AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಆಟದ ಎಲ್ಲಾ ಸ್ವರೂಪಗಳಲ್ಲಿ ಕೊಹ್ಲಿ ನಾಯಕತ್ವ ತೊರೆಯುವುದೇ ಸೂಕ್ತ: ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ

Virat Kohli: ವಿರಾಟ್ ನಾಯಕತ್ವವನ್ನು ತೊರೆದು ಅವರ ಉಳಿದ ಕ್ರಿಕೆಟ್ ಅನ್ನು ಆನಂದಿಸಬೇಕು ಎಂದು ನಾನು ಭಾವಿಸುತ್ತೇನೆ ಮತ್ತು ಅವರಿಗೆ ಇನ್ನೂ ಸಾಕಷ್ಟು ಕ್ರಿಕೆಟ್ ಉಳಿದಿದೆ

Virat Kohli: ಆಟದ ಎಲ್ಲಾ ಸ್ವರೂಪಗಳಲ್ಲಿ ಕೊಹ್ಲಿ ನಾಯಕತ್ವ ತೊರೆಯುವುದೇ ಸೂಕ್ತ: ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ
ಕೊಹ್ಲಿ
TV9 Web
| Updated By: ಪೃಥ್ವಿಶಂಕರ|

Updated on: Nov 13, 2021 | 3:30 PM

Share

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ನಂತರ ಕ್ರಿಕೆಟ್‌ನ ಅತ್ಯಂತ ಕಡಿಮೆ ಸ್ವರೂಪದಲ್ಲಿ ಭಾರತ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತಕ್ಕೆ ಇದುವರೆಗೆ ಯಾವುದೇ ಐಸಿಸಿ ಪ್ರಶಸ್ತಿಯನ್ನು ಪಡೆಯಲು ಸಾಧ್ಯವಾಗಿಲ್ಲ. ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಈ ಬರ ನೀಗಿಸುವ ಪ್ರಯತ್ನ ಅವರದ್ದಾಗಿತ್ತು ಆದರೆ ಅದೂ ಆಗಲಿಲ್ಲ. ತಂಡವು ಸೆಮಿಫೈನಲ್‌ಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಈ ಟೂರ್ನಿಯಲ್ಲಿ ತಂಡ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿದೆ. ವಿರಾಟ್ ಕೊಹ್ಲಿ ಅವರ ಬ್ಯಾಟ್ ಕೂಡ ಹೆಚ್ಚು ಬಾಳಿಕೆ ಬರಲಿಲ್ಲ. ಹೀಗಿರುವಾಗ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ವಿರಾಟ್ ಕೊಹ್ಲಿಗೆ ಸಲಹೆಯೊಂದನ್ನು ನೀಡಿದ್ದಾರೆ. ಭಾರತೀಯ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್‌ಮನ್ ಆಗಿ ಉತ್ತಮವಾಗಿ ಕಾರ್ಯನಿರ್ವಹಿಸಲು ಆಟದ ಎಲ್ಲಾ ಸ್ವರೂಪಗಳಲ್ಲಿ ನಾಯಕನ ಪಾತ್ರವನ್ನು ತ್ಯಜಿಸಬೇಕು ಎಂದು ಆಫ್ರಿದಿ ಅಭಿಪ್ರಾಯಪಟ್ಟಿದ್ದಾರೆ.

‘ಸಮಾ ಟಿವಿ ಚಾನೆಲ್’ನಲ್ಲಿ ಮಾತನಾಡಿದ ಆಫ್ರಿದಿ, ಭಾರತ ಟಿ20 ತಂಡದ ನಾಯಕರಾಗಿ ರೋಹಿತ್ ಶರ್ಮಾ ಅವರನ್ನು ನೇಮಿಸುವ ಬಿಸಿಸಿಐ ನಿರ್ಧಾರ ಉತ್ತಮವಾಗಿದೆ ಎಂದು ಹೇಳಿದ್ದಾರೆ. ಭಾರತದ T20 ವಿಶ್ವಕಪ್ ಅಭಿಯಾನದ ಕೊನೆಯಲ್ಲಿ ಕೊಹ್ಲಿ T20 ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ ನಂತರ BCCI ಈ ನಿರ್ಧಾರವನ್ನು ತೆಗೆದುಕೊಂಡಿದೆ. “ಅವರು ಭಾರತೀಯ ಕ್ರಿಕೆಟ್‌ಗೆ ಅದ್ಭುತ ಶಕ್ತಿಯಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಆದರೆ ಅವರು ಈಗ ಎಲ್ಲಾ ಸ್ವರೂಪಗಳಲ್ಲಿ ನಾಯಕನಾಗಿ ನಿವೃತ್ತಿ ಹೊಂದಲು ನಿರ್ಧರಿಸಿದರೆ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ.

ರೋಹಿತ್‌ನ ಮನಸ್ಥಿತಿ ಬಲವಾಗಿದೆ ಅಫ್ರಿದಿ ಐಪಿಎಲ್-2008 ರಲ್ಲಿ ಡೆಕ್ಕನ್ ಚಾರ್ಜ್‌ನಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಆಡಿದ್ದಾರೆ. ರೋಹಿತ್‌ಗೆ ಉತ್ತಮ ನಾಯಕನ ಮಾನಸಿಕ ಶಕ್ತಿ ಇದೆ ಮತ್ತು ಅದನ್ನು ತನ್ನ ಐಪಿಎಲ್ ಫ್ರಾಂಚೈಸಿ ಮುಂಬೈ ಇಂಡಿಯನ್ಸ್‌ಗಾಗಿ ತೋರಿಸಿದ್ದಾರೆ ಎಂದು ಪಾಕಿಸ್ತಾನಿ ಸ್ಟಾರ್ ಹೇಳಿದ್ದಾರೆ. ನಾನು ರೋಹಿತ್ ಅವರೊಂದಿಗೆ ಒಂದು ವರ್ಷ ಆಡಿದ್ದೇನೆ ಮತ್ತು ಅವರು ಬಲವಾದ ಮನಸ್ಥಿತಿಯನ್ನು ಹೊಂದಿರುವ ಅದ್ಭುತ ಆಟಗಾರ. ಅವರ ಪ್ರಬಲ ಅಂಶವೆಂದರೆ ಅವರು ಅಗತ್ಯವಿದ್ದಾಗ ಶಾಂತಿಯುತವಾಗಿ ಮತ್ತು ತೀರಾ ಅಗತ್ಯವಿದ್ದಾಗ ಆಕ್ರಮಣಶೀಲತೆಯನ್ನು ತೋರಿಸುವ ಸಾಮಥ್ರ್ಯ ಹೊಂದಿದ್ದಾರೆ. ಅವರು ಉನ್ನತ ದರ್ಜೆಯ ಆಟಗಾರ, ಅವನ ಶಾಟ್ ಆಯ್ಕೆಯು ಅತ್ಯುತ್ತಮವಾಗಿದೆ ಮತ್ತು ಆಟಗಾರರಿಗೆ ಉತ್ತಮ ನಾಯಕನಾಗುವ ಮನಸ್ಥಿತಿಯನ್ನು ಅವರು ಹೊಂದಿದ್ದಾರೆ ಎಂದಿದ್ದಾರೆ.

ಇದನ್ನು ಕೊಹ್ಲಿಯಿಂದ ನಿರೀಕ್ಷಿಸಲಾಗಿತ್ತು ಕೊಹ್ಲಿ ನಾಯಕತ್ವವನ್ನು ತೊರೆದು ಎಲ್ಲಾ ಮೂರು ಸ್ವರೂಪಗಳಲ್ಲಿ ತಮ್ಮ ಬ್ಯಾಟಿಂಗ್‌ನತ್ತ ಗಮನಹರಿಸಿ ಅದನ್ನು ಆನಂದಿಸಬೇಕು ಎಂದು ಆಫ್ರಿದಿ ಅಭಿಪ್ರಾಯಪಟ್ಟಿದ್ದಾರೆ. ವಿರಾಟ್ ನಾಯಕತ್ವವನ್ನು ತೊರೆದು ಅವರ ಉಳಿದ ಕ್ರಿಕೆಟ್ ಅನ್ನು ಆನಂದಿಸಬೇಕು ಎಂದು ನಾನು ಭಾವಿಸುತ್ತೇನೆ ಮತ್ತು ಅವರಿಗೆ ಇನ್ನೂ ಸಾಕಷ್ಟು ಕ್ರಿಕೆಟ್ ಉಳಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಆಫ್ರಿದಿ ಹೇಳಿದರು. ಅವರು ಉನ್ನತ ದರ್ಜೆಯ ಬ್ಯಾಟ್ಸ್‌ಮನ್ ಮತ್ತು ಮನಸ್ಸಿನಲ್ಲಿ ಬೇರೆ ಯಾವುದೇ ಒತ್ತಡವಿಲ್ಲದೆ ‘ಮುಕ್ತ’ ಆಡಬಲ್ಲರು.

ಮೂವತ್ತಮೂರು ವರ್ಷದ ಅವರು ಇತ್ತೀಚೆಗೆ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಮತ್ತೊಂದೆಡೆ, ಮುಖ್ಯ ಕೋಚ್ ಆಗಿ ತಮ್ಮ ಅಧಿಕಾರಾವಧಿಯನ್ನು ಕೊನೆಗೊಳಿಸಿರುವ ರವಿಶಾಸ್ತ್ರಿ, ಇತ್ತೀಚಿನ ಸಂದರ್ಶನವೊಂದರಲ್ಲಿ ಕೊಹ್ಲಿ ಏಕದಿನ ನಾಯಕತ್ವವನ್ನು ಸಹ ತ್ಯಜಿಸಬಹುದು ಮತ್ತು ತಮ್ಮ ನೆಚ್ಚಿನ ಸ್ವರೂಪವಾಗಿರುವ ಟೆಸ್ಟ್ ತಂಡವನ್ನು ಮುನ್ನಡೆಸುವತ್ತ ಮಾತ್ರ ಗಮನಹರಿಸಬಹುದು ಎಂದು ಸುಳಿವು ನೀಡಿದ್ದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ