AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 4300 ಕೋಟಿ ರೂ: ಐಪಿಎಲ್​ಗೆ ಟಕ್ಕರ್ ಕೊಡಲು ಸೌದಿ ಅರೇಬಿಯಾ ಪ್ಲ್ಯಾನ್

2034 ರಲ್ಲಿ ಫಿಫಾ ಫುಟ್​ಬಾಲ್ ವಿಶ್ವಕಪ್ ಅನ್ನು ಆಯೋಜಿಸಲು ಸಿದ್ಧವಾಗುತ್ತಿರುವ ಸೌದಿ ಅರೇಬಿಯಾ ಇದೀಗ ಕ್ರಿಕೆಟ್ ಜಗತ್ತಿಗೂ ಕಾಲಿಡಲು ಮುಂದಾಗುತ್ತಿದೆ. ಅದು ಬರೋಬ್ಬರಿ 4300 ಕೋಟಿ ರೂ. ಹೂಡಿಕೆ ಮಾಡುವುದರೊಂದಿಗೆ. ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ನಂತ ಸೌದಿ ಅರೇಬಿಯಾ ಮತ್ತೊಂದು ಟಿ20 ಲೀಗ್​ ಅನ್ನು ಪರಿಚಯಿಸಲು ಸಜ್ಜಾಗುತ್ತಿದೆ.

ಬರೋಬ್ಬರಿ 4300 ಕೋಟಿ ರೂ: ಐಪಿಎಲ್​ಗೆ ಟಕ್ಕರ್ ಕೊಡಲು ಸೌದಿ ಅರೇಬಿಯಾ ಪ್ಲ್ಯಾನ್
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Mar 17, 2025 | 9:04 AM

Share

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಟಕ್ಕರ್ ಕೊಡಲು ಸೌದಿ ಅರೇಬಿಯಾ ತೆರೆಮರೆಯಲ್ಲೇ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಆರಂಭಿಕ ರೂಪುರೇಷೆಗಳು ಸಿದ್ಧವಾಗಿದ್ದು, ಇದರ ಅನುಮೋದನೆಗಾಗಿ ಶೀಘ್ರದಲ್ಲೇ ಐಸಿಸಿಗೆ ಯೋಜನೆಯ ವಿವರಗಳನ್ನು ಕಳುಹಿಸಲಾಗುತ್ತದೆ ಎಂದು ವರದಿಯಾಗಿದೆ.

ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿ:

ಹೊಸ ಟಿ20 ಲೀಗ್ ಅನ್ನು ಸೌದಿ ಅರೇಬಿಯಾ ಟೆನಿಸ್ ಟೂರ್ನಿ ಗ್ರ್ಯಾಂಡ್ ಸ್ಲ್ಯಾಮ್​ನಂತೆ ಆಯೋಜಿಸಲು ಯೋಜನೆ ರೂಪಿಸಿದೆ. ಅದರಂತೆ ಎಲ್ಲಾ ತಂಡಗಳು ವರ್ಷದಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ಕಣಕ್ಕಿಳಿಯಲಿವೆ. ಇದಾದ ನಂತರ ಸೌದಿ ಅರೇಬಿಯಾದಲ್ಲಿ ಫೈನಲ್ ಪಂದ್ಯ ಜರುಗಲಿದೆ.

8 ತಂಡಗಳು:

ಸೌದಿ ಅರೇಬಿಯಾ ಪ್ರಸ್ತುತ ಪಡಿಸಲಿರುವ ಹೊಸ ಟಿ20 ಲೀಗ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈಗಾಗಲೇ ಈ ಟೂರ್ನಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ನಿಂದ ಬಾಹ್ಯ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ ಹಾಗೂ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ಗಳಿಂದ ಸಹ ಈ ಟೂರ್ನಿಗೆ ಬೆಂಬಲ ಸಿಗುವುದು ಖಚಿತ ಎನ್ನಬಹುದು.

4300 ಕೋಟಿ ರೂ:

ನೂತನ ಲೀಗ್​ಗಾಗಿ ಸೌದಿ ಅರೇಬಿಯಾ ಬರೋಬ್ಬರಿ 4300 ಕೋಟಿ ರೂ.ಗಳನ್ನು ಖರ್ಚು ಮಾಡಲಿದೆ. ಇದಕ್ಕಾಗಿ ಸೌದಿ ಅರೇಬಿಯಾದ ಡ್ಯಾನಿ ಟೌನ್‌ಸೆಂಡ್ ನೇತೃತ್ವದ ಎಸ್‌ಆರ್‌ಜೆ ಸ್ಪೋರ್ಟ್ಸ್ ಇನ್ವೆಸ್ಟ್‌ಮೆಂಟ್‌ ಹೂಡಿಕೆ ಮಾಡಲಿದೆ. ಈ ಮೂಲಕ ಸೌದಿ ಅರೇಬಿಯಾ ಕ್ರಿಕೆಟ್​ ಜಗತ್ತಿನಲ್ಲಿ ತನ್ನ ಛಾಪು ಮೂಡಿಸಲು ಮುಂದಾಗುತ್ತಿದೆ.

ಆಸ್ಟ್ರೇಲಿಯನ್ ಮೈಂಡ್:

ಸೌದಿ ಅರೇಬಿಯಾ ಆಯೋಜಿಸಲಿರುವ ಹೊಸ ಟಿ20 ಲೀಗ್​ನ ಹಿಂದಿರುವುದು ಆಸ್ಟ್ರೇಲಿಯಾದ ಕ್ರಿಕೆಟ್ ತಜ್ಞ ನೀಲ್ ಮ್ಯಾಕ್ಸ್‌ವೆಲ್‌. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗನಾಗಿರುವ ನೀಲ್ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯನ್ ಕ್ರಿಕೆಟಿಗರ ಸಂಘ ಮತ್ತು ಕ್ರಿಕೆಟ್ NSW ಸೇರಿದಂತೆ ವಿವಿಧ ಕ್ರಿಕೆಟ್ ಮಂಡಳಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಸೌದಿ ಅರೇಬಿಯಾ ಲೀಗ್​ಗಾಗಿ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದಾರೆ.

ಹೊಸ ಲೀಗ್​ನ ಉದ್ದೇಶವೇನು?

ಪ್ರಸ್ತುತ ಕ್ರಿಕೆಟ್ ಅಂಗಳದ ಬಲಿಷ್ಠ ರಾಷ್ಟ್ರಗಳೆಂದರೆ ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್. ಈ ರಾಷ್ಟ್ರಗಳನ್ನು ಹೊರತುಪಡಿಸಿ ಇತರ ಕ್ರಿಕೆಟ್ ಆಡುವ ದೇಶಗಳನ್ನು ಆರ್ಥಿಕವಾಗಿ ಬಲಪಡಿಸಲು ಗುರಿಯನ್ನು ನೂತನ ಲೀಗ್ ಹೊಂದಿದೆ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ಈ ಲೀಗ್ ಮೂಲಕ ಹೊಸ ಆದಾಯದ ಮೂಲ ತೆರೆದುಕೊಳ್ಳಲಿದ್ದು, ಹಣಕಾಸಿಗಾಗಿ ಕಷ್ಟಪಡುತ್ತಿರುವ ಮಂಡಳಿಗಳಿಗೆ ಇದರಿಂದ ಸಹಾಯವಾಗಲಿದೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಬಿಗ್ ಬ್ಯಾಷ್ ಲೀಗ್​ಗೆ ಪರ್ಯಾಯಾವಾಗಿ ಮತ್ತೊಂದು ಶ್ರೀಮಂತ ಕ್ರಿಕೆಟ್​ ಟೂರ್ನಿಯನ್ನು ಪರಿಚಯಿಸಲು ಸೌದಿ ಅರೇಬಿಯಾ ಮುಂದಾಗುತ್ತಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ