AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ಶಕೀಬ್ ಅಲ್ ಹಸನ್

Shakib Al Hasan: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಎಡಗೈ ಸ್ಪಿನ್ನರ್ ಎಂಬ ವಿಶ್ವ ದಾಖಲೆ ಶಕೀಬ್ ಅಲ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಒಟ್ಟು 706 ವಿಕೆಟ್​ಗಳನ್ನು ಕಬಳಿಸುವ ಮೂಲಕ ಶಕೀಬ್ ನ್ಯೂಝಿಲೆಂಡ್​ನ ಡೇನಿಯಲ್ ವೆಟ್ಟೋರಿ (705) ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ದಾಖಲೆ ಬೆನ್ನಲ್ಲೇ ಸ್ಪೋರ್ಟ್ಸ್​ಕೀಡಾಗೆ ನೀಡಿದ ಸಂದರ್ಶನದಲ್ಲಿ ಶಕೀಬ್ ಅಲ್ ಹಸನ್ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ್ದಾರೆ.

ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ಶಕೀಬ್ ಅಲ್ ಹಸನ್
Shakib Al Hasan
ಝಾಹಿರ್ ಯೂಸುಫ್
|

Updated on: Aug 28, 2024 | 1:11 PM

Share

ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್​ನಲ್ಲಿ ಭಾರತದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಇನ್ನು ಆಲ್​ ಟೈಮ್ ಒಡಿಐ ಇಲೆವೆನ್​ನಲ್ಲಿ ಶಕೀಬ್ ತಮ್ಮನ್ನೂ ಸಹ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಅಂದರೆ ಶಕೀಬ್ ಅಲ್ ಹಸನ್ ಅವರ ಸಾರ್ವಕಾಲಿಕ ಏಕದಿನ ಇಲೆವೆನ್​ನಲ್ಲಿ ಆರಂಭಿಕರಾಗಿ ಆಯ್ಕೆಯಾಗಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಪಾಕಿಸ್ತಾನದ ಮಾಜಿ ಎಡಗೈ ಆರಂಭಿಕ ಆಟಗಾರ ಸಯೀದ್ ಅನ್ವರ್.

ಇನ್ನು ಮೂರನೇ ಕ್ರಮಾಂಕಕ್ಕೆ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಅವರನ್ನು ಹೆಸರಿಸಿದ್ದಾರೆ. ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಐದನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ಆಲ್​ರೌಂಡರ್ ಜಾಕ್ಸ್ ಕಾಲಿಸ್​ಗೆ ಸ್ಥಾನ ನೀಡಿದರೆ, ವಿಕೆಟ್ ಕೀಪರ್ ಬ್ಯಾಟರ್ ಆಗಿ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿದ್ದಾರೆ. ಅಲ್ಲದೆ ತಂಡದ ನಾಯಕತ್ವವನ್ನು ಧೋನಿಗೆ ನೀಡಿದ್ದಾರೆ.

ಏಳನೇ ಕ್ರಮಾಂಕಕ್ಕೆ ಆಲ್​ರೌಂಡರ್ ಆಗಿ ಶಕೀಬ್ ಅಲ್ ಹಸನ್ ತಮ್ಮನ್ನೇ ಹೆಸರಿಸಿದ್ದಾರೆ. ಇನ್ನು ಸ್ಪಿನ್ ಬೌಲರ್​ಗಳಾಗಿ ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಶೇನ್ ವಾರ್ನ್ ಹಾಗೂ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: Dinesh Karthik: ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್

ಇನ್ನು ವೇಗದ ಬೌಲರ್​ಗಳಾಗಿ ಪಾಕಿಸ್ತಾನದ ಎಡಗೈ ವೇಗಿ ವಾಸಿಂ ಅಕ್ರಮ್ ಹಾಗೂ ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್​ಗ್ರಾಥ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಶಕೀಬ್ ಅಲ್ ಹಸನ್ ಅವರ ಆಲ್ ​ಟೈಮ್ ಏಕದಿನ ಇಲೆವೆನ್ ಈ ಕೆಳಗಿನಂತಿದೆ…

  1. ಸಚಿನ್ ತೆಂಡೂಲ್ಕರ್ (ಭಾರತ)
  2. ಸಯೀದ್ ಅನ್ವರ್ (ಪಾಕಿಸ್ತಾನ್)
  3. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್)
  4. ವಿರಾಟ್ ಕೊಹ್ಲಿ (ಭಾರತ)
  5. ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)
  6. ಮಹೇಂದ್ರ ಸಿಂಗ್ ಧೋನಿ- ನಾಯಕ (ಭಾರತ)
  7. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)
  8. ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ)
  9. ಶೇನ್ ವಾರ್ನ್​ (ಆಸ್ಟ್ರೇಲಿಯಾ)
  10. ವಾಸಿಂ ಅಕ್ರಮ್ (ಪಾಕಿಸ್ತಾನ್)
  11. ಗ್ಲೆನ್ ಮೆಕ್​ಗ್ರಾಥ್ (ಆಸ್ಟ್ರೇಲಿಯಾ)
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ