Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​​ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿ, ಪಾಕ್ ಪರ ಘೋಷಣೆ ಕೂಗಿದ್ದ 7 ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ

ICC World Cup 2023: ದೂರುದಾರರ ಪ್ರಕಾರ, ಆರೋಪಿ ವಿದ್ಯಾರ್ಥಿಗಳು, ಟೀಂ ಇಂಡಿಯಾವನ್ನು ಬೆಂಬಲಿಸಿದಕ್ಕಾಗಿ ನಮ್ಮನ್ನು ನಿಂದಿಸಿ, ಕಿರುಕುಳ ನೀಡಿದ್ದಾರೆ. ಅಲ್ಲದೆ ಆರೋಪಿ ವಿದ್ಯಾರ್ಥಿಗಳು ನಮ್ಮ ಮೇಲೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಶ್ವಕಪ್​​ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿ, ಪಾಕ್ ಪರ ಘೋಷಣೆ ಕೂಗಿದ್ದ 7 ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Nov 28, 2023 | 3:34 PM

ನವೆಂಬರ್ 19 ರಂದು ನಡೆದಿದ್ದ ಏಕದಿನ ವಿಶ್ವಕಪ್​ನ  (ODI World Cup 2023) ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತದ (India vs Australia) ಸೋಲನ್ನು ಸಂಭ್ರಮಿಸಿದ್ದ ಹಾಗೂ ಇದೇ ವೇಳೆ ಪಾಕಿಸ್ತಾನದ (Pakistan) ಪರ ಘೋಷಣೆ ಕೂಗಿದ ಆರೋಪದಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಗುಂಡು ಹಾರಿಸುವುದಾಗಿ ಬೆದರಿಕೆ

ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ಸುದ್ದಿ ಪ್ರಕಾರ, ಶೇರ್-ಎ-ಕಾಶ್ಮೀರ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೂರುದಾರರ ಪ್ರಕಾರ, ಆರೋಪಿ ವಿದ್ಯಾರ್ಥಿಗಳು, ಟೀಂ ಇಂಡಿಯಾವನ್ನು ಬೆಂಬಲಿಸಿದಕ್ಕಾಗಿ ನಮ್ಮನ್ನು ನಿಂದಿಸಿ, ಕಿರುಕುಳ ನೀಡಿದ್ದಾರೆ. ಅಲ್ಲದೆ ಆರೋಪಿ ವಿದ್ಯಾರ್ಥಿಗಳು ನಮ್ಮ ಮೇಲೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಹೊರಗಿನ ವಿದ್ಯಾರ್ಥಿಗಳಲ್ಲಿ ಭಯ ಸೃಷ್ಟಿಯಾಗಿದೆ ಎಂದೂ ದೂರುದಾರರು ಆರೋಪಿಸಿದ್ದಾರೆ.

ಭಾರತದ ವಿರುದ್ಧ ಸತತ 2 ಸೋಲು; ಟಿ20 ಸರಣಿಯಿಂದಲೇ ಹೊರಬಿದ್ದ ಆಸ್ಟ್ರೇಲಿಯಾದ 6 ಆಟಗಾರರು..!

ವರದಿಯ ಪ್ರಕಾರ, ದೂರಿನನ್ವಯ ಪೊಲೀಸರು ಈ ಬಗ್ಗೆ ಈಗಾಗಲೇ ತನಿಖೆ ಪ್ರಾರಂಭಿಸಿದ್ದು, ಶ್ರೀನಗರದ ಗಂದರ್‌ಬಾಲ್ ಪೊಲೀಸ್ ಠಾಣೆಯಲ್ಲಿ ಯುಎಪಿಎ ಸೆಕ್ಷನ್ 13 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ವಿಶ್ವವಿದ್ಯಾಲಯದ ಅಧಿಕಾರಿ ಹೇಳಿದ್ದೇನು?

ಈ ವಿಷಯಕ್ಕೆ ಸಂಬಂಧಿಸಿದಂತೆ ಪಶುವೈದ್ಯಕೀಯ ವಿಜ್ಞಾನದ ಬ್ಯಾಚುಲರ್ ಅಧಿಕಾರಿಯೊಬ್ಬರು ಮಾತನಾಡಿದ್ದು, ಹಾಸ್ಟೆಲ್‌ನಲ್ಲಿ ಸುಮಾರು 300 ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಅವರಲ್ಲಿ 30 ರಿಂದ 40 ವಿದ್ಯಾರ್ಥಿಗಳು ಪಂಜಾಬ್, ರಾಜಸ್ಥಾನ ಮತ್ತು ಇತರ ರಾಜ್ಯಗಳಿಂದ ಬಂದವರಾಗಿದ್ದಾರೆ. ನವೆಂಬರ್ 19 ರಂದು ರಾತ್ರಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು. ಬಳಿಕ ಕಾಶ್ಮೀರದ ಹೊರಗಿನ ವಿದ್ಯಾರ್ಥಿಗಳು, ಸ್ಥಳೀಯ ವಿದ್ಯಾರ್ಥಿಗಳು ಭಾರತದ ಸೋಲನ್ನು ಸಂಭ್ರಮಿಸಿದ್ದಲ್ಲದೆ ನಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳೇ ನೇರವಾಗಿ ಪೊಲೀಸರ ಮೊರೆ ಹೋಗಿದ್ದು, ಘಟನೆಗೆ ಸಂಬಂಧಿಸಿದಂತೆ ಅವರು ಯಾವುದಾದರೂ ಸಾಕ್ಷ್ಯವನ್ನು ನೀಡಿದ್ದಾರೋ ಇಲ್ಲವೋ ಎಂಬುದು ಪೊಲೀಸರಿಗೆ ಮಾತ್ರ ತಿಳಿದಿದೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:31 pm, Tue, 28 November 23

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ