AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shardul Thakur: ದೀರ್ಘಕಾಲದ ಗೆಳತಿಯೊಂದಿಗೆ ಟೀಂ ಇಂಡಿಯಾ ವೇಗಿ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ; ವಿಡಿಯೋ

Shardul Thakur: ಭಾರತದ ವೇಗದ ಬೌಲರ್ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮುಂಬೈ ಆಟಗಾರ ನವೆಂಬರ್ 29 ರಂದು ತನ್ನ ಗೆಳತಿ ಮಿಥಾಲಿ ಪರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು.

Shardul Thakur: ದೀರ್ಘಕಾಲದ ಗೆಳತಿಯೊಂದಿಗೆ ಟೀಂ ಇಂಡಿಯಾ ವೇಗಿ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ; ವಿಡಿಯೋ
ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ
Follow us
TV9 Web
| Updated By: ಪೃಥ್ವಿಶಂಕರ

Updated on: Nov 29, 2021 | 1:17 PM

ಭಾರತದ ವೇಗದ ಬೌಲರ್ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮುಂಬೈ ಆಟಗಾರ ನವೆಂಬರ್ 29 ರಂದು ತನ್ನ ಗೆಳತಿ ಮಿಥಾಲಿ ಪರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ಕಾರ್ಯಕ್ರಮ ಮುಂಬೈನಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ. ನಿಶ್ಚಿತಾರ್ಥದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಕ್ರಮ ನಡೆದಿದ್ದು ಈ ವೇಳೆ ಆಪ್ತರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು. ಭಾರತೀಯ ಕ್ರಿಕೆಟಿಗರು ಬಾಗವಹಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಬಳಿಕ ಶಾರ್ದೂಲ್ ಠಾಕೂರ್ ಮದುವೆಯಾಗಬಹುದು ಎಂಬ ಸುದ್ದಿ ಇದೆ.

30 ವರ್ಷದ ಶಾರ್ದೂಲ್ ಠಾಕೂರ್ ಸದ್ಯ ಟೀಂ ಇಂಡಿಯಾದಿಂದ ಹೊರಗುಳಿದಿದ್ದು, ವಿಶ್ರಾಂತಿಯಲ್ಲಿದ್ದಾರೆ. ಅವರು ಇಲ್ಲಿಯವರೆಗೆ ನಾಲ್ಕು ಟೆಸ್ಟ್, 15 ODI ಮತ್ತು 24 T20 ಪಂದ್ಯಗಳನ್ನು ಆಡಿದ್ದಾರೆ. ಜೊತೆಗೆ ಇತ್ತೀಚೆಗೆ ಟಿ20 ವಿಶ್ವಕಪ್‌ಗಾಗಿ ಭಾರತ ತಂಡದ ಭಾಗವಾಗಿದ್ದರು. ಇದಕ್ಕೂ ಮೊದಲು ಐಪಿಎಲ್ 2021 ರಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಇತ್ತೀಚಿನ ದಿನಗಳಲ್ಲಿ ಶಾರ್ದೂಲ್ ಅವರು ಟೀಂ ಇಂಡಿಯಾ ಪರ ಎಲ್ಲಾ ಮೂರು ಮಾದರಿಗಳಲ್ಲಿ ಆಡುತ್ತಿದ್ದಾರೆ. ಟೆಸ್ಟ್‌ನಲ್ಲಿ ಅವರು ಬ್ಯಾಟ್‌ನಲ್ಲೂ ಅದ್ಭುತಗಳನ್ನು ಮಾಡಿದ್ದಾರೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿ ಅರ್ಧಶತಕಗಳನ್ನು ಗಳಿಸಿದರು. ಇದರಿಂದಾಗಿ ಅವರು ಸಾಕಷ್ಟು ಪ್ರಶಂಸೆಗೆ ಪಾತ್ರರಾಗಿದ್ದರು.

ಶಾರ್ದೂಲ್ ಅವರ ವೃತ್ತಿಜೀವನ ಹೀಗಿದೆ ಶಾರ್ದೂಲ್ ಠಾಕೂರ್ ಮುಂಬೈನ ಉಪನಗರ ಪ್ರದೇಶವಾದ ಪಾಲ್ಘರ್‌ನಿಂದ ಬಂದವರು. ಅವರು 2017 ರಲ್ಲಿ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಅದೇ ಸಮಯದಲ್ಲಿ, 2018 ರಲ್ಲಿ ಟೆಸ್ಟ್ ಪದಾರ್ಪಣೆ ನಡೆಯಿತು. ಇದುವರೆಗೆ ಟೆಸ್ಟ್ನಲ್ಲಿ 14, ODI ಗಳಲ್ಲಿ 22 ಮತ್ತು T20 ನಲ್ಲಿ 31 ವಿಕೆಟ್ಗಳನ್ನು ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ ಮತ್ತು ರೋಹಿತ್ ಶರ್ಮಾ ಜೊತೆಯಾಗಿ ಆಡುತ್ತಾ ಮುನ್ನಡೆದಿದ್ದಾರೆ. ಇಬ್ಬರೂ ಒಂದೇ ತರಬೇತುದಾರ ದಿನೇಶ್ ಲಾಡ್ ಅವರಿಂದ ಆಟದ ಸೂಕ್ಷ್ಮಗಳನ್ನು ಕಲಿತಿದ್ದಾರೆ. ಶಾಲಾ ದಿನಗಳಲ್ಲಿ ಆರು ಎಸೆತಗಳಲ್ಲಿ ಆರು ಸಿಕ್ಸರ್ ಬಾರಿಸಿದ ಸಾಧನೆಯನ್ನೂ ಮಾಡಿದ್ದರು.

ಬಳಿಕ ದೇಶಿಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರು. ಮುಂಬೈಯನ್ನು ರಣಜಿ ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಐಪಿಎಲ್‌ನಲ್ಲಿ ಅವರ ಚೊಚ್ಚಲ ಪ್ರವೇಶ ಪಂಜಾಬ್ ಕಿಂಗ್ಸ್‌ನೊಂದಿಗೆ ಆಯಿತು. ಆದರೆ ನಂತರ ಅವರು ಚೆನ್ನೈ ಸೂಪರ್ ಕಿಂಗ್ಸ್‌ಗೆ ಬರುವ ಮೂಲಕ ಯಶಸ್ಸನ್ನು ಪಡೆದರು. ಇಲ್ಲಿ ಅವರು 2018 ಮತ್ತು 2021 ರಲ್ಲಿ ಪ್ರಶಸ್ತಿ ಗೆದ್ದ ತಂಡದ ಭಾಗವಾಗಿದ್ದರು.

ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು