AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ

IND vs AUS Final, ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ
ಮೈದಾನಕ್ಕೆ ನುಗ್ಗಿದ ಅಭಿಮಾನಿ
ಗಂಗಾಧರ​ ಬ. ಸಾಬೋಜಿ
|

Updated on:Nov 19, 2023 | 5:27 PM

Share

ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ (ICC World Cup 2023) ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ. ಪ್ಯಾಲೆಸ್ಟೀನ್‌ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತ ನನ್ನು ಬಂಧಿಸಲಾಗಿದೆ. ನಂತರ ಪಂದ್ಯವನ್ನು ಪುನರಾರಂಭಿಸಲಾಗಿದೆ.

ವಿಶ್ವಕಪ್​​ ಫೈನಲ್​ನಲ್ಲಿ ಅಹಮದಾಬಾದ್​ ನಗರ ಸೇರಿದಂತೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿ ಆಗಿದೆ. ಅದರ ಮಧ್ಯೆಯೂ ಭದ್ರತಾ ಲೋಪ ಉಂಟಾಗಿದೆ.

ಎಎನ್​ಐ ಟ್ವೀಟ್​ 

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡು ತಂಡಗಳು ಸದ್ಯ ಮೈದಾನದಲ್ಲಿ ಮುಖಾಮುಖಿಯಾಗಿವೆ. ಭಾರತವು ತನ್ನ ಮೂರನೇ ODI ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಆದರೆ ಆಸ್ಟ್ರೇಲಿಯಾ ದಾಖಲೆಯ ಆರನೇ ವಿಜಯಕ್ಕಾಗಿ ಹಾತೊರೆಯುತ್ತಿದೆ.

ಇದನ್ನೂ ಓದಿ: IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

30 ಓವರ್​ಗಳ ಮುಕ್ತಾಯದ ವೇಳೆಗೆ 150 ರನ್ ಪೂರೈಸಿದ ಟೀಮ್ ಇಂಡಿಯಾ. 4 ವಿಕೆಟ್ ಕಬಳಿಸುವಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

12 ವರ್ಷಗಳ ಬಳಿಕ ತವರಿನಲ್ಲಿ ವಿಶ್ವಕಪ್ ಗೆಲ್ಲೋದಕ್ಕೆ ಭಾರತ ತಂಡ ಪಣತೊಟ್ಟಿದೆ. ಈ ಸಲ ಕಪ್ ನಮ್ದೇ ಅನ್ನೋ ಕೂಗು ಹಳ್ಳಿಯಿಂದ ದಿಲ್ಲಿವರೆಗೂ ಸದ್ದುಮಾಡ್ತಿದ್ದು, ಭಾರತದ ಗೆಲುವಿಗೆ ಅಭಿಮಾನಿಗಳು ದೇಗುಲಗಳಲ್ಲಿ ಪೂಜೆ, ಹವನಗಳು ಮಾಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Sun, 19 November 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ