ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಮತ್ತೊಂದು ಪಂದ್ಯದ ದಿನಾಂಕ ಬದಲು?

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿದೆ.

ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಮತ್ತೊಂದು ಪಂದ್ಯದ ದಿನಾಂಕ ಬದಲು?
Pakistan Team
Follow us
| Updated By: ಝಾಹಿರ್ ಯೂಸುಫ್

Updated on: Aug 05, 2023 | 10:19 PM

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ವೇಳಾಪಟ್ಟಿ ಐಸಿಸಿ (ICC) ಮತ್ತು ಬಿಸಿಸಿಐಗೆ (BCCI) ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಬಿಸಿಸಿಐ ಈಗಾಗಲೇ ವಿಶ್ವಕಪ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೀಗ ದಿನಾಂಕದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ. ಅದರಂತೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ದಿನಾಂಕ ಬದಲಾಗುವುದು ಖಚಿತವಾಗಿದೆ. ಇದರ ಬೆನ್ನಲ್ಲೇ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಬೇಕಿರುವ ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯದ ದಿನಾಂಕವನ್ನು ಬದಲಿಸಬೇಕೆಂಬ ಬೇಡಿಕೆಯನ್ನು ಕೊಲ್ಕತ್ತಾದ ಪೊಲೀಸರು ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಹೈವೋಲ್ಟೇಜ್ ಪಂದ್ಯದ ದಿನಾಂಕ ಬದಲು:

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 15 ರಂದು ನಿಗದಿಯಾಗಿದ್ದ ಭಾರತ – ಪಾಕಿಸ್ತಾನ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ಜರುಗಲಿದೆ. ಅಂದರೆ ಅಕ್ಟೋಬರ್ 15 ರಂದು ನವರಾತ್ರಿ ಹಬ್ಬ ಶುರುವಾಗಲಿದ್ದು, ಗುಜರಾತ್​ನಾದ್ಯಂತ ಗರ್ಬಾ ಕಾರ್ಯಕ್ರಮಗಳು ನಡೆಯಲಿದೆ. ಹೀಗಾಗಿ ಅಕ್ಟೋಬರ್ 15 ರಂದು ಭಾರತ-ಪಾಕಿಸ್ತಾನ್ ಪಂದ್ಯ ನಡೆದರೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದರು. ಹೀಗಾಗಿ ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

ಇಂಗ್ಲೆಂಡ್-ಪಾಕಿಸ್ತಾನ್ ಪಂದ್ಯಕ್ಕೂ ಇದೇ ಸಮಸ್ಯೆ:

ನವೆಂಬರ್ 12 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯ ನಿಗದಿಯಾಗಿದೆ. ಆದರೆ ಅದೇ ದಿನ ಪಶ್ಚಿಮ ಬಂಗಾಳದಾದ್ಯಂತ ಅದ್ಧೂರಿ ಕಾಳಿ ಪೂಜೆ ನಡೆಯಲಿದೆ. ಇದರಿಂದ ನವೆಂಬರ್ 12 ರಂದು ಪಾಕಿಸ್ತಾನ್-ಇಂಗ್ಲೆಂಡ್ ನಡುವಣ ಪಂದ್ಯಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕೊಲ್ಕತ್ತಾ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಪಂದ್ಯದ ದಿನಾಂಕವನ್ನು ಮರುನಿಗದಿ ಮಾಡುವಂತೆ ಮನವಿ ಮಾಡಲಾಗಿದೆ ಎಂದು ವರದಿಯಾಗಿದೆ.

ಮರುನಿಗದಿಯೇ ದೊಡ್ಡ ಸಮಸ್ಯೆ:

ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ್ ನಡುವಣ ಪಂದ್ಯವನ್ನು ಮರುನಿಗದಿ ಮಾಡುವುದು ಖಚಿತವಾಗಿದೆ. ಆದರೆ ಈ ಮರುನಿಗದಿಯಿಂದಾಗಿ ಒಂದೇ ದಿನ ಒಟ್ಟು 3 ಪಂದ್ಯಗಳು ಜರುಗಲಿದೆ. ಅಂದರೆ ಇದೇ ದಿನಾಂಕದಂದು ಚೆನ್ನೈನಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ಮುಖಾಮುಖಿಯಾಗಲಿದೆ.

ಮತ್ತೊಂದೆಡೆ ಅಕ್ಟೋಬರ್ 14 ರಂದೇ ದೆಹಲಿಯಲ್ಲಿ ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಅಂದರೆ ಮರುನಿಗದಿಯಿಂದಾಗಿ ಒಂದೇ ದಿನ ಮೂರು ಪಂದ್ಯಗಳನ್ನು ಆಯೋಜಿಸಬೇಕಾಗುತ್ತದೆ. ಹೀಗಾಗಿ ಇಂಗ್ಲೆಂಡ್-ಅಫ್ಘಾನಿಸ್ತಾನ್ ಅಥವಾ ನ್ಯೂಝಿಲೆಂಡ್-ಬಾಂಗ್ಲಾದೇಶ್ ನಡುವಣ ಈ ಪಂದ್ಯಗಳಲ್ಲಿ ಒಂದು ಪಂದ್ಯದ ದಿನಾಂಕವನ್ನೂ ಕೂಡ ಬದಲಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

ಇದನ್ನೂ ಓದಿ: ಏಕದಿನ ವಿಶ್ವಕಪ್​ ಸೆಮಿಫೈನಲ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಗ್ಲೆನ್ ಮೆಕ್​ಗ್ರಾಥ್

ಅಲ್ಲದೆ ಪಂದ್ಯದ ದಿನಾಂಕವನ್ನು ಮರುನಿಗದಿ ಮಾಡುವಾಗ, ಆ ತಂಡಗಳ ಮುಂಬರುವ ಪಂದ್ಯಗಳ ದಿನಾಂಕವನ್ನು ಕೂಡ ಪರಿಗಣಿಸಬೇಕಾಗುತ್ತದೆ. ಅಲ್ಲದೆ ತಂಡಗಳಿಗೆ ನೀಡಲಾಗುವ ವಿಶ್ರಾಂತಿ ದಿನಗಳ ಲೆಕ್ಕಾಚಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಪಂದ್ಯಗಳ ಮರುನಿಗದಿಯು ಬಿಸಿಸಿಐಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ