AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟೀಮ್ ಇಂಡಿಯಾ ಆರಂಭಿಕರು ಯಾರಾಗಬೇಕೆಂದು ತಿಳಿಸಿದ ಸೆಹ್ವಾಗ್

T20 World Cup 2021: ರಾಹುಲ್ ಪಂಜಾಬ್ ಕಿಂಗ್ಸ್ ಪರ 13 ಪಂದ್ಯಗಳಲ್ಲಿ 626 ರನ್ ಗಳಿಸಿದ್ದಾರೆ. ಹೀಗಾಗಿ ಈ ಅದ್ಭುತ ಫಾರ್ಮ್​ ಟೀಮ್ ಇಂಡಿಯಾಗೆ ಪ್ಲಸ್​ ಪಾಯಿಂಟ್ ಆಗಲಿದೆ ಎಂದಿದ್ದಾರೆ.

T20 World Cup 2021: ಟೀಮ್ ಇಂಡಿಯಾ ಆರಂಭಿಕರು ಯಾರಾಗಬೇಕೆಂದು ತಿಳಿಸಿದ ಸೆಹ್ವಾಗ್
Virender Sehwag
TV9 Web
| Edited By: |

Updated on: Oct 17, 2021 | 7:28 PM

Share

ಟಿ20 ವಿಶ್ವಕಪ್ (T20 World Cup 2021)​ ಶುರುವಾಗಿದೆ. ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 23 ರಿಂದ ಸೂಪರ್ 12 ಪಂದ್ಯಗಳು ಆರಂಭವಾಗಲಿದೆ. ಇನ್ನು ಅಕ್ಟೋಬರ್ 24 ರಂದು ಭಾರತ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯೋದು ಯಾರು ಎಂಬುದು ಈಗ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಈ ವರ್ಷದ ಮಾರ್ಚ್‌ನಲ್ಲಿ ನಡೆದ ಇಂಗ್ಲೆಂಡ್ ಸರಣಿಯಲ್ಲಿ, ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಜೊತೆ ಓಪನ್ ಮಾಡುವುದಾಗಿ ತಿಳಿಸಿದ್ದರು. ಇದೇ ಕಾರಣದಿಂದ ಕೊಹ್ಲಿ ಐಪಿಎಲ್‌ನಲ್ಲಿ ದೇವದತ್ ಪಡಿಕ್ಕಲ್‌ನೊಂದಿಗೆ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಟಿ20 ವಿಶ್ವಕಪ್​ನಲ್ಲಿ ಅಪ್ಪಿ ತಪ್ಪಿಯೂ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಬಾರದು ಎಂದಿದ್ದಾರೆ ಭಾರತ ತಂಡ ಮಾಜಿ ಡ್ಯಾಶಿಂಗ್ ಓಪನರ್ ವಿರೇಂದ್ರ ಸೆಹ್ವಾಗ್.

ನನ್ನ ಪ್ರಕಾರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಬೇಕು. ನಾನೇನಾದರೂ ಟೀಮ್ ಇಂಡಿಯಾ ಸಹಾಯಕ ಸಿಬ್ಬಂದಿಯಲ್ಲಿದಿದ್ದರೆ, ಕ್ಯಾಪ್ಟನ್​ಗೆ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಹೇಳುತ್ತಿದ್ದೆ. ಅಷ್ಟೇ ಅಲ್ಲದೆ ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ ಅವರನ್ನು ಆರಂಭಿಕನಾಗಿ ಆಯ್ಕೆ ಮಾಡುತ್ತಿದ್ದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಪಂಜಾಬ್ ಕಿಂಗ್ಸ್ ಪರ ರಾಹುಲ್ ಭರ್ಜರಿ ಫಾರ್ಮ್​ ಪ್ರದರ್ಶಿಸಿದ್ದಾರೆ. ಹೀಗಾಗಿ ನನ್ನ ಪ್ರಕಾರ ರೋಹಿತ್-ರಾಹುಲ್ ಓಪನರ್​ಗಳಾಗುವುದು ಉತ್ತಮ ಎಂದು ಸೆಹ್ವಾಗ್ ಹೇಳಿದ್ದಾರೆ. ಕೊಹ್ಲಿಗೆ ಮೂರನೇ ಸ್ಥಾನದಲ್ಲಿ ಆಡಬೇಕು ಎಂದು ಹೇಳುವವರು ಯಾರೂ ಇಲ್ಲ ಎಂದು ನಾನು ಭಾವಿಸುವುದಿಲ್ಲ. ಬಿಗ್ ಕ್ಯಾಪ್ಟನ್ಸ್​ ಎನಿಸಿಕೊಂಡಿರುವ ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಅಥವಾ ಧೋನಿ ಇವರಲ್ಲಿ 2-3 ಮಂದಿ ಹೇಳಿದ್ರೂ ಕೊಹ್ಲಿ ಕೇಳ್ತಾರೆ ಎಂದು ಸೆಹ್ವಾಗ್ ತಿಳಿಸಿದರು.

ಭಾರತದ ಮಾಜಿ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಪ್ರಕಾರ ಕೆಎಲ್ ರಾಹುಲ್ ಅವರು ಉತ್ತಮ ಫಾರ್ಮ್​​ನಲ್ಲಿದ್ದು, ಹೀಗಾಗಿ ರೋಹಿತ್ ಜೊತೆ ರಾಹುಲ್ ಓಪನ್ ಮಾಡಬೇಕು. ಏಕೆಂದರೆ ರಾಹುಲ್ ಪಂಜಾಬ್ ಕಿಂಗ್ಸ್ ಪರ 13 ಪಂದ್ಯಗಳಲ್ಲಿ 626 ರನ್ ಗಳಿಸಿದ್ದಾರೆ. ಹೀಗಾಗಿ ಈ ಅದ್ಭುತ ಫಾರ್ಮ್​ ಟೀಮ್ ಇಂಡಿಯಾಗೆ ಪ್ಲಸ್​ ಪಾಯಿಂಟ್ ಆಗಲಿದೆ ಎಂದಿದ್ದಾರೆ.

ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ

ಇದನ್ನೂ ಓದಿ: IPL 2021: ಈ ಬಾರಿಯ ಐಪಿಎಲ್​ನಲ್ಲಿ ಕಾರು ಸಿಕ್ಕಿದ್ದು ಯಾರಿಗೆ ಗೊತ್ತಾ?

ಇದನ್ನೂ ಓದಿ: IPL 2021 award winners: ಯಾರಿಗೆ ಯಾವ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

(sehwag names india batsman who should open with rohit sharma at t20 wc)

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ