AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಏಷ್ಯಾಕಪ್ ಗೆದ್ದಿದ್ರೆ ಏನು ಮಾಡ್ತಿದ್ರು ಗೊತ್ತಾ? ಪ್ಲ್ಯಾನ್ ಬಹಿರಂಗಪಡಿಸಿದ ಅಫ್ರಿದಿ

India vs Pakistan: ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ 150 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ 9ನೇ ಬಾರಿ ಏಷ್ಯಾಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತು.

ಪಾಕ್ ಏಷ್ಯಾಕಪ್ ಗೆದ್ದಿದ್ರೆ ಏನು ಮಾಡ್ತಿದ್ರು ಗೊತ್ತಾ? ಪ್ಲ್ಯಾನ್ ಬಹಿರಂಗಪಡಿಸಿದ ಅಫ್ರಿದಿ
Shahid Afridi
ಝಾಹಿರ್ ಯೂಸುಫ್
|

Updated on:Oct 01, 2025 | 11:18 AM

Share

ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಸತತ 7 ಗೆಲುವುಗಳೊಂದಿಗೆ ಎಂಬುದು ವಿಶೇಷ. ಅದರಲ್ಲಿ ಮೂರು ಗೆಲುವು ಪಾಕಿಸ್ತಾನದ ವಿರುದ್ಧವೇ ಮೂಡಿಬಂದಿರುವುದು ಮತ್ತೊಂದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಭಾರತ ತಂಡವು ಟೂರ್ನಿಯೊಂದರಲ್ಲಿ ಪಾಕ್ ಪಡೆಯನ್ನು ಮೂರು ಬಾರಿ ಮಣಿಸಿದೆ. ಈ ಮೂರು ಗೆಲುವುಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸವನ್ನು ನಿರ್ಮಿಸಿದೆ.

ಒಂದು ವೇಳೆ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆದ್ದಿದ್ರೆ? ಈ ಒಂದು ಪ್ರಶ್ನೆಗೆ ಇದೀಗ ಪಾಕ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಉತ್ತರ ನೀಡಿದ್ದಾರೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನಾವು  ಗೆದ್ದಿದ್ದರೆ ಆ ಗೆಲುವನ್ನು ಪಾಕ್ ಆಟಗಾರರು ಪಾಕಿಸ್ತಾನ್ ಸೈನ್ಯಕ್ಕೆ ಅರ್ಪಿಸುತ್ತಿದ್ದರು.

ಫೈನಲ್ ಪಂದ್ಯಕ್ಕೂ ಮುನ್ನ ಇಂತಹದೊಂದು ಐಡಿಯಾವನ್ನು ನಾನು ನೀಡಿದ್ದೆ. ನೀವು ಗೆದ್ದರೆ ಆ ಗೆಲುವನ್ನು ಪಾಕಿಸ್ತಾನದ ವಾಯುಪಡೆಗೆ ಅರ್ಪಿಸಬೇಕೆಂದು ತಿಳಿಸಿದ್ದೆ. ಆದರೆ ದುರಾದೃಷ್ಟ ನಾವು ಗೆಲ್ಲಲಿಲ್ಲ. ಇದರಿಂದಾಗಿ ನಮ್ಮ ಕನಸು ನನಸಾಗಲಿಲ್ಲ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

ಇದಕ್ಕೂ ಮುನ್ನ ಮೊದಲ ಸುತ್ತಿನಲ್ಲಿ ಪಾಕಿಸ್ತಾನ್ ತಂಡವನ್ನು ಸೋಲಿಸಿದ ನಂತರ, ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಆ ಗೆಲುವನ್ನು ಭಾರತೀಯ ಸಶಸ್ತ್ರ ಪಡೆಗೆ ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ್ದರು. ಇದರ ವಿರುದ್ಧ ಪಿಸಿಬಿ ಸೂರ್ಯಕುಮಾರ್ ಯಾದವ್ ವಿರುದ್ಧ ಐಸಿಸಿಗೆ ದೂರು ದಾಖಲಿಸಿತ್ತು. 

ಈ ದೂರಿನ ಪರಿಣಾಮ ಸೂರ್ಯಕುಮಾರ್ ಯಾದವ್​ಗೆ ಪಂದ್ಯ ಶುಲ್ಕದ ಶೇ.30 ರಷ್ಡು ದಂಡ ವಿಧಿಸಲಾಗಿತ್ತು. ಅತ್ತ ಈ ದೂರಿನ ಹೊರತಾಗಿಯೂ ಟೀಮ್ ಇಂಡಿಯಾಗೆ ತಿರುಗೇಟು ನೀಡಲು ಪಾಕಿಸ್ತಾನ್ ತಂಡ ಪ್ಲ್ಯಾನ್ ರೂಪಿಸಿರುವುದು ಇದೀಗ ಬಹಿರಂಗವಾಗಿದೆ.

ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿ, ಆ ಗೆಲುವನ್ನು ಪಾಕಿಸ್ತಾನ್ ಸೈನಿಕರಿಗೆ ಅರ್ಪಿಸಲು ಯೋಜನೆ ರೂಪಿಸಿದ್ದೆವು. ಆದರೆ ಅಂತಿಮ ಪಂದ್ಯದಲ್ಲೂ ಟೀಮ್ ಇಂಡಿಯಾ ವಿರುದ್ಧ ಸೋತಿದ್ದರಿಂದ ನಮ್ಮ ಪ್ಲ್ಯಾನ್ ಈಡೇರಲಿಲ್ಲ ಎಂದು ಶಾಹಿದ್ ಅಫ್ರಿದಿ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಕಪ್ ಬೇಕಿದ್ರೆ, ಸೂರ್ಯಕುಮಾರೇ ಬರಲಿ: ಮೊಹ್ಸಿನ್ ನಖ್ವಿ ಮತ್ತೆ ಕಿರಿಕ್

ಇತ್ತ ಫೈನಲ್ ಪಂದ್ಯದಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತು. ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸೂರ್ಯಕುಮಾರ್ ಯಾದವ್, ಏಷ್ಯಾಕಪ್ ಟೂರ್ನಿಯ ತನ್ನೆಲ್ಲಾ ಪಂದ್ಯದ ಶುಲ್ಕಗಳನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ಮತ್ತು ನಮ್ಮ ಸಶಸ್ತ್ರ ಪಡೆಗಳಿಗೆ ನೀಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

Published On - 11:18 am, Wed, 1 October 25

Follow Us
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್