AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಐಪಿಎಲ್​ನಲ್ಲಿ 41 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದಾದ ಸೌದಿ ದೊರೆ..!

IPL: ವಿಶ್ವದ ಅತ್ಯಂತ ಶ್ರೀಮಂತ ಟಿ20 ಲೀಗ್​ ಐಪಿಎಲ್​ನಲ್ಲಿ 5 ಬಿಲಿಯನ್ ಡಾಲರ್ ಅಂದರೆ ಸುಮಾರು 41 ಸಾವಿರ ಕೋಟಿ ರೂಗಳನ್ನು ಹೂಡಿಕೆ ಮಾಡಲು ಸೌದಿ ಅರೇಬಿಯಾ ಮುಂದಾಗಿದೆ ಎಂದು ವರದಿಯಾಗಿದೆ. ಗಾಲ್ಫ್ ಮತ್ತು ಫುಟ್‌ಬಾಲ್ ಲೋಕದಲ್ಲಿ ತನ್ನ ಸಾಮ್ರಾಜ್ಯ ಸ್ಥಾಪಿಸಿರುವ ಸೌದಿ ಇದೀಗ ಐಪಿಎಲ್‌ನಲ್ಲೂ ತನ್ನ ಪಾರುಪತ್ಯ ಸಾಧಿಸಲು ಮುಂದಾಗಿದೆ.

IPL: ಐಪಿಎಲ್​ನಲ್ಲಿ 41 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದಾದ ಸೌದಿ ದೊರೆ..!
ಐಪಿಎಲ್​ನಲ್ಲಿ ಹೂಡಿಕೆ ಮಾಡಲು ಮುಂದಾದ ಸೌದಿ ದೊರೆ
ಪೃಥ್ವಿಶಂಕರ
|

Updated on:Nov 04, 2023 | 9:08 AM

Share

ವಿಶ್ವದ ಅತ್ಯಂತ ಶ್ರೀಮಂತ ಟಿ20 ಲೀಗ್​ ಐಪಿಎಲ್​ನಲ್ಲಿ (IPL) 5 ಬಿಲಿಯನ್ ಡಾಲರ್ ಅಂದರೆ ಸುಮಾರು 41 ಸಾವಿರ ಕೋಟಿ ರೂಗಳನ್ನು ಹೂಡಿಕೆ ಮಾಡಲು ಸೌದಿ ಅರೇಬಿಯಾ (Saudi Arabia) ಮುಂದಾಗಿದೆ ಎಂದು ವರದಿಯಾಗಿದೆ. ಗಾಲ್ಫ್ ಮತ್ತು ಫುಟ್‌ಬಾಲ್ ಲೋಕದಲ್ಲಿ ತನ್ನ ಸಾಮ್ರಾಜ್ಯ ಸ್ಥಾಪಿಸಿರುವ ಸೌದಿ ಇದೀಗ ಐಪಿಎಲ್‌ನಲ್ಲೂ ತನ್ನ ಪಾರುಪತ್ಯ ಸಾಧಿಸಲು ಮುಂದಾಗಿದೆ. ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ (Crown Prince Mohammed Bin Salman) ಐಪಿಎಲ್ ಅನ್ನು 30 ಬಿಲಿಯನ್ ಡಾಲರ್ ಅಂದರೆ ಸುಮಾರು 2.5 ಲಕ್ಷ ಕೋಟಿ ಮೌಲ್ಯದ ಹಿಡುವಳಿ ಕಂಪನಿಯಾಗಿ ಪರಿವರ್ತಿಸಲು ಬಯಸಿದ್ದು, ಈ ಬಗ್ಗೆ ಬಿನ್ ಸಲ್ಮಾನ್ ಅವರ ಸಲಹೆಗಾರರು ಭಾರತ ಸರ್ಕಾರದ ಕೆಲವು ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

41 ಸಾವಿರ ಕೋಟಿ ರೂ. ಹೂಡಿಕೆ

ಕ್ರೌನ್ ಪ್ರಿನ್ಸ್ ಸಲ್ಮಾನ್ ಐಪಿಎಲ್‌ನಲ್ಲಿ 5 ಬಿಲಿಯನ್ ಡಾಲರ್ (ಸುಮಾರು 41 ಸಾವಿರ ಕೋಟಿ ರೂಪಾಯಿ) ಹೂಡಿಕೆ ಮಾಡಲು ಬಯಸಿದ್ದು, ಲೀಗ್ ಅನ್ನು ದೇಶೀಯ ಕ್ರಿಕೆಟ್‌ಗೆ ಬದಲಾಗಿ ಜಾಗತಿಕ ಕ್ರಿಕೆಟ್ ಲೀಗ್ ಆಗಿ ಪರಿವರ್ತಿಸಲು ಬಯಸಿದ್ದಾರೆ. ವಾಸ್ತವವಾಗಿ ಐಪಿಎಲ್, ವಿಶ್ವದ ಅತಿದೊಡ್ಡ ಕ್ರೀಡಾ ಲೀಗ್‌ಗಳಲ್ಲಿ ಒಂದಾಗಿದ್ದು, ಏಕೈಕ ಐಪಿಎಲ್ ಪಂದ್ಯದಿಂದ ಬಿಸಿಸಿಐ ಖಜಾನೆಗೆ ಸುಮಾರು 118 ಕೋಟಿ ರೂ. ಆದಾಯ ಹರಿದುಬರುತ್ತಿದೆ. ಈ ಆದಾಯದ ಹರಿವೆ ಸೌದಿ ದೊರೆಯನ್ನು ಐಪಿಎಲ್​ನತ್ತ ಬರುವಂತೆ ಮಾಡಿದೆ ಎಂದು ವರದಿಯಾಗಿದೆ.

IPL 2024: ದುಬೈನಲ್ಲಿ ನಡೆಯಲ್ಲಿದೆ 2024 ರ ಐಪಿಎಲ್​ ಹರಾಜು; ಯಾವ ದಿನದಂದು ಗೊತ್ತಾ?

ಇತರೆ ಕ್ರೀಡೆಗಳಲ್ಲಿ ಸೌದಿ ಅಧಿಪತ್ಯ

ಸೌದಿ ಅರೇಬಿಯಾ ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ ಫುಟ್‌ಬಾಲ್‌ನಲ್ಲಿಯೂ ಹೂಡಿಕೆ ಮಾಡುತ್ತಿದೆ. ಇದಲ್ಲದೆ ಸೌದಿ ಅರೇಬಿಯಾ ವಿಶ್ವದ ಪ್ರಮುಖ ಲೀಗ್‌ಗಳಲ್ಲಿಯೂ ಹೂಡಿಕೆ ಮಾಡುತ್ತಿದೆ. ಇದರಲ್ಲಿ ಸೌದಿ ಫುಟ್ಬಾಲ್ ಪ್ರೊ ಲೀಗ್ ಸಹ ಒಳಗೊಂಡಿದೆ. ಈ ಲೀಗ್​ನಲ್ಲಿ ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಕ್ರಿಸ್ಟಿಯಾನೋ ರೊನಾಲ್ಡೊ ಕೂಡ ಆಡುತ್ತಾರೆ. ಜೊತೆಗೆ, ಕಳೆದ ಎರಡು ವರ್ಷಗಳಲ್ಲಿ ಸೌದಿ, ಈ ಲೀಗ್​ನಲ್ಲಿ ಭಾರಿ ಹೂಡಿಕೆಗಳನ್ನು ಮಾಡಿದ್ದು, ಇದರ ಫಲವಾಗಿ ಪ್ರಪಂಚದ ಖ್ಯಾತ ಯುರೋಪಿಯನ್ ಫುಟ್‌ಬಾಲ್ ಆಟಗಾರರು ಈ ಲೀಗ್​ನಲ್ಲಿ ಆಡುತ್ತಿದ್ದಾರೆ. ಅಲ್ಲದೆ ಈ ಲೀಗ್​ನಲ್ಲಿ ಆಡುವ ಸಲುವಾಗಿ ಹಲವು ಆಟಗಾರರು ರಾಷ್ಟ್ರೀಯ ತಂಡದಿಂದಲೂ ನಿವೃತ್ತಿಯನ್ನೂ ಪಡೆದಿದ್ದಾರೆ. ಹಾಗೆಯೇ ಈ ವರ್ಷ ಸೌದಿ ಅರೇಬಿಯಾ 2036 ರ ಫಿಫಾ ವಿಶ್ವಕಪ್‌ಗೆ ಬಿಡ್ ಸಹ ಸಲ್ಲಿಸುತ್ತಿದೆ.

ಡಿ. 19 ರಂದು ಐಪಿಎಲ್ ಮಿನಿ ಹರಾಜು

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಈಗಾಗಲೇ 16 ಸೀಸನ್​ಗಳನ್ನು ಕಂಡಿದೆ. 17ನೇ ಸೀಸನ್ ಮುಂದಿನ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ಮಿನಿ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಎಲ್ಲಾ 10 ತಂಡಗಳಿಗೂ ಹರಾಜಿಗೂ ಮೊದಲು ಆಟಗಾರರ ಧಾರಣೆಗಾಗಿ ನವೆಂಬರ್ 26ರವರೆಗೆ ಗಡುವು ನೀಡಲಾಗಿದೆ. ಅಲ್ಲದೆ ಈ ಭಾರಿ ಪರ್ಸ್​ ಗಾತ್ರವನ್ನು ಹೆಚ್ಚಿಸಲಾಗಿದ್ದು, ಪ್ರತಿ ತಂಡಗಳಿಗೆ 95 ಕೋಟಿ ರೂ. ಬದಲಾಗಿ 100 ಕೋಟಿ ರೂಗಳನ್ನು ನೀಡಲಾಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:03 am, Sat, 4 November 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ