AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ

IND vs AUS Final, ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ
ಮೈದಾನಕ್ಕೆ ನುಗ್ಗಿದ ಅಭಿಮಾನಿ
ಗಂಗಾಧರ​ ಬ. ಸಾಬೋಜಿ
|

Updated on:Nov 19, 2023 | 5:27 PM

Share

ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ (ICC World Cup 2023) ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ. ಪ್ಯಾಲೆಸ್ಟೀನ್‌ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತ ನನ್ನು ಬಂಧಿಸಲಾಗಿದೆ. ನಂತರ ಪಂದ್ಯವನ್ನು ಪುನರಾರಂಭಿಸಲಾಗಿದೆ.

ವಿಶ್ವಕಪ್​​ ಫೈನಲ್​ನಲ್ಲಿ ಅಹಮದಾಬಾದ್​ ನಗರ ಸೇರಿದಂತೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿ ಆಗಿದೆ. ಅದರ ಮಧ್ಯೆಯೂ ಭದ್ರತಾ ಲೋಪ ಉಂಟಾಗಿದೆ.

ಎಎನ್​ಐ ಟ್ವೀಟ್​ 

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡು ತಂಡಗಳು ಸದ್ಯ ಮೈದಾನದಲ್ಲಿ ಮುಖಾಮುಖಿಯಾಗಿವೆ. ಭಾರತವು ತನ್ನ ಮೂರನೇ ODI ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಆದರೆ ಆಸ್ಟ್ರೇಲಿಯಾ ದಾಖಲೆಯ ಆರನೇ ವಿಜಯಕ್ಕಾಗಿ ಹಾತೊರೆಯುತ್ತಿದೆ.

ಇದನ್ನೂ ಓದಿ: IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

30 ಓವರ್​ಗಳ ಮುಕ್ತಾಯದ ವೇಳೆಗೆ 150 ರನ್ ಪೂರೈಸಿದ ಟೀಮ್ ಇಂಡಿಯಾ. 4 ವಿಕೆಟ್ ಕಬಳಿಸುವಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

12 ವರ್ಷಗಳ ಬಳಿಕ ತವರಿನಲ್ಲಿ ವಿಶ್ವಕಪ್ ಗೆಲ್ಲೋದಕ್ಕೆ ಭಾರತ ತಂಡ ಪಣತೊಟ್ಟಿದೆ. ಈ ಸಲ ಕಪ್ ನಮ್ದೇ ಅನ್ನೋ ಕೂಗು ಹಳ್ಳಿಯಿಂದ ದಿಲ್ಲಿವರೆಗೂ ಸದ್ದುಮಾಡ್ತಿದ್ದು, ಭಾರತದ ಗೆಲುವಿಗೆ ಅಭಿಮಾನಿಗಳು ದೇಗುಲಗಳಲ್ಲಿ ಪೂಜೆ, ಹವನಗಳು ಮಾಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Sun, 19 November 23

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ