AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ಬಿಗ್ ಶಾಕ್..!

India vs Pakistan: ಟೀಮ್ ಇಂಡಿಯಾ ವಿರುದ್ದ ಮೊದಲ ಪಂದ್ಯದಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. ಭಾರತದ ಬಲಿಷ್ಠ ಬ್ಯಾಟಿಂಗ್ ಲೈನಪ್ ಮುಂದೆ 4 ಓವರ್ ಎಸೆದಿದ್ದ ಯುವ ವೇಗಿ ನೀಡಿದ್ದು ಕೇವಲ 29 ರನ್​ ಮಾತ್ರ.

IND vs PAK: ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ಬಿಗ್ ಶಾಕ್..!
Pakistan Team
TV9 Web
| Updated By: ಝಾಹಿರ್ ಯೂಸುಫ್|

Updated on: Sep 03, 2022 | 6:38 PM

Share

Asia Cup 2022: ಏಷ್ಯಾಕಪ್​ನ ಸೂಪರ್- 4 ಹಂತದ ಪಂದ್ಯಗಳು ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾದರೆ, ಭಾನುವಾರ ನಡೆಯಲಿರುವ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ (India vs Pakistan) ತಂಡಗಳು ಸೆಣಸಲಿದೆ. ಆದರೆ ಈ ಪಂದ್ಯಕ್ಕೆ ದಿನ ಮಾತ್ರ ಉಳಿದಿರುವಾಗ ಪಾಕಿಸ್ತಾನ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಶಹನವಾಜ್ ದಹಾನಿ ಗಾಯಗೊಂಡಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ದದ ಪಂದ್ಯದಲ್ಲಿ ದಹಾನಿ ಕಣಕ್ಕಿಳಿಯುವುದಿಲ್ಲ.

ಇದಕ್ಕೂ ಮುನ್ನ ಪಾಕ್ ತಂಡದಿಂದ ಗಾಯಗೊಂಡು ಇಬ್ಬರು ವೇಗಿಗಳು ಹೊರಬಿದ್ದಿದ್ದರು. ಟೂರ್ನಿ ಆರಂಭಕ್ಕೂ ಮುನ್ನವೇ ಶಾಹೀನ್ ಅಫ್ರಿದಿ ಹೊರಗುಳಿದರೆ, ಏಷ್ಯಾಕಪ್​ ಅಭ್ಯಾಸದ ವೇಳೆ ವಾಸಿಂ ಜೂನಿಯರ್ ಗಾಯಗೊಂಡ ಪರಿಣಾಮ ಅರ್ಧದಲ್ಲೇ ಟೂರ್ನಿಯನ್ನು ತೊರೆದಿದ್ದರು. ಇದೀಗ ಟೀಮ್ ಇಂಡಿಯಾ ವಿರುದ್ದದ ಮಹತ್ವದ ಪಂದ್ಯಕ್ಕೂ ಮುನ್ನ ಶಹನವಾಜ್ ದಹಾನಿ ಗಾಯಗೊಂಡಿರುವುದು ಪಾಕ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಏಕೆಂದರೆ ಟೀಮ್ ಇಂಡಿಯಾ ವಿರುದ್ದ ಮೊದಲ ಪಂದ್ಯದಲ್ಲಿ ದಹಾನಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. ಭಾರತದ ಬಲಿಷ್ಠ ಬ್ಯಾಟಿಂಗ್ ಲೈನಪ್ ಮುಂದೆ 4 ಓವರ್ ಎಸೆದಿದ್ದ ದಹಾನಿ ನೀಡಿದ್ದು ಕೇವಲ 29 ರನ್​ ಮಾತ್ರ. ಹೀಗಾಗಿ ಸೂಪರ್-4 ನಲ್ಲೂ ಶಹನವಾಜ್ ಪಾಕ್ ತಂಡದ ಟ್ರಂಪ್ ಕಾರ್ಡ್ ಆಗಿದ್ದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದೀಗ ಪಂದ್ಯ ಆರಂಭಕ್ಕೆ ದಿನ ಮಾತ್ರ ಉಳಿದಿರುವಾಗ ಪ್ರಮುಖ ವೇಗಿ ಗಾಯಗೊಂಡು ಹೊರಗುಳಿದಿರುವ ಬಾಬರ್ ಪಡೆಯ ಚಿಂತೆಯನ್ನು ಹೆಚ್ಚಿಸಿದೆ. ಅದರಲ್ಲೂ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಬೌಲರ್ ಹೊರುಗಳಿಯುತ್ತಿರುವುದು ಪಾಕ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಪಾಕಿಸ್ತಾನ್ ತಂಡ ಹೀಗಿದೆ:

ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್,  ನಸೀಮ್ ಶಾ, ಹಸನ್ ಅಲಿ,  ಮತ್ತು ಉಸ್ಮಾನ್ ಖಾದಿರ್.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರರು: ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ