AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಲಕ್ಷ ರೂ. ದಂಡವಲ್ಲ… ಪಾಕ್ ಆಟಗಾರರನ್ನು ಬ್ಯಾನ್ ಮಾಡಿ!

T20 World Cup 2026: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಒಟ್ಟು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಅದು ಸಹ ನೆದರ್​ಲೆಂಡ್ಸ್, ಯುಎಸ್​ಎ ಹಾಗೂ ನಮೀಬಿಯ ವಿರುದ್ಧ. ಇನ್ನು ಸೂಪರ್-8 ಸುತ್ತಿನಲ್ಲಿ ಶ್ರೀಲಂಕಾ ವಿರುದ್ಧ ಗೆದ್ದರೂ ಸೆಮಿಫೈನಲ್​ಗೇರಲು ಸಾಧ್ಯವಾಗಿಲ್ಲ.

50 ಲಕ್ಷ ರೂ. ದಂಡವಲ್ಲ... ಪಾಕ್ ಆಟಗಾರರನ್ನು ಬ್ಯಾನ್ ಮಾಡಿ!
Pakistan - Shahid Afridi
ಝಾಹಿರ್ ಯೂಸುಫ್
|

Updated on: Mar 04, 2026 | 8:53 AM

Share

T20 World Cup 2026: ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನಕ್ಕೆ ಪಾಕಿಸ್ತಾನ್ ಆಟಗಾರರಿಗೆ ಬಿಸಿ ಮುಟ್ಟಿಸಲು ಪಾಕ್ ಕ್ರಿಕೆಟ್ ಮಂಡಳಿ ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಪಾಕಿಸ್ತಾನ್ ಆಟಗಾರರಿಗೆ 50 ಲಕ್ಷ ರೂ. (PKR) ದಂಡ ವಿಧಿಸಲು ಮುಂದಾಗಿದೆ. ಈ ದಂಡದ ಸುದ್ದಿ ಬೆನ್ನಲ್ಲೇ ಮಾಜಿ ನಾಯಕ ಶಾಹಿದ್ ಅಫ್ರಿದಿ ಹಿರಿಯ ಆಟಗಾರರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಪ್ರದರ್ಶನ ನೀಡುತ್ತಿರುವ ಆಟಗಾರರನ್ನು ಕನಿಷ್ಠ ಎರಡು ವರ್ಷಗಳ ಕಾಲ ತಂಡದಿಂದ ಬ್ಯಾನ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಟಗಾರರ ಮೇಲೆ ಕಿಡಿ:

ಬಾಬರ್ ಆಝಂ, ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ಅವರಂತಹ ಪ್ರಮುಖ ಆಟಗಾರರನ್ನು ತಂಡದಿಂದ ಕೈಬಿಟ್ಟು, ಅವರಿಗೆ “ರಿಯಾಲಿಟಿ ಚೆಕ್” ನೀಡಬೇಕು ಎಂದು ಅಫ್ರಿದಿ ಹೇಳಿದ್ದಾರೆ. ತಂಡದ ಹಿರಿಯ ಆಟಗಾರರು ಹಾಗೂ ಅನುಭವಿಗಳೆಂದು ಗುರುತಿಸಿಕೊಂಡಿರುವ ಇವರಿಂದ ಯಾವುದೇ ಪ್ರದರ್ಶನ ಮೂಡಿಬರುತ್ತಿಲ್ಲ. ಹೀಗಾಗಿ ಇವರೆಲ್ಲನ್ನೆಲ್ಲಾ ತಂಡದಿಂದ ಹೊರಗಿಡಬೇಕೆಂದು ಅಫ್ರಿದಿ ಆಗ್ರಹಿಸಿದ್ದಾರೆ.

ದೇಶೀಯ ಕ್ರಿಕೆಟ್‌ಗೆ ಕಳುಹಿಸಿ:

ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚದ ಆಟಗಾರರನ್ನು ತಂಡದಿಂದ ವಜಾಗೊಳಿಸಿ, ಅವರು ಮತ್ತೆ ದೇಶೀಯ ಕ್ರಿಕೆಟ್ ಆಡಿ ಫಾರ್ಮ್ ಕಂಡುಕೊಳ್ಳುವಂತೆ ಮಾಡಬೇಕು ಎಂದು ಅಫ್ರಿದಿ ಆಗ್ರಹಿಸಿದ್ದಾರೆ. ಕೆಲ ಆಟಗಾರರು ವರ್ಷದಿಂದ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇದಾಗ್ಯೂ ಅವರನ್ನು ತಂಡದಿಂದ ಕೈ ಬಿಡುತ್ತಿಲ್ಲ. ಅಂತಹ ಆಟಗಾರರನ್ನು ಕೂಡ ತಂಡದಿಂದ ಕೈ ಬಿಟ್ಟು ಪ್ರಥಮ ದರ್ಜೆ ಕ್ರಿಕೆಟ್ ಆಡುವಂತೆ ಸೂಚಿಸಬೇಕು ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

ಯುವ ಆಟಗಾರರಿಗೆ ಅವಕಾಶ:

ಹಿರಿಯರನ್ನು ಬೆಂಚ್ ಮೇಲೆ ಕೂರಿಸಿ, ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ನಿರ್ಭೀತ ಯುವ ಆಟಗಾರರಿಗೆ ಇನ್ಮುಂದೆ ಹೆಚ್ಚಿನ ಅವಕಾಶ ನೀಡಬೇಕು. ಈ ಮೂಲಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ತಂಡವನ್ನು ಕಟ್ಟುವ ಕಾಯಕಕ್ಕೆ ಕೈ ಹಾಕಬೇಕೆಂದು ಅಫ್ರಿದಿ ಸಲಹೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ಪಾಕ್ ತಂಡದಲ್ಲಿರುವ ಅನುಭವಿ ಹಾಗೂ ಆಕ್ರಮಣಕಾರಿ ಆಟಗಾರ ಫಖರ್ ಝಮಾನ್​ಗೆ ಟಿ20 ನಾಯಕತ್ವ ನೀಡಬೇಕು. ಈ ಮೂಲಕ ಹೊಸ ಪಡೆಯನ್ನು ರೂಪಿಸಲು ಇದು ಸಕಾಲ ಎಂದು ಅಫ್ರಿದಿ ಅಭಿಪ್ರಾಯಪಟ್ಟಿದ್ದಾರೆ.

ದಂಡದ ಬಗ್ಗೆ ಅಸಮಾಧಾನ:

ಆಟಗಾರರನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಎರಡು ವರ್ಷಗಳ ಕಾಲ ಬ್ಯಾನ್ ಮಾಡಬೇಕೆಂದು ಆಗ್ರಹಿಸಿರುವ ಶಾಹಿದ್ ಅಫ್ರಿದಿ, ಪಿಸಿಬಿ ಆಟಗಾರರಿಗೆ ವಿಧಿಸಿರುವ 50 ಲಕ್ಷ ರೂ.ಗಳ ದಂಡವು ಅತ್ಯಂತ “ಸಣ್ಣತನದ ನಿರ್ಧಾರ” ಎಂದು ಟೀಕಿಸಿದ್ದಾರೆ. ಅಲ್ಲದೆ ಹಣಕಾಸಿನ ದಂಡಕ್ಕಿಂತ ತಂಡದಲ್ಲಿ ಶಿಸ್ತು ಮತ್ತು ಬದಲಾವಣೆ ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

ಒಟ್ಟಿನಲ್ಲಿ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಪಾಕಿಸ್ತಾನ್ ತಂಡದಲ್ಲಿ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಗುತ್ತಿದೆ. ಹೀಗಾಗಿ ಮುಂಬರುವ ಸರಣಿ ವೇಳೆ ಹೊಸ ಪಾಕ್ ಪಡೆಯನ್ನು ನಿರೀಕ್ಷಿಸಬಹುದು.

Follow Us
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ