AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ

IND vs AUS Final, ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ
ಮೈದಾನಕ್ಕೆ ನುಗ್ಗಿದ ಅಭಿಮಾನಿ
ಗಂಗಾಧರ​ ಬ. ಸಾಬೋಜಿ
|

Updated on:Nov 19, 2023 | 5:27 PM

Share

ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ (ICC World Cup 2023) ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ. ಪ್ಯಾಲೆಸ್ಟೀನ್‌ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತ ನನ್ನು ಬಂಧಿಸಲಾಗಿದೆ. ನಂತರ ಪಂದ್ಯವನ್ನು ಪುನರಾರಂಭಿಸಲಾಗಿದೆ.

ವಿಶ್ವಕಪ್​​ ಫೈನಲ್​ನಲ್ಲಿ ಅಹಮದಾಬಾದ್​ ನಗರ ಸೇರಿದಂತೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿ ಆಗಿದೆ. ಅದರ ಮಧ್ಯೆಯೂ ಭದ್ರತಾ ಲೋಪ ಉಂಟಾಗಿದೆ.

ಎಎನ್​ಐ ಟ್ವೀಟ್​ 

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡು ತಂಡಗಳು ಸದ್ಯ ಮೈದಾನದಲ್ಲಿ ಮುಖಾಮುಖಿಯಾಗಿವೆ. ಭಾರತವು ತನ್ನ ಮೂರನೇ ODI ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಆದರೆ ಆಸ್ಟ್ರೇಲಿಯಾ ದಾಖಲೆಯ ಆರನೇ ವಿಜಯಕ್ಕಾಗಿ ಹಾತೊರೆಯುತ್ತಿದೆ.

ಇದನ್ನೂ ಓದಿ: IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

30 ಓವರ್​ಗಳ ಮುಕ್ತಾಯದ ವೇಳೆಗೆ 150 ರನ್ ಪೂರೈಸಿದ ಟೀಮ್ ಇಂಡಿಯಾ. 4 ವಿಕೆಟ್ ಕಬಳಿಸುವಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

12 ವರ್ಷಗಳ ಬಳಿಕ ತವರಿನಲ್ಲಿ ವಿಶ್ವಕಪ್ ಗೆಲ್ಲೋದಕ್ಕೆ ಭಾರತ ತಂಡ ಪಣತೊಟ್ಟಿದೆ. ಈ ಸಲ ಕಪ್ ನಮ್ದೇ ಅನ್ನೋ ಕೂಗು ಹಳ್ಳಿಯಿಂದ ದಿಲ್ಲಿವರೆಗೂ ಸದ್ದುಮಾಡ್ತಿದ್ದು, ಭಾರತದ ಗೆಲುವಿಗೆ ಅಭಿಮಾನಿಗಳು ದೇಗುಲಗಳಲ್ಲಿ ಪೂಜೆ, ಹವನಗಳು ಮಾಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Sun, 19 November 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ