆಡಿದ ಪಂದ್ಯದಲ್ಲಿ ರೋಹಿತ್ ಕ್ಲಿಕ್ ಆಗಲಿಲ್ಲ. ಅಂಪೈರ್ ಮಾಡಿದ ಎಡವಟ್ಟಿನಿಂದ ಬೇಗನೆ ಪೆವಿಲಿಯನ್ ಸೇರಬೇಕಾಯಿತು.

ರಾಜಸ್ಥಾನ್ ನೀಡಿದ್ದ 213 ರನ್​ಗಳ ಟಾರ್ಗೆಟ್ ಬೆನ್ನಟ್ಟಲು ಬಂದ ಮುಂಬೈ ಪರ ರೋಹಿತ್ ಶರ್ಮಾ (3 ರನ್) ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಎರಡನೇ ಓವರ್​ನ ಸಂದೀಪ್ ಶರ್ಮಾ ಬೌಲಿಂಗ್​ನ ಕೊನೆಯ ಎಸೆತದಲ್ಲಿ ಔಟಾದರು. ಈ ಎಸೆತದಲ್ಲಿ ದೊಡ್ಡ ಎಸೆತ ಹೊಡೆಯಲು ರೋಹಿತ್ ಕ್ರೀಸ್ ಬಿಟ್ಟುನಿಂತರು. ಆದರೆ, ಚೆಂಡು ಬ್ಯಾಟ್​ಗೆ ತಾಗದೆ ಸಾಗಿತು. ಅತ್ತ ಬೇಲ್ಸ್ ನೆಲಕ್ಕೆ ಬಿತ್ತು. ಬೇಲ್ಸ್ ಕೆಳಗಿ ಬಿದ್ದಿರುವುದನ್ನು ಗಮನಿಸಿ ಅಂಪೈರ್ ಔಟ್ ಎಂದು ತೀರ್ಪು ಪ್ರಕಟಿಸಿದರು. ಆದರೆ, ಸೂಕ್ಷ್ಮವಾಗಿ ಗಮನಿಸಿದಾಗ ಇದು ಔಟ್ ಆಗಿರಲಿಲ್ಲ.

ಇದನ್ನೂ ಓದಿ
Image
RCB Playing XI vs LSG: ಹ್ಯಾಜಲ್​ವುಡ್ ಅಲ್ಲ: ಲಖನೌ ವಿರುದ್ಧ ಗೆಲ್ಲಲು ಆರ್​ಸಿಬಿ ಮಾಸ್ಟರ್ ಪ್ಲಾನ್: ಆ ಪ್ಲೇಯರ್ ಇಂದು ಕಣಕ್ಕೆ
Image
Rohit Sharma: ತಾಳ್ಮೆ ಕಳೆದುಕೊಂಡ ರೋಹಿತ್ ಶರ್ಮಾ: ಪಿಚ್ ಮಧ್ಯೆ ನಿಂತು ಅಂಪೈರ್​ನ ಮೈಚಳಿ ಬಿಡಿಸಿದ ಹಿಟ್​ಮ್ಯಾನ್: ವಿಡಿಯೋ
Image
Tim David: ಕೊನೆಯ ಓವರ್​ನಲ್ಲಿ ಬೇಕಿತ್ತು 17 ರನ್ಸ್: ಸತತ 3 ಸಿಕ್ಸ್ ಸಿಡಿಸಿದ ಟಿಮ್ ಡೇವಿಡ್ ರೋಚಕ ವಿಡಿಯೋ ನೋಡಿ
Image
LSG vs RCB, IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಲಖನೌ ವಿರುದ್ಧದ ಪಂದ್ಯಕ್ಕೆ ಮಾಡಿದೆ ಮಾಸ್ಟರ್ ಪ್ಲಾನ್

IPL 2023: ಔಟಾ ಅಥವಾ ನಾಟೌಟಾ? ಹೊಸ ಚರ್ಚೆಗೆ ಕಾರಣವಾದ ಕ್ಯಾಚ್

ಹೌದು, ಅಂಪರ್ ಔಟೆಂದು ಕೊಟ್ಟ ಬಳಿಕ ರೋಹಿತ್ ಶರ್ಮಾ ಪೆವಿಲಿಯನ್​ಗೆ ತೆರಳಿದರು. ಆದರೆ, ಇದು ಔಟ್ ಆಗಿರಲಿಲ್ಲ. ರೋಹಿತ್ ಔಟಾದ ವಿಡಿಯೋವನ್ನು ಸ್ಲೋ ಮೋಷನ್​ನಲ್ಲಿ ನೋಡಿದಾಗ ಚೆಂಡು ವಿಕೆಟ್ ಹತ್ತಿರದಿಂದ ಸಾಗಿತ್ತೆ ಹೊರತು ವಿಕೆಟ್​ಗೆ ಬಡಿದಿರಲಿಲ್ಲ. ಬದಲಾಗಿ ವಿಕೆಟ್​ಗೆ ಆರ್​ಆರ್​ ತಂಡದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರ ಗ್ಲೌಸ್ ತಾಗಿತ್ತು. ಹೀಗಾಗಿ ಬೇಲ್ಸ್ ಕೆಳಕ್ಕೆ ಬಿದ್ದಿದೆ. ಚೆಂಡು ತಾಗಿ ಬೇಲ್ಸ್ ಬಿದ್ದಿದೆ ಎಂದು ಅಂದುಕೊಂಡು ಅಂಪೈರ್ ಔಟೆಂದು ತೀರ್ಪು ನೀಡಿದ್ದಾರೆ. ಈ ಮೂಲಕ ಅಂಪೈರ್ ಮಾಡಿದ ಎಡವಟ್ಟಿನಿಂದ ಹಿಟ್​ಮ್ಯಾನ್ ಬೇಗನೆ ನಿರ್ಗಮಿಸಿಬೇಕಾಯಿತು.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ರೋಹಿತ್ ಶರ್ಮಾ ಅಭಿಮಾನಿಗಳು ಸ್ಲೋ ಮೋಷನ್ ವಿಡಿಯೋ ಹಂಚಿಕೊಂಡರು ಅಂಪೈರ್ ವಿರುದ್ಧ ಸಿಡಿದೆದ್ದಿದ್ದಾರೆ. ಇಲ್ಲಿದೆ ನೋಡಿ ಆ ವಿಡಿಯೋ.

ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ರಾಜಸ್ಥಾನ್ ಪರ ಯಶಸ್ವಿ ಜೈಸ್ವಾಲ್ ಏಕಾಂಗಿಯಾಗಿ ರನ್ ಕಲೆಹಾಕಿದ್ದು ಬಿಟ್ಟರೆ ನಂತರ ಆಡಿದ ಯಾವ ಬ್ಯಾಟರ್​ನ ಸ್ಕೋರ್ 20ರ ಗಡಿ ದಾಟಲಿಲ್ಲ. ಜೈಸ್ವಾಲ್ ಕೇವಲ 62 ಎಸೆತಗಳಲ್ಲಿ 16 ಫೋರ್ ಹಾಗೂ 8 ಸಿಕ್ಸರ್ ಬಾರಿಸಿ 124 ರನ್ ಚಚ್ಚಿದರು. ಆರ್​ಆರ್ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 212 ರನ್ ಬಾರಿಸಿತು. ಕಠಿಣ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಆರಂಭದಲ್ಲಿ 2 ವಿಕೆಟ್ ಕಳೆದುಕೊಂಡರೂ ಮಧ್ಯಮ ಕ್ರಮಾಂಕದಲ್ಲಿ ಕ್ಯಾಮ್ರೋನ್ ಗ್ರೀನ್ (44) ಹಾಗೂ ಸೂರ್ಯಕುಮಾರ್ ಯಾದವ್ (55) ಅಬ್ಬರಿಸಿ ಒಂದು ಹಂತಕ್ಕೆ ಪಂದ್ಯವನ್ನು ತಂದಿಟ್ಟರು. ಕೊನೆಯ ಹಂತದಲ್ಲಿ ತಿಲಕ್ ವರ್ಮಾ (ಅಜೇಯ 29) ಮತ್ತು ಟಿಮ್ ಡೇವಿಡ್ (ಅಜೇಯ 45) ಸ್ಫೋಟಕ ಬ್ಯಾಟಿಂಗ್ ನಡೆಸಿ 19.3 ಓವರ್​ನಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Mon, 1 May 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ