AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕೆಎಲ್ ರಾಹುಲ್ vs ಸರ್ಫರಾಝ್ ಖಾನ್: ಯಾರಿಗೆ ಸಿಗಲಿದೆ ಚಾನ್ಸ್?

Sarfaraz Khan vs KL Rahul: ರಲ್ಲಿ ಟೀಮ್ ಇಂಡಿಯಾ ಪರ ಸರ್ಫರಾಝ್ ಖಾನ್ ಮೂರು ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ, ಕೆಎಲ್ ರಾಹುಲ್ ಎಂಟು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ ಸರ್ಫರಾಝ್ 3 ಅರ್ಧಶತಕ ಬಾರಿಸಿ ಮಿಂಚಿದರೆ, ಕೆಎಲ್ ರಾಹುಲ್ 2 ಹಾಫ್ ಸೆಂಚುರಿ ಸಿಡಿಸಿದ್ದಾರೆ.

IND vs NZ: ಕೆಎಲ್ ರಾಹುಲ್ vs ಸರ್ಫರಾಝ್ ಖಾನ್: ಯಾರಿಗೆ ಸಿಗಲಿದೆ ಚಾನ್ಸ್?
Sarfaraz Khan - KL Rahul
ಝಾಹಿರ್ ಯೂಸುಫ್
|

Updated on:Oct 15, 2024 | 12:01 PM

Share

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನಾಳೆಯಿಂದ (ಅ.16) ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವುದು ಯಾರು ಎಂಬುದೇ ಈಗ ಪ್ರಶ್ನೆ. ಏಕೆಂದರೆ ಭಾರತ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಪ್ರತಿಯೊಬ್ಬರು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅತ್ತ ಬಾಂಗ್ಲಾ ಸರಣಿಯ ವೇಳೆ ಬೆಂಚ್ ಕಾದಿದ್ದ ಸರ್ಫರಾಝ್ ದೇಶೀಯ ಅಂಗಳದಲ್ಲಿ ದ್ವಿಶತಕ ಬಾರಿಸಿ ಇದೀಗ ಮತ್ತೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಹೀಗಾಗಿಯೇ ಈ ಬಾರಿ ಸರ್ಫರಾಝ್ ಖಾನ್​ಗೆ ಮಣೆ ಹಾಕಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯ ಎರಡೂ ಪಂದ್ಯಗಳಲ್ಲೂ ಯುವ ದಾಂಡಿಗ ಬೆಂಚ್ ಕಾದಿದ್ದರು. ಇದಾದ ಬಳಿಕ ನಡೆದ ಇರಾನಿ ಕಪ್ ಪಂದ್ಯದಲ್ಲಿ ಕಣಕ್ಕಿಳಿದ ಸರ್ಫರಾಝ್ 286 ಎಸೆತಗಳಲ್ಲಿ 222 ರನ್​ಗಳ ಅಜೇಯ ದ್ವಿಶತಕ ಸಿಡಿಸಿ ಮಿಂಚಿದ್ದರು.

ಇತ್ತ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಸರ್ಫರಾಝ್ ಖಾನ್​ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇಲ್ಲಿ ಸರ್ಫರಾಝ್​ಗೆ ಚಾನ್ಸ್ ನೀಡಲು ಮುಂದಾದರೆ ಕೆಎಲ್ ರಾಹುಲ್ ಅವರ ತಲೆದಂಡವಾಗುವುದು ಖಚಿತ.

ಏಕೆಂದರೆ ಸರ್ಫರಾಝ್ ಖಾನ್ ಮಧ್ಯಮ ಕ್ರಮಾಂಕದ ಬ್ಯಾಟರ್. ಇತ್ತ ಮಧ್ಯಮ ಕ್ರಮಾಂಕದಲ್ಲಿರುವುದು ಕೆಎಲ್ ರಾಹುಲ್. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಲ್ಲದೆ ಈ ಸರಣಿಯಲ್ಲಿ ಮೂರು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಕೆಎಲ್ ರಾಹುಲ್ ಕಲೆಹಾಕಿರುವುದು 106 ರನ್​ಗಳು.

ಅದೇ ಟೀಮ್ ಇಂಡಿಯಾ ಪರ ಮೂರು ಟೆಸ್ಟ್ ಪಂದ್ಯಗಳನ್ನಾಡಿರುವ ಸರ್ಫರಾಝ್ ಖಾನ್ ಒಟ್ಟು 200 ರನ್ ಗಳಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಬದಲಾವಣೆ ಮಾಡಲು ಮುಂದಾದರೆ ಕೆಎಲ್ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ತವರಿನಲ್ಲಿ ಪಂದ್ಯ: ರಾಹುಲ್​ಗೆ ಪ್ಲಸ್ ಪಾಯಿಂಟ್:

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಕೆಎಲ್ ರಾಹುಲ್​ಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂ ರಾಹುಲ್​ ಅವರ ತವರು ಮೈದಾನ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್​ಗೆ ಮತ್ತೊಂದು ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ.

ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಕೇವಲ 43 ಎಸೆತಗಳಲ್ಲಿ 68 ರನ್ ಬಾರಿಸಿದ್ದರು. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಿಂದ ಕನ್ನಡಿಗನ ಕೈ ಬಿಡುವ ಸಾಧ್ಯತೆ ಇಲ್ಲ ಎಂದೇ ಹೇಳಬಹುದು.

ಇದನ್ನೂ ಓದಿ: IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

ಹೀಗಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಒಂದು ವೇಳೆ ತವರು ಮೈದಾನದಲ್ಲಿ ವಿಫಲರಾದರೆ, ಮುಂದಿನ ಎರಡು ಪಂದ್ಯಗಳಲ್ಲಿ ಸರ್ಫರಾಝ್ ಖಾನ್​ಗೆ ಚಾನ್ಸ್ ಸಿಗಬಹುದು. ಹಾಗಾಗಿ ಭಾರತದ ಪರ ಮತ್ತೊಮ್ಮೆ ಕಣಕ್ಕಿಳಿಯಲು ಸರ್ಫರಾಝ್ ಖಾನ್ ಒಂದೆರಡು ಪಂದ್ಯಗಳವರೆಗೆ ಕಾಯಬೇಕಾಗಿ ಬರಬಹುದು.

Published On - 12:00 pm, Tue, 15 October 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ