AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ ನೆಲದಲ್ಲಿ ಅಜೇಯ ಶತಕ ಸಿಡಿಸಿದ ಲಾರ್ಡ್ ಶಾರ್ದೂಲ್ ಠಾಕೂರ್

Shardul Thakur's Unbeaten Century: ಟೀಂ ಇಂಡಿಯಾದ ಅಂತರ್‌ ತಂಡದ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಅವರು ಅಜೇಯ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ ಇದು ಭಾರತಕ್ಕೆ ಒಳ್ಳೆಯ ಸುದ್ದಿಯಾಗಿದೆ. ಶುಭ್‌ಮನ್ ಗಿಲ್ ಮತ್ತು ಕೆ.ಎಲ್. ರಾಹುಲ್ ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ. ಸರ್ಫರಾಜ್ ಖಾನ್ ಕೂಡ ಶತಕ ಸಿಡಿಸಿದ್ದಾರೆ. ಈ ಪ್ರದರ್ಶನಗಳು ಇಂಗ್ಲೆಂಡ್ ವಿರುದ್ಧದ ಸವಾಲಿಗೆ ಸಿದ್ಧತೆಗಳನ್ನು ಬಲಪಡಿಸುತ್ತವೆ.

ಇಂಗ್ಲೆಂಡ್‌ ನೆಲದಲ್ಲಿ ಅಜೇಯ ಶತಕ ಸಿಡಿಸಿದ ಲಾರ್ಡ್ ಶಾರ್ದೂಲ್ ಠಾಕೂರ್
Shardul Thakur
ಪೃಥ್ವಿಶಂಕರ
|

Updated on: Jun 15, 2025 | 9:26 PM

Share

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ, ಟೀಂ ಇಂಡಿಯಾ (IND vs ENG) ತನ್ನ ಸಿದ್ಧತೆಗಳನ್ನು ಬಲಪಡಿಸಲು ಅಂತರ್-ತಂಡದ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಭಾರತ ಎ ಮತ್ತು ಭಾರತೀಯ ಹಿರಿಯ ತಂಡದ ಆಟಗಾರರು ಭಾಗವಹಿಸಿದ್ದರು. ಈ ಪಂದ್ಯದಲ್ಲಿ ನಾಯಕ ಶುಭ್​ಮನ್ ಗಿಲ್, ಕೆ ಎಲ್ ರಾಹುಲ್ ಗಮನಾರ್ಹ ಪ್ರದರ್ಶನ ನೀಡಿದ್ದರು. ಇವರ ಜೊತೆಗೆ ಯುವ ಬ್ಯಾಟರ್ ಸರ್ಫರಾಜ್ ಕೂಡ ಶತಕ ಸಿಡಿಸಿ ಮಿಂಚಿದ್ದರು. ಇದೀಗ ಸರ್ಫರಾಜ್ ಮಾತ್ರವಲ್ಲದೆ ತಂಡದ ಸ್ಟಾರ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ (Shardul Thakur) ಆಂಗ್ಲರ ನೆಲದಲ್ಲಿ ಅಬ್ಬರಿಸಿದ್ದು, ಅಜೇಯ ಶತಕ ಬಾರಿಸಿದ್ದಾರೆ.

ಶಾರ್ದೂಲ್ ಠಾಕೂರ್ ಅಜೇ ಶತಕ

ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿರುವ ಶಾರ್ದೂಲ್ ಠಾಕೂರ್ 122 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಪ್ರದರ್ಶನವು ತಂಡಕ್ಕೆ ಮಾತ್ರವಲ್ಲದೆ ಇಂಗ್ಲೆಂಡ್ ವಿರುದ್ಧದ ಮುಂಬರುವ ಸವಾಲಿಗೂ ಸಕಾರಾತ್ಮಕ ಸಂಕೇತವಾಗಿದೆ. ಇದು ಮಾತ್ರವಲ್ಲದೆ ಶಾರ್ದೂಲ್ ಠಾಕೂರ್ ಈ ಶತಕದ ಮೂಲಕ ತಮಗೂ ತಂಡದಲ್ಲಿ ಸ್ಥಾನ ನೀಡಬೇಕು ಎಂಬುದನ್ನು ಆಯ್ಕೆದಾರರ ಗಮನಕ್ಕೆ ತಂದಿದ್ದಾರೆ. ವಾಸ್ತವವಾಗಿ ಶಾರ್ದೂಲ್ ಠಾಕೂರ್ 2023 ರಿಂದ ಟೀಂ ಇಂಡಿಯಾ ಪರ ಯಾವುದೇ ಟೆಸ್ಟ್ ಪಂದ್ಯವನ್ನು ಆಡಿಲ್ಲ. ಆದರೆ ಇಂಗ್ಲೆಂಡ್‌ನಲ್ಲಿ ಅಜೇಯ ಶತಕ ಸಿಡಿಸಿರುವ ಶಾರ್ದೂಲ್​ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಿವೆ.

ಪಂದ್ಯದ ಎರಡನೇ ದಿನದಂದು ಬ್ಯಾಟಿಂಗ್‌ಗೆ ಇಳಿದ ಶಾರ್ದೂಲ್ ಠಾಕೂರ್ 10 ಎಸೆತಗಳಲ್ಲಿ 19 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಇದಾದ ನಂತರ ಪಂದ್ಯದ ಕೊನೆಯ ದಿನದಂದು ತಮ್ಮ ಇನ್ನಿಂಗ್ಸ್ ಮುಂದುವರಿಸಿದ ಶಾರ್ದೂಲ್ ಎಲ್ಲಾ ಬೌಲರ್‌ಗಳ ವಿರುದ್ಧ ಮುಕ್ತವಾಗಿ ಬ್ಯಾಟ್ ಬೀಸಿ ಶತಕ ಸಿಡಿಸಿದರು. ಅವರ ಅಜೇಯ ಇನ್ನಿಂಗ್ಸ್ ಬೌಲಿಂಗ್‌ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಉಪಯುಕ್ತವೆಂದು ಸಾಬೀತುಪಡಿಸಿತು.

IND vs ENG Test: ಇಂಟ್ರಾ ಸ್ಕ್ವಾಡ್ ಮ್ಯಾಚ್​ನಲ್ಲೂ ರಾಹುಲ್ ಆರ್ಭಟ: ಗಿಲ್-ಶಾರ್ದೂಲ್ ಕೂಡ ಭರ್ಜರಿ ಆಟ

ಟೀಂ ಇಂಡಿಯಾಗೆ ಹೊಸ ಆರಂಭ

ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಸರಣಿಯು ಭಾರತ ತಂಡಕ್ಕೆ ಕಠಿಣ ಪರೀಕ್ಷೆಯಾಗಲಿದೆ. ಕಳೆದ ಕೆಲವು ವರ್ಷಗಳಿಂದ, ಉಭಯ ತಂಡಗಳ ನಡುವಿನ ಪಂದ್ಯಗಳು ಯಾವಾಗಲೂ ರೋಮಾಂಚಕಾರಿಯಾಗಿರುತ್ತವೆ. ಹೀಗಾಗಿ ಈ ಬಾರಿಯೂ ಅಭಿಮಾನಿಗಳು ರೋಮಾಂಚಕಾರಿ ಕ್ರಿಕೆಟ್ ಅನ್ನು ನಿರೀಕ್ಷಿಸುತ್ತಿದ್ದಾರೆ. 2007 ರಿಂದ ಭಾರತ ಈ ದೇಶದಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಶುಭ್​ಮನ್ ಗಿಲ್ ಈ ಬರವನ್ನು ಕೊನೆಗೊಳಿಸುವ ಜವಾಬ್ದಾರಿಯನ್ನು ಸಹ ಹೊಂದಿರುತ್ತಾರೆ. ಅದೇ ಸಮಯದಲ್ಲಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಆರ್ ಅಶ್ವಿನ್ ಇಲ್ಲದೆ ಟೀಂ ಇಂಡಿಯಾ ಈ ಸರಣಿಗೆ ಪ್ರವೇಶಿಸಲಿದ್ದು, ಇದು ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗದ ಆರಂಭ ಎಂದು ಪರಿಗಣಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?