AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ನಮ್ಮ ಗುರಿ ಭಾರತದ ವಿರುದ್ಧ ಗೆಲ್ಲುವುದಲ್ಲ ಎಂದ ಪಾಕ್ ಆಟಗಾರ

India vs Pakistan: ನಾವು ಭಾರತದ ವಿರುದ್ಧ ಗೆದ್ದು, ಆ ಬಳಿಕ ವಿಶ್ವಕಪ್‌ನಲ್ಲಿ ಸೋತರೆ ಅದರಿಂದ ಯಾವುದೇ ಪ್ರಯೋಜನವಿಲ್ಲ. ನನ್ನ ಪ್ರಕಾರ, ಭಾರತ ವಿರುದ್ಧ ಸೋತರೂ, ಆ ಬಳಿಕ ನಾವು ವಿಶ್ವಕಪ್ ಗೆದ್ದರೆ ಸಾಕು.

ODI World Cup 2023: ನಮ್ಮ ಗುರಿ ಭಾರತದ ವಿರುದ್ಧ ಗೆಲ್ಲುವುದಲ್ಲ ಎಂದ ಪಾಕ್ ಆಟಗಾರ
Team India
TV9 Web
| Updated By: ಝಾಹಿರ್ ಯೂಸುಫ್|

Updated on: Jul 04, 2023 | 6:13 PM

Share

ODI World Cup 2023: ಏಕದಿನ ವಿಶ್ವಕಪ್​ಗಾಗಿ ಕೌಂಟ್ ಡೌನ್ ಶುರುವಾದ ಬೆನ್ನಲ್ಲೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂಬ ಚರ್ಚೆಗಳು ಪ್ರಾರಂಭವಾಗಿದೆ. ಅದರಲ್ಲೂ ಅಕ್ಟೋಬರ್ 15 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ್ ಮುಖಾಮುಖಿಯಲ್ಲಿ ಗೆಲ್ಲೋರು ಯಾರು ಎನ್ನುವ ಚರ್ಚೆಗಳು ಜೋರಾಗಿವೆ. ಇತ್ತ ತವರಿನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಗೆಲ್ಲುವ ಫೇವರೇಟ್ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ. ಇದನ್ನು ಪಾಕ್ ತಂಡದ ಆಲ್​ರೌಂಡರ್ ಶಾದಾಬ್ ಖಾನ್ ಕೂಡ ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಶಾದಾಬ್ ಖಾನ್, ತಾಯ್ನಾಡಿನಲ್ಲಿ ಭಾರತವನ್ನು ತಂಡವನ್ನು ಎದುರಿಸುವುದು ದೊಡ್ಡ ಸವಾಲು. ಆದಾಗ್ಯೂ, ಭಾರತದ ವಿರುದ್ಧ ಗೆಲ್ಲುವುದು ನಮ್ಮ ಪ್ರಾಥಮಿಕ ಗುರಿಯಲ್ಲ. ಬದಲಾಗಿ ನಮ್ಮ ಮುಖ್ಯ ಗಮನವು ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವುದರ ಮೇಲೆ ಇರಲಿದೆ ಎಂದು ತಿಳಿಸಿದ್ದಾರೆ.

ನಾವು ಭಾರತದ ವಿರುದ್ಧ ಗೆದ್ದು, ಆ ಬಳಿಕ ವಿಶ್ವಕಪ್‌ ಗೆಲ್ಲುವಲ್ಲಿ ವಿಫಲವಾದರೆ ಅದರಿಂದ ಯಾವುದೇ ಪ್ರಯೋಜನವಿಲ್ಲ. ನನ್ನ ಪ್ರಕಾರ, ಭಾರತ ವಿರುದ್ಧ ಸೋತರೂ, ಆ ಬಳಿಕ ನಾವು ವಿಶ್ವಕಪ್ ಗೆದ್ದರೆ ಸಾಕು. ಅದಕ್ಕಿಂತ ದೊಡ್ಡ ಸಂತೋಷ ಬೇರೆ ಇರುವುದಿಲ್ಲ. ಹೀಗಾಗಿ ಭಾರತದಲ್ಲಿ ವಿಶ್ವಕಪ್ ಗೆಲ್ಲುವುದೇ ನಮ್ಮ ಮುಖ್ಯ ಗುರಿಯಾಗಿರಲಿದೆ ಎಂದು ಶಾದಾಬ್ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ: IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಅಕ್ಟೋಬರ್ 15 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆದ್ದರೂ, ಸೋತರೂ ನಮ್ಮ ಗುರಿ ಮಾತ್ರ ವಿಶ್ವಕಪ್​ ಜಯಿಸುವುದಾಗಿರಲಿದೆ ಎಂದು ಪಾಕ್ ಆಟಗಾರ ಶಾದಾಬ್ ಖಾನ್ ಹೇಳಿದ್ದಾರೆ.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ