
ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ (Virender Sehwag) ತಮ್ಮ ಕುಚೇಷ್ಟೇಯ ಹೇಳಿಕೆಗಳಿಂದಲೇ ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿರುತ್ತಾರೆ. ಇದೀಗ ಅಂತಹದ್ದೇ ಹೇಳಿಕೆ ನೀಡಿರುವ ಸಿಡಿಲಮರಿ ಖ್ಯಾತಿಯ ವೀರೇಂದ್ರ ಸೆಹ್ವಾಗ್ ಆರ್ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಐಪಿಎಲ್ 2025ಕ್ಕೆ (IPL 2025) ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸೆಹ್ವಾಗ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಕಳಪೆ ಎಂದು ಕರೆದಿದ್ದಾರೆ. ವೀರೇಂದ್ರ ಸೆಹ್ವಾಗ್ ಲೈವ್ ಕಾರ್ಯಕ್ರಮದಲ್ಲಿ ಆರ್ಸಿಬಿ ತಂಡವನ್ನು ಅಣಕಿಸಿ ಕಳಪೆ ತಂಡಕ್ಕೆ ಹೋಲಿಸಿದ್ದಾರೆ. ಇದೀಗ ಸೆಹ್ವಾಗ್ ಅವರ ಈ ರೀತಿಯ ಹೇಳಿಕೆಯೂ ಅಸಂಖ್ಯಾತ ಆರ್ಸಿಬಿ ಅಭಿಮಾನಿಗಳು ಕೆರಳುವಂತೆ ಮಾಡಿದೆ.
ಕ್ರಿಕ್ಬಜ್ ಕಾರ್ಯಕ್ರಮದಲ್ಲಿ ಐಪಿಎಲ್ 2025 ರ ಪಾಯಿಂಟ್ ಟೇಬಲ್ ಕುರಿತು ಕಾಮೆಂಟ್ ಮಾಡುವ ಸಂದರ್ಭದಲ್ಲಿ ಸೆಹ್ವಾಗ್, ‘ಬಡ ತಂಡ ಸ್ವಲ್ಪ ಸಮಯದವರೆಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರಲಿ ಬಿಡಿ, ಈ ಬಡ ತಂಡ ಎಷ್ಟು ಕಾಲ ಮೇಲಿರುತ್ತಾರೆಂದು ಯಾರಿಗೂ ತಿಳಿದಿಲ್ಲ. ನಾನು ಹಣದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಈ ಎಲ್ಲಾ ತಂಡಗಳು ತುಂಬಾ ಶ್ರೀಮಂತವಾಗಿವೆ. ಪ್ರತಿಯೊಂದು ತಂಡವು ಒಂದು ಸೀಸನ್ನಲ್ಲಿ 400-500 ಕೋಟಿ ರೂ. ಗಳಿಸುತ್ತದೆ. ನಾನು ಅದರ ಬಗ್ಗೆ ಮಾತನಾಡುತ್ತಿಲ್ಲ. ನಾನು ಇಲ್ಲಿ ಒಂದೇ ಒಂದು ಟ್ರೋಫಿಯನ್ನು ಗೆಲ್ಲದಿರುವ ಬಗ್ಗೆ ಮಾತನಾಡುತ್ತಿದ್ದೇನೆ. ಅದಕ್ಕಾಗಿಯೇ ನಾನು ಆರ್ಸಿಬಿಯನ್ನು ಬಡ ತಂಡ ಎಂದು ಕರೆಯುತ್ತಿದ್ದೇನೆ ಎಂದಿದ್ದಾರೆ.
Bengaluru Traffic Advisory: ಬೆಂಗಳೂರಿನಲ್ಲಿ ಆರ್ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ
ಆರ್ಸಿಬಿ ಐಪಿಎಲ್ನಲ್ಲಿ ಅತ್ಯಂತ ಜನಪ್ರಿಯ ತಂಡವಾಗಿರಬಹುದು ಆದರೆ ಈ ಫ್ರಾಂಚೈಸಿ ಇನ್ನೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ ಎಂಬುದು ನಿಜ. ಆದರೆ, ಈ ಬಾರಿ ಈ ತಂಡ ವಿಭಿನ್ನ ಶೈಲಿಯಲ್ಲಿ ಕ್ರಿಕೆಟ್ ಆಡುತ್ತಿದೆ. ಮೊದಲ ಎರಡು ಪಂದ್ಯಗಳಲ್ಲಿ ಆರ್ಸಿಬಿ ಬ್ಯಾಟಿಂಗ್ಗಿಂತ ಬೌಲಿಂಗ್ನಲ್ಲಿಯೇ ಹೆಚ್ಚು ಮೇಲುಗೈ ಸಾಧಿಸಿದ್ದು, ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಹೊಸ ನಾಯಕ ರಜತ್ ಪಾಟಿದಾರ್ ಮತ್ತು ವಿರಾಟ್ ಕೊಹ್ಲಿ ತುಂಬಾ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಫಿಲ್ ಸಾಲ್ಟ್ ಕೂಡ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ. ಟಿಮ್ ಡೇವಿಡ್ ಕೂಡ ಉತ್ತಮ ಫಾರ್ಮ್ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಸೀಸನ್ನಲ್ಲಿ ಆರ್ಸಿಬಿ ಐಪಿಎಲ್ ಚಾಂಪಿಯನ್ ಆಗಲು ಉತ್ತಮ ಅವಕಾಶವನ್ನು ಹೊಂದಿದೆ. ಒಂದು ವೇಳೆ ಆರ್ಸಿಬಿ ಚಾಂಪಿಯನ್ ಆದರೆ ಸೆಹ್ವಾಗ್ ಈ ತಂಡವನ್ನು ಕಳಪೆ ಎಂದು ಕರೆಯುತ್ತಾರೋ ಇಲ್ಲವೋ ಎಂದು ನೋಡಲು ಆಸಕ್ತಿದಾಯಕವಾಗಿರುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:14 pm, Tue, 1 April 25