AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕ- ಮಾಜಿ ನಾಯಕನ ನಡುವೆ ಕಿತ್ತಾಟ; ವಿಶ್ವಕಪ್​ಗೂ ಮುನ್ನ ಬಾಂಗ್ಲಾ ತಂಡದಲ್ಲಿ ಭಿನ್ನಮತ ಸ್ಫೋಟ

ODI World Cup 2023: ವಿಶ್ವಕಪ್ ತಂಡದ ಆಯ್ಕೆಯ ವಿಚಾರದಲ್ಲಿ ತಂಡದ ಹಾಲಿ ನಾಯಕ ಶಕೀಬ್ ಅಲ್ ಹಸನ್ ಮತ್ತು ಮಾಜಿ ನಾಯಕ ತಮೀಮ್ ಇಕ್ಬಾಲ್ ನಡುವೆ ವಾಗ್ವಾದ ನಡೆದಿದೆ. ಹೀಗಾಗಿಯೇ ತಮೀಮ್ ಇಕ್ಬಾಲ್‌ ಅವರನ್ನು ವಿಶ್ವಕಪ್ ತಂಡದಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.

ನಾಯಕ- ಮಾಜಿ ನಾಯಕನ ನಡುವೆ ಕಿತ್ತಾಟ; ವಿಶ್ವಕಪ್​ಗೂ ಮುನ್ನ ಬಾಂಗ್ಲಾ ತಂಡದಲ್ಲಿ ಭಿನ್ನಮತ ಸ್ಫೋಟ
ತಮೀಮ್ ಇಕ್ಬಾಲ್, ಶಕೀಬ್ ಅಲ್ ಹಸನ್
ಪೃಥ್ವಿಶಂಕರ
|

Updated on:Sep 27, 2023 | 8:12 AM

Share

2023ರ ಏಕದಿನ ವಿಶ್ವಕಪ್‌ಗೆ (ODI World Cup 2023) ಬಾಂಗ್ಲಾದೇಶ ತನ್ನ ತಂಡವನ್ನು ಪ್ರಕಟಿಸಿದೆ. ಆದರೆ ತಂಡ ಪ್ರಕಟವಾದ ಬೆನ್ನಲ್ಲೇ ತಂಡದಲ್ಲಿ ಭಿನ್ನಮತ ಸ್ಫೋಟವಾಗಿದೆ ಎಂದು ವರದಿಯಾಗಿದೆ. ವಾಸ್ತವವಾಗಿ ಈ ಬಾರಿ ಬಾಂಗ್ಲಾದೇಶ ಏಕದಿನ ವಿಶ್ವಕಪ್ ತಂಡದಲ್ಲಿ ತಂಡದ ಮಾಜಿ ನಾಯಕ ತಮೀಮ್ ಇಕ್ಬಾಲ್‌ಗೆ (Tamim Iqbal) ಸ್ಥಾನ ನೀಡಿಲ್ಲ. ಇದು ತಂಡದ ಆಯ್ಕೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಲ್ಲದೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ವಿಶ್ವಕಪ್ ತಂಡದ ಆಯ್ಕೆಯ ವಿಚಾರದಲ್ಲಿ ತಂಡದ ಹಾಲಿ ನಾಯಕ ಶಕೀಬ್ ಅಲ್ ಹಸನ್ (Shakib Al Hasan) ಮತ್ತು ಮಾಜಿ ನಾಯಕ ತಮೀಮ್ ಇಕ್ಬಾಲ್ ನಡುವೆ ವಾಗ್ವಾದ ನಡೆದಿದೆ. ಹೀಗಾಗಿಯೇ ತಮೀಮ್ ಇಕ್ಬಾಲ್‌ ಅವರನ್ನು ವಿಶ್ವಕಪ್ ತಂಡದಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.

ಕೇವಲ 5 ಪಂದ್ಯಗಳನ್ನಾಡುತ್ತೇನೆ; ತಮೀಮ್

ಬಾಂಗ್ಲಾದೇಶದ ಸ್ಥಳೀಯ ಮಾಧ್ಯಮಗಳ ಪ್ರಕಾರ, ತಮೀಮ್ ಇಕ್ಬಾಲ್ ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ. ಹೀಗಾಗಿ ನಾನು ಇಡೀ ವಿಶ್ವಕಪ್ ಆಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾನು ಕೇವಲ 5 ಪಂದ್ಯಗಳಲ್ಲಿ ಆಡುವುದಾಗಿ ತಮೀಮ್ ಅವರು ಮಂಡಳಿಗೆ ತಿಳಿಸಿದ್ದರು. ಆದರೆ ತಮೀಮ್ ಅವರ ಈ ನಿರ್ಧಾರ ನಾಯಕ ಶಕೀಬ್ ಅಲ್ ಹಸನ್ ಅವರಿಗೆ ಇಷ್ಟವಾಗಿಲ್ಲ. ಹೀಗಾಗಿ ಶಕೀಬ್ ಸಂಪೂರ್ಣ ಫಿಟ್‌ ಇಲ್ಲದ ಆಟಗಾರ ತಂಡದಲ್ಲಿ ಸ್ಥಾನ ಪಡೆಯವುದರ ಬಗ್ಗೆ ಅಸಮಾದಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.

IND vs BAN: ನೋ ಬಾಲ್ ನೀಡಿದಕ್ಕೆ ಅಂಪೈರ್‌ ಜೊತೆ ಜಗಳಕ್ಕಿಳಿದ ಶಕೀಬ್! ಬುದ್ಧಿ ಹೇಳಿದ ಕೊಹ್ಲಿ; ವಿಡಿಯೋ

ನಾನು ತಂಡದ ನಾಯಕನಾಗುವುದಿಲ್ಲ; ಶಕೀಬ್

ಸೋಮವಾರವೇ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹುಸೇನ್ ಅವರ ಮನೆಯಲ್ಲಿ ಸಭೆ ನಡೆದಿದ್ದು, ಶಕೀಬ್ ಅಲ್ ಹಸನ್ ಮತ್ತು ತಂಡದ ಕೋಚ್ ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು. ಅಲ್ಲಿಯೇ ಶಕೀಬ್ ಅಲ್ ಹಸನ್ ಅರ್ಧ ಫಿಟ್ ಇರುವ ಆಟಗಾರನನ್ನು ವಿಶ್ವಕಪ್‌ಗೆ ತೆಗೆದುಕೊಂಡರೆ ನಾನು ತಂಡದ ನಾಯಕನಾಗುವುದಿಲ್ಲ ಎಂದು ಅಧ್ಯಕ್ಷರ ಮುಂದೆ ಹೇಳಿದ್ದರು. ಇದಾದ ನಂತರ ಮಂಡಳಿಯು ನಾಯಕನ ಸಲಹೆಯನ್ನು ಸ್ವೀಕರಿಸಿದ್ದು, ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಅಷ್ಟೇ ಅಲ್ಲ, ತಮೀಮ್ ಇಕ್ಬಾಲ್ ಸಹೋದರನಾಗಿರುವ ತಂಡದ ಮ್ಯಾನೇಜರ್ ನಫೀಸ್ ಇಕ್ಬಾಲ್ ಅವರನ್ನು ಕೂಡ ಮಂಡಳಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಲಾಗುತ್ತಿದೆ.

27 ರೊಳಗೆ ಭಾರತಕ್ಕೆ ಬರುವ ಸಾಧ್ಯತೆ

ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗೂ ಮುನ್ನ ಬಾಂಗ್ಲಾದೇಶ ತಂಡದಲ್ಲಿ ಈ ರೀತಿಯ ವಿವಾದ ನಡೆದಿದ್ದು, ಇದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಬಹುದು. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಏಕದಿನ ಸರಣಿಯನ್ನು ಕಳೆದುಕೊಂಡಿರುವ ಬಾಂಗ್ಲಾದೇಶ ತಂಡ ವಿಶ್ವಕಪ್​ಗಾಗಿ ಸೆಪ್ಟೆಂಬರ್ 27 ರೊಳಗೆ ಭಾರತಕ್ಕೆ ಬರುವ ಸಾಧ್ಯತೆ ಇದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:11 am, Wed, 27 September 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ