AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ

IND vs AUS Final, ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ
ಮೈದಾನಕ್ಕೆ ನುಗ್ಗಿದ ಅಭಿಮಾನಿ
ಗಂಗಾಧರ​ ಬ. ಸಾಬೋಜಿ
|

Updated on:Nov 19, 2023 | 5:27 PM

Share

ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ (ICC World Cup 2023) ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ. ಪ್ಯಾಲೆಸ್ಟೀನ್‌ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತ ನನ್ನು ಬಂಧಿಸಲಾಗಿದೆ. ನಂತರ ಪಂದ್ಯವನ್ನು ಪುನರಾರಂಭಿಸಲಾಗಿದೆ.

ವಿಶ್ವಕಪ್​​ ಫೈನಲ್​ನಲ್ಲಿ ಅಹಮದಾಬಾದ್​ ನಗರ ಸೇರಿದಂತೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿ ಆಗಿದೆ. ಅದರ ಮಧ್ಯೆಯೂ ಭದ್ರತಾ ಲೋಪ ಉಂಟಾಗಿದೆ.

ಎಎನ್​ಐ ಟ್ವೀಟ್​ 

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡು ತಂಡಗಳು ಸದ್ಯ ಮೈದಾನದಲ್ಲಿ ಮುಖಾಮುಖಿಯಾಗಿವೆ. ಭಾರತವು ತನ್ನ ಮೂರನೇ ODI ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಆದರೆ ಆಸ್ಟ್ರೇಲಿಯಾ ದಾಖಲೆಯ ಆರನೇ ವಿಜಯಕ್ಕಾಗಿ ಹಾತೊರೆಯುತ್ತಿದೆ.

ಇದನ್ನೂ ಓದಿ: IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

30 ಓವರ್​ಗಳ ಮುಕ್ತಾಯದ ವೇಳೆಗೆ 150 ರನ್ ಪೂರೈಸಿದ ಟೀಮ್ ಇಂಡಿಯಾ. 4 ವಿಕೆಟ್ ಕಬಳಿಸುವಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

12 ವರ್ಷಗಳ ಬಳಿಕ ತವರಿನಲ್ಲಿ ವಿಶ್ವಕಪ್ ಗೆಲ್ಲೋದಕ್ಕೆ ಭಾರತ ತಂಡ ಪಣತೊಟ್ಟಿದೆ. ಈ ಸಲ ಕಪ್ ನಮ್ದೇ ಅನ್ನೋ ಕೂಗು ಹಳ್ಳಿಯಿಂದ ದಿಲ್ಲಿವರೆಗೂ ಸದ್ದುಮಾಡ್ತಿದ್ದು, ಭಾರತದ ಗೆಲುವಿಗೆ ಅಭಿಮಾನಿಗಳು ದೇಗುಲಗಳಲ್ಲಿ ಪೂಜೆ, ಹವನಗಳು ಮಾಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Sun, 19 November 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ