AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBಯಿಂದ ಹೊರಬಿದ್ದ ಬೆನ್ನಲ್ಲೇ ಭರ್ಜರಿ ಸೆಂಚುರಿ ಸಿಡಿಸಿದ ಶಹಬಾಝ್ ಅಹ್ಮದ್

Shahbaz Ahmed: ಈ ಹಂತದಲ್ಲಿ ಕಣಕ್ಕಿಳಿದ ಶಹಬಾಝ್ ಅಹ್ಮದ್ ಅತ್ಯುತ್ತಮ ಇನಿಂಗ್ಸ್​ ಆಡಿದರು. ಹರ್ಯಾಣ ಬೌಲರ್​ಗಳನ್ನು ದಿಟ್ಟತನದಿಂದಲೇ ಎದುರಿಸಿದ ಎಡಗೈ ದಾಂಡಿಗ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದರು. ಆದರೆ ಮತ್ತೊಂದೆಡೆ ಬೆಂಗಾಲ್ ತಂಡವು ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

RCBಯಿಂದ ಹೊರಬಿದ್ದ ಬೆನ್ನಲ್ಲೇ ಭರ್ಜರಿ ಸೆಂಚುರಿ ಸಿಡಿಸಿದ ಶಹಬಾಝ್ ಅಹ್ಮದ್
Shahbaz Ahmed
TV9 Web
| Edited By: |

Updated on: Dec 11, 2023 | 2:45 PM

Share

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆದ ವಿಜಯ್ ಹಜಾರೆ ಟೂರ್ನಿಯ ಮೊದಲ ಕ್ವಾರ್ಟರ್​ ಫೈನಲ್​ನಲ್ಲಿ ಶಹಬಾಝ್ ಅಹ್ಮದ್ (Shahbaz Ahmed) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಬೆಂಗಾಲ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಯಾಣ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಬೆಂಗಾಲ್ ತಂಡವು ಉತ್ತಮ ಅರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಅಭಿಷೇಕ್ ಪೊರೆಲ್ (24) ಹಾಗೂ ರಂಜೋತ್ ಸಿಂಗ್ (6) ಬೇಗನೆ ವಿಕೆಟ್ ಒಪ್ಪಿಸಿದರು. ಇನ್ನು ಬೆಂಗಾಲ್ ತಂಡದ ನಾಯಕ ಸುದೀಪ್ ಕೇವಲ 21 ರನ್​ಗಳಿಸಲಷ್ಟೇ ಶಕ್ತರಾದರು. ಆ ಬಳಿಕ ಬಂದ ಅನುಸ್ತುಪ್ 14 ರನ್ ಬಾರಿಸಿ ವಿಕೆಟ್ ಕೈಚೆಲ್ಲಿದರು.

ಈ ಹಂತದಲ್ಲಿ ಕಣಕ್ಕಿಳಿದ ಶಹಬಾಝ್ ಅಹ್ಮದ್ ಅತ್ಯುತ್ತಮ ಇನಿಂಗ್ಸ್​ ಆಡಿದರು. ಹರ್ಯಾಣ ಬೌಲರ್​ಗಳನ್ನು ದಿಟ್ಟತನದಿಂದಲೇ ಎದುರಿಸಿದ ಎಡಗೈ ದಾಂಡಿಗ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದರು. ಆದರೆ ಮತ್ತೊಂದೆಡೆ ಬೆಂಗಾಲ್ ತಂಡವು ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಇದಾಗ್ಯೂ ಏಂಕಾಗಿಯಾಗಿ ಇನಿಂಗ್ಸ್ ಕಟ್ಟಿದ ಶಹಬಾಝ್ ಅಹ್ಮದ್ 118 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 100 ರನ್ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದರು. ಅಲ್ಲದೆ 50ನೇ ಓವರ್​ನ 5ನೇ ಎಸೆತದಲ್ಲಿ ರಾಹುಲ್ ತೆವಾಟಿಯಾಗೆ ವಿಕೆಟ್ ಒಪ್ಪಿಸಿ ಶಹಬಾಝ್ ಅಹ್ಮದ್ (100) ಇನಿಂಗ್ಸ್ ಅಂತ್ಯಗೊಳಿಸಿದರು.

ಶಹಬಾಝ್ ಅಹ್ಮದ್ ಅವರ ಈ ಭರ್ಜರಿ ಶತಕದ ನೆರವಿನಿಂದ ಬೆಂಗಾಲ್ ತಂಡವು 50 ಓವರ್​ಗಳಲ್ಲಿ 225 ರನ್​ ಕಲೆಹಾಕಿದೆ. ಈ ಮೂಲಕ ಹರ್ಯಾಣ ತಂಡಕ್ಕೆ 226 ರನ್​ಗಳ ಗುರಿ ನೀಡಿದೆ.

ಶಹಬಾಝ್​ನ ಕೈಬಿಟ್ಟ ಆರ್​ಸಿಬಿ:

ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ತಂಡವು ಶಹಬಾಝ್ ಅಹ್ಮದ್ ಅವರನ್ನು ಟ್ರೇಡ್​ ಮಾಡಿಕೊಂಡಿದೆ. ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಹಬಾಝ್ ಅವರನ್ನು ನೀಡುವ ಮೂಲಕ ಮಯಾಂಕ್ ಡಗಾರ್ ಅವರನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡಿದೆ. ಇತ್ತ ಆರ್​ಸಿಬಿ ತಂಡದಿಂದ ಹೊರಬೀಳುತ್ತಿದ್ದಂತೆ ಇದೀಗ ಭರ್ಜರಿ ಶತಕ ಬಾರಿಸುವ ಮೂಲಕ ಶಹಬಾಝ್ ಅಹ್ಮದ್ ಮಿಂಚಿರುವುದು ವಿಶೇಷ.

ಹರ್ಯಾಣ ಪ್ಲೇಯಿಂಗ್ ಇಲೆವೆನ್: ಅಶೋಕ್ ಮೆನಾರಿಯಾ (ನಾಯಕ) , ರೋಹಿತ್ ಪರ್ಮೋದ್ ಶರ್ಮಾ ( ವಿಕೆಟ್ ಕೀಪರ್ ) , ಅಂಕಿತ್ ಕುಮಾರ್ , ಯುವರಾಜ್ ಸಿಂಗ್ , ಹಿಮಾಂಶು ರಾಣಾ , ನಿಶಾಂತ್ ಸಿಂಧು , ರಾಹುಲ್ ತೆವಾಟಿಯಾ , ಸುಮಿತ್ ಕುಮಾರ್ , ಹರ್ಷಲ್ ಪಟೇಲ್ , ಅನ್ಶುಲ್ ಕಾಂಬೋಜ್ , ಯುಜ್ವೇಂದ್ರ ಚಹಲ್.

ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?

ಬೆಂಗಾಲ್ ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್) , ರಂಜೋತ್ ಸಿಂಗ್ , ಶಹಬಾಝ್ ಅಹ್ಮದ್ , ಇಶಾನ್ ಪೊರೆಲ್ , ಕರಣ್ ಲಾಲ್ , ಮೊಹಮ್ಮದ್ ಕೈಫ್ , ಸುಮನ್ ದಾಸ್ , ಸುದೀಪ್ ಕುಮಾರ್ ಘರಾಮಿ (ನಾಯಕ) , ಅನುಸ್ತುಪ್ ಮಜುಂದಾರ್ , ಋತ್ವಿಕ್ ಚೌಧುರಿ , ಪ್ರದೀಪ್ತ ಪ್ರಮಾಣಿಕ್.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ