AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಓವರ್​ಗಳಲ್ಲಿ 564 ರನ್​: 477 ರನ್​ಗಳ ಅಮೋಘ ಜಯ

Selangor vs Putrajaya: ಮಲೇಷ್ಯಾದ ರಾಜ್ಯ ತಂಡಗಳ ಅಂಡರ್-19 ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಗರಿಷ್ಠ ಮೊತ್ತದ ದಾಖಲೆಯೊಂದಿಗೆ. ಇದರ ಜೊತೆಗೆ ಏಕದಿನ ಪಂದ್ಯದಲ್ಲಿ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ಭರ್ಜರಿ ರೆಕಾರ್ಡ್​ ಕೂಡ ನಿರ್ಮಾಣವಾಗಿದೆ.

50 ಓವರ್​ಗಳಲ್ಲಿ 564 ರನ್​: 477 ರನ್​ಗಳ ಅಮೋಘ ಜಯ
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on:Oct 06, 2025 | 11:58 AM

Share

ಏಕದಿನ ಕ್ರಿಕೆಟ್​ನಲ್ಲಿ 500 ರನ್​ಗಳಿಸಲು ಸಾಧ್ಯವೇ? ಸಾಧ್ಯ ಎಂದು ನಿರೂಪಿಸಿದ್ದಾರೆ ಸೆಲಂಗೋರ್ ಅಂಡರ್-19 ತಂಡ. ಮಲೇಷ್ಯಾದ ಅಂಡರ್-19 ಏಕದಿನ ಟೂರ್ನಿಯಲ್ಲಿ ಸೆಲಂಗೋರ್ ಹಾಗೂ ಪುತ್ರಜಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೆಲಂಗೋರ್ ತಂಡವು 50 ಓವರ್​ಗಳಲ್ಲಿ ಬರೋಬ್ಬರಿ 564 ರನ್ ಕಲೆಹಾಕಿದ್ದಾರೆ.

ಪಂದ್ಯದ ಮೊದಲ ಓವರ್​ನಿಂದಲೇ ಪುತ್ರಜಯ ತಂಡದ ಬೌಲರ್​ಗಳ ವಿರುದ್ಧ ಸೆಲಂಗೋರ್ ದಾಂಡಿಗರು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಮುಖ್ಯವಾಗಿ ಮುಹಮ್ಮದ್ ಅಕ್ರಮ್ ವಿಸ್ಫೋಟಕ ಇನಿಂಗ್ಸ್ ಆಡಿದ್ದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಅಕ್ರಮ್ ಪುತ್ರಜಯ ಬೌಲರ್​ಗಳ ಬೆಂಡೆತ್ತಿದರು. ಅಲ್ಲದೆ ಕೇವಲ 97 ಎಸೆತಗಳಲ್ಲಿ ಬರೋಬ್ಬರಿ 217 ರನ್​ಗಳ ಇನಿಂಗ್ಸ್ ಆಡಿದರು. ಈ ದ್ವಿಶತಕದ ನೆರವಿನೊಂದಿಗೆ ಸೆಲಂಗೋರ್ ತಂಡವು 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 564 ರನ್ ಕಲೆಹಾಕಿತು.

ಮುಹಮ್ಮದ್ ಅಕ್ರಮ್:

477 ರನ್​ಗಳ ಭರ್ಜರಿ ಜಯ:

ಸೆಲಂಗೋರ್ ತಂಡ ನೀಡಿದ 565 ರನ್​ಗಳ ಗುರಿ ಬೆನ್ನತ್ತಿದ ಪುತ್ರಜಯ ತಂಡದ ಬ್ಯಾಟರ್​ಗಳು ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು. ಪರಿಣಾಮ 21.5 ಓವರ್​ಗಳಲ್ಲಿ ಕೇವಲ 87 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೆಲಂಗೋರ್ ತಂಡವು ಬರೋಬ್ಬರಿ 477 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಗೆಲುವಿನೊಂದಿಗೆ ಸೆಲಂಗೋರ್ ತಂಡವು ಮಲೇಷ್ಯಾ ರಾಜ್ಯ ಅಂಡರ್-19 ಟೂರ್ನಿಯಲ್ಲಿ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

ಇದನ್ನೂ ಓದಿ: ೪೦೦ ರನ್ಸ್… ಏಕದಿನ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿಶ್ವ ದಾಖಲೆ

ಹಾಗೆಯೇ ಮಲೇಷ್ಯಾ ಅಂಡರ್-19 ಏಕದಿನ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ತಂಡವೆಂಬ ಭರ್ಜರಿ ದಾಖಲೆಯನ್ನು ಸಹ ನಿರ್ಮಿಸಿದೆ.

Published On - 11:58 am, Mon, 6 October 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ