AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ: ಮಾಜಿ ಕ್ರಿಕೆಟಿಗ ಟೀಕೆ

ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಮಾರ್ಕ್​ ವಾ ಟೀಕಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಶಾರ್ದೂಲ್ ಅವರನ್ನು ವಾ ಬಿಟ್ಸ್​ ಅ್ಯಂಡ್ ಪೀಸಸ್ ಕ್ರಿಕೆಟಿಗ ಎಂದು ಜರಿದರು. ಏಕೆಂದರೆ ವಿಶ್ವಕಪ್ ತಂಡದಲ್ಲಿರುವ ಆಟಗಾರನಾಗಿರುವ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 35 ರನ್ ನೀಡಿದ್ದರು. ಅಲ್ಲದೆ ಒಂದೇ ಒಂದು ವಿಕೆಟ್ ಕಬಳಿಸಿರಲಿಲ್ಲ. ಇದಾಗ್ಯೂ ಶಾರ್ದೂಲ್ ಠಾಕೂರ್​ಗೆ ಸತತ […]

ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ: ಮಾಜಿ ಕ್ರಿಕೆಟಿಗ ಟೀಕೆ
Shardul Thakur
TV9 Web
| Edited By: |

Updated on: Sep 25, 2023 | 6:41 PM

Share

ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಮಾರ್ಕ್​ ವಾ ಟೀಕಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಶಾರ್ದೂಲ್ ಅವರನ್ನು ವಾ ಬಿಟ್ಸ್​ ಅ್ಯಂಡ್ ಪೀಸಸ್ ಕ್ರಿಕೆಟಿಗ ಎಂದು ಜರಿದರು.

ಏಕೆಂದರೆ ವಿಶ್ವಕಪ್ ತಂಡದಲ್ಲಿರುವ ಆಟಗಾರನಾಗಿರುವ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 35 ರನ್ ನೀಡಿದ್ದರು. ಅಲ್ಲದೆ ಒಂದೇ ಒಂದು ವಿಕೆಟ್ ಕಬಳಿಸಿರಲಿಲ್ಲ. ಇದಾಗ್ಯೂ ಶಾರ್ದೂಲ್ ಠಾಕೂರ್​ಗೆ ಸತತ ಅವಕಾಶ ನೀಡುತ್ತಿರುವುದು ಅಚ್ಚರಿ ಎಂದು ಮಾರ್ಕ್​ ವಾ ವಾದಿಸಿದರು.

ನನ್ನ ಪ್ರಕಾರ ಶಾರ್ದೂಲ್ ಠಾಕೂರ್ ಬಿಟ್ಸ್​ ಅ್ಯಂಡ್ ಪೀಸಸ್ ಕ್ರಿಕೆಟರ್. ಅಂದರೆ ಅರ್ಧಂಬರ್ಧ ಆಟಗಾರ. ಏಕೆಂದರೆ ಆತ ಅತ್ತ ಬೌಲರ್​ ಆಗಿಯೂ ಮಿಂಚುತ್ತಿಲ್ಲ. ಇತ್ತ ಬ್ಯಾಟ್ಸ್​ಮನ್ ಆಗಿಯೂ ಯಶಸ್ಸು ಕಾಣುತ್ತಿಲ್ಲ ಎಂದು ಮಾರ್ಕ್ ವಾ ತಿಳಿಸಿದರು.

ಶಾರ್ದೂಲ್ ಠಾಕೂರ್ ಕಳಪೆ ಪ್ರದರ್ಶನ:

ಮಾರ್ಕ್​ ವಾ ಅವರ ಹೇಳಿಕೆಯಂತೆ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾ ಪರ ಸತತ ಕಳಪೆ ಪ್ರದರ್ಶನ ನೀಡುತ್ತಾ ಬರುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 10 ಓವರ್​ಗಳಲ್ಲಿ 78 ರನ್ ಬಿಟ್ಟುಕೊಟ್ಟಿದ್ದ ಠಾಕೂರ್ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇನ್ನು 2ನೇ ಪಂದ್ಯದಲ್ಲೂ 4 ಓವರ್​ಗಳಲ್ಲಿ 35 ರನ್​ ನೀಡಿ ದುಬಾರಿ ಎನಿಸಿಕೊಂಡರು.

ಹಾಗೆಯೇ ಇತ್ತೀಚೆಗೆ ಮುಗಿದ ಏಷ್ಯಾಕಪ್​ನಲ್ಲಿ 4 ಪಂದ್ಯಗಳನ್ನಾಡಿದ್ದ ಶಾರ್ದೂಲ್ ಕಲೆಹಾಕಿದ್ದು ಕೇವಲ 14 ರನ್​ಗಳು ಮಾತ್ರ. ಇನ್ನು ಬೌಲಿಂಗ್​ನಲ್ಲಿ ಪಡೆದಿದ್ದು ಕೇವಲ 5 ವಿಕೆಟ್​ಗಳು. ಇದಾಗ್ಯೂ ಏಕದಿನ ವಿಶ್ವಕಪ್​ ತಂಡದಲ್ಲಿ ಶಾರ್ದೂಲ್ ಠಾಕೂರ್ ಅವರನ್ನು ಉಳಿಸಿಕೊಂಡಿರುವುದು ಅಚ್ಚರಿ.

ಇದನ್ನೂ ಓದಿ: Shubman Gill: ಗಿಲ್​ ಗಿಲಕ್​ಗೆ ಹಳೆಯ ದಾಖಲೆಗಳು ಧೂಳೀಪಟ

ಏಕದಿನ ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?