AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ರಾಯಲ್ಸ್ ಮಾರಾಟ ಆಗಿದ್ದಕ್ಕೆ ಶೇನ್ ವಾರ್ನ್ ಕುಟುಂಬಕ್ಕೆ ಸಿಗಲಿದೆ 450 ಕೋಟಿ ರೂಪಾಯಿ

ರಾಜಸ್ಥಾನ ರಾಯಲ್ಸ್ ತಂಡ ₹15,290 ಕೋಟಿಗೆ ಅಮೆರಿಕದ ಕಲ್ ಸೋಮಾನಿ ಒಕ್ಕೂಟಕ್ಕೆ ಮಾರಾಟವಾಗಿದೆ. ಈ ಒಪ್ಪಂದದಡಿಯಲ್ಲಿ, ದಿವಂಗತ ಶೇನ್ ವಾರ್ನ್ ಕುಟುಂಬಕ್ಕೆ 450 ಕೋಟಿಗೂ ಹೆಚ್ಚು ಹಣ ಸಿಗಲಿದೆ. 2008ರಲ್ಲಿ ರಾಯಲ್ಸ್ ತಂಡದ ನಾಯಕನಾಗಿ ವಾರ್ನ್, ತಂಡದ ಶೇ.3ರಷ್ಟು ಪಾಲು ಪಡೆದಿದ್ದರು.

ರಾಜಸ್ಥಾನ ರಾಯಲ್ಸ್ ಮಾರಾಟ ಆಗಿದ್ದಕ್ಕೆ ಶೇನ್ ವಾರ್ನ್ ಕುಟುಂಬಕ್ಕೆ ಸಿಗಲಿದೆ 450 ಕೋಟಿ ರೂಪಾಯಿ
ಶೇನ್ ವಾರ್ನ್
ರಾಜೇಶ್ ದುಗ್ಗುಮನೆ
|

Updated on: Mar 25, 2026 | 12:12 PM

Share

ಐಪಿಎಲ್ ಆರಂಭಕ್ಕೂ ಮೊದಲು ಕೆಲವು ಮಹತ್ವದ ಬೆಳವಣಿಗೆ ನಡೆದಿದೆ. ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟ ಆಗಿದೆ. ಆರ್​​ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಖರೀದಿಸಿದರೆ, ರಾಜಸ್ಥಾನ ರಾಯಲ್ಸ್ ತಂಡವನ್ನು ಅಮೆರಿಕ ಮೂಲದ ಕಲ್ ಸೋಮಾನಿ ಒಕ್ಕೂಟ ಈ ಕಂಪನಿಯ ಶೇ. 100ರಷ್ಟು ಷೇರನ್ನು ಖರೀದಿ ಮಾಡಿದೆ. ಇದಕ್ಕಾಗಿ 15,290 ಕೋಟಿ ರೂಪಾಯಿ ಪಾವತಿಸಿದೆ. ಈ ಹಣದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ದಿವಂಗತ ಶೇನ್ ವಾರ್ನ್​​​ ಕುಟುಂಬಕ್ಕೂ 450 ಕೋಟಿ ರೂಪಾಯಿ ಸಿಗಲಿದೆ.

2008ರಲ್ಲಿ ಶೇನ್ ವಾರ್ನ್ ಅವರು ರಾಜಸ್ಥಾನ ರಾಯಲ್ಸ್ ಪರ ಆಡಿದ್ದರು. ಅವರು ತಂಡದ ಕ್ಯಾಪ್ಟನ್ ಹಾಗೂ ಆಗಿದ್ದರು. ಆ ಬಾರಿ ಆರ್​​ಆರ್​ ತಂಡ ಗೆಲುವು ಕಂಡಿತು. ವಾರ್ನ್​ ಅವರು ತಂಡವನ್ನು ಪ್ರತಿನಿಧಿಸಿದ್ದಕಾಗಿ ಪ್ರತಿ ವರ್ಷ ತಂಡದ ಶೇ.0.75 ಶೇರನ್ನು ಪಡೆದಿದ್ದರು. ‘ನನ್ನ ಒಪ್ಪಂದದ ಭಾಗವಾಗಿ ನಾನು ತಂಡದ ನಾಯಕ, ಕೋಚ್ ಮತ್ತು ನಾನು ಬಯಸಿದ ರೀತಿಯಲ್ಲಿ ಕ್ರಿಕೆಟ್ ತಂಡವನ್ನು ನಡೆಸಲು ಕೇಳಿಕೊಂಡರು. ನಾನು ಎಲ್ಲವೂ ಆಗಿದ್ದೆ’ ಎಂದು ಶೇನ್ ವಾರ್ನ್ ಹೇಳಿದ್ದರು.

ನಾಲ್ಕು ಆವೃತ್ತಿಗಳಲ್ಲಿ ರಾಯಲ್ಸ್ ಅನ್ನು ವಾರ್ನ್ ಪ್ರತಿನಿಧಿಸಿದ್ದರಿಂದ, ಫ್ರಾಂಚೈಸಿಯ ಮಾಲೀಕತ್ವದಲ್ಲಿ ಅವರಿಗೆ ಶೇ.3 ಪಾಲು ನಿಡಲಾಗಿದೆ. ಇದರಿಂದಾಗಿ ಅವರ ಪಾಲಿನ ಮೌಲ್ಯ ಸುಮಾರು $48 ಮಿಲಿಯನ್ (ರೂ. 450-460 ಕೋಟಿ) ಆಗಿತ್ತು. ಹೀಗಾಗಿ, ಕುಟುಂಬದವರಿಗೆ ತಂಡದ ಮಾರಾಟದಿಂದ ದೊಡ್ಡ ಮೊತ್ತ ಸಿಗುತ್ತಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಡೀಲ್ ಕೊನೆಯಾಗಲಿದೆ.

ಇದನ್ನೂ ಓದಿ:  ಆರ್​​ಸಿಬಿ ಹೆಸರು ಬದಲಾವಣೆ ಪಕ್ಕಾ? ಇಲ್ಲಿದೆ ಕಾರಣ 2022ರಲ್ಲಿ ಸ್ಪಿನ್ ದಿಗ್ಗಜ ಶೇನ್ ವಾರ್ನ್ ನಿಧನರಾದರು. ಅವರು ಮೂವರು ಮಕ್ಕಳನ್ನು ಅಗಲಿದ್ದರು. ಅವರಿಗೆ ಹೃದಯಾಘಾತ ಆಗಿತ್ತು ಎನ್ನಲಾಗಿದೆ. ಅವರ ಸಾವಿನ ಸುತ್ತ ಸಾಕಷ್ಟು ಅನುಮಾನ ಕೂಡ ಮೂಡಿತ್ತು.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?