AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ರಾಜಸ್ಥಾನ್ ರಾಯಲ್ಸ್

ಪ್ರಸಕ್ತ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಉತ್ತಮ ಪ್ರದರ್ಶನ ನೀಡುತ್ತಿದೆ. 8 ಪಂದ್ಯಗಳಲ್ಲಿ 6ರಲ್ಲಿ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

IPL 2022: ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ರಾಜಸ್ಥಾನ್ ರಾಯಲ್ಸ್
shane warne
TV9 Web
| Edited By: |

Updated on: Apr 30, 2022 | 4:32 PM

Share

IPL (IPL 2022) ನ 45ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಆಡಲಿದೆ. ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಾಜಸ್ಥಾನಕ್ಕೆ ಈ ಪಂದ್ಯ ವಿಶೇಷವಾಗಿದೆ. ಏಕೆಂದರೆ ಸಂಜು ಸ್ಯಾಮ್ಸನ್ ತಂಡ ವಿಶೇಷ ಜೆರ್ಸಿ ಧರಿಸಿ ಮೈದಾನಕ್ಕಿಳಿಯಲಿದೆ. ಇಂದಿನ ಪಂದ್ಯದಲ್ಲಿ ಆರ್​ಆರ್​ ಧರಿಸುವ ಜೆರ್ಸಿಯಲ್ಲಿ ಶೇನ್ ವಾರ್ನ್ ಅವರ ಹೆಸರನ್ನು ಮುದ್ರಿಸಲಾಗಿದೆ. ಈ ಸ್ಪೆಷಲ್​ ಜೆರ್ಸಿಯ ವಿಡಿಯೋವನ್ನು ರಾಜಸ್ಥಾನ್ ರಾಯಲ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ನಾಯಕನಿಗೆ ಗೌರವ ಸೂಚಿಸುವುದಾಗಿ ತಿಳಿಸಿದೆ. ಆಸ್ಟ್ರೇಲಿಯಾ ಸ್ಪಿನ್ ದಂತಕಥೆ ಶೇನ್ ವಾರ್ನ್ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದರು.

ಶೇನ್ ವಾರ್ನ್ ಅವರ ಗೌರವಾರ್ಥವಾಗಿ ರಾಜಸ್ಥಾನ್ ರಾಯಲ್ಸ್ ಬಿಡುಗಡೆ ಮಾಡಿರುವ ಜೆರ್ಸಿಯು ಗುಲಾಬಿ ಮತ್ತು ನೀಲಿ ಬಣ್ಣದ್ದಾಗಿದೆ. ಆದರೆ ಅದರ ಕಾಲರ್‌ಗಳಲ್ಲಿ SW 23 ಎಂದು ಬರೆಯಲಾಗಿದೆ. ಅಂದರೆ ಶೇನ್ ವಾರ್ನ್ ಅವರ ಜೆರ್ಸಿ ನಂಬರ್ 23. ವಾರ್ನ್​ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ಸಿನಲ್ಲಿ ಶೇನ್ ವಾರ್ನ್ ಪ್ರಮುಖ ಪಾತ್ರ ವಹಿಸಿದ್ದರು. ಐಪಿಎಲ್​ನ ಮೊದಲ ಸೀಸನ್​ನಲ್ಲಿ ಶೇನ್ ವಾರ್ನ್ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2008ರ ಚಾಂಪಿಯನ್ಸ್​: ಚೆನ್ನೈ ಸೂಪರ್ ಕಿಂಗ್ಸ್‌ನ ಬಲಿಷ್ಠ ತಂಡವನ್ನು ಸೋಲಿಸಿ ರಾಜಸ್ಥಾನ ಮೊದಲ ಐಪಿಎಲ್ ಪ್ರಶಸ್ತಿ ಗೆದ್ದಿದ್ದರು. ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ 5 ವಿಕೆಟ್‌ಗೆ 163 ರನ್ ಗಳಿಸಿತು. ಉತ್ತರವಾಗಿ ರಾಜಸ್ಥಾನ ಕೊನೆಯ ಎಸೆತದಲ್ಲಿ ಈ ಗುರಿಯನ್ನು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಐಪಿಎಲ್ 2008 ರಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಶೇನ್ ವಾರ್ನ್ 15 ಪಂದ್ಯಗಳಲ್ಲಿ 19 ವಿಕೆಟ್​ಗಳನ್ನು ಪಡೆದಿದ್ದರು.

ಈ ಬಾರಿ ಕೂಡ ಉತ್ತಮ ಪ್ರದರ್ಶನ: ಪ್ರಸಕ್ತ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಉತ್ತಮ ಪ್ರದರ್ಶನ ನೀಡುತ್ತಿದೆ. 8 ಪಂದ್ಯಗಳಲ್ಲಿ 6ರಲ್ಲಿ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲುವ ಪ್ಲೇಆಫ್​ಗೇರುವ ಹಾದಿಯನ್ನು ಸುಗಮಗೊಳಿಸುವ ಇರಾದೆಯಲ್ಲಿ ರಾಜಸ್ಥಾನ್ ರಾಯಲ್ಸ್​.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು