AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 69 ರನ್​​… ಟಿ20 ಟೂರ್ನಿಯಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಶಾರ್ದೂಲ್ ಠಾಕೂರ್

Shardul Thakur: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಶಾರ್ದೂಲ್ ಠಾಕೂರ್ ಅನ್​​ಸೋಲ್ಡ್ ಆಗಿದ್ದರು. ಅತ್ಯುತ್ತಮ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿದ್ದ ಶಾರ್ದೂಲ್ ಅವರನ್ನು ಖರೀದಿಸಲು ಈ ಬಾರಿ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಇದಕ್ಕೆ ಮುಖ್ಯ ಕಾರಣ ಮುಂಬೈ ಆಟಗಾರನ ಕಳಪೆ ಪ್ರದರ್ಶನ.

ಬರೋಬ್ಬರಿ 69 ರನ್​​… ಟಿ20 ಟೂರ್ನಿಯಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಶಾರ್ದೂಲ್ ಠಾಕೂರ್
Shardul Thakur
ಝಾಹಿರ್ ಯೂಸುಫ್
|

Updated on: Nov 30, 2024 | 2:19 PM

Share

ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಬೌಲರ್ ಎಂಬ ಕೆಟ್ಟ ದಾಖಲೆಯೊಂದು ಶಾರ್ದೂಲ್ ಠಾಕೂರ್ ಪಾಲಾಗಿದೆ. ಅದು ಕೂಡ ಬರೋಬ್ಬರಿ 69 ರನ್​​ ನೀಡುವ ಮೂಲಕ ಶಾರ್ದೂಲ್ ಈ ಹೀನಾಯ ದಾಖಲೆಯನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೇರಳ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್ ಗೆದ್ದ ಮುಂಬೈ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೇರಳ ತಂಡವನ್ನು ಬ್ಯಾಟಿಂಗ್​​ಗೆ ಆಹ್ವಾನಿಸಿದರು. ಅದರಂತೆ ಇನಿಂಗ್ಸ್ ಶುರು ಮಾಡಿದ ಕೇರಳ ರೋಹನ್ ಕುನ್ನುಮ್ಮಲ್ (87) ಸ್ಪೋಟಕ ಆರಂಭ ಒದಗಿಸಿದ್ದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಲ್ಮಾನ್ ನಿಝಾರ್ 49 ಎಸೆತಗಳಲ್ಲಿ 8 ಸಿಕ್ಸ್​ ಹಾಗೂ 5 ಫೋರ್​​​ಗಳೊಂದಿಗೆ ಅಜೇಯ 99 ರನ್ ಚಚ್ಚಿದ್ದರು. ರೋಹನ್ ಹಾಗೂ ಸಲ್ಮಾನ್​ರ ಸಿಡಿಲಬ್ಬರದಿಂದ ನಲುಗಿದ್ದು ಅನುಭವಿ ವೇಗಿ ಶಾರ್ದೂಲ್ ಠಾಕೂರ್.

ಏಕೆಂದರೆ ಈ ಪಂದ್ಯದಲ್ಲಿ 4 ಓವರ್​​​ಗಳನ್ನು ಎಸೆದಿದ್ದ ಶಾರ್ದೂಲ್ ಠಾಕೂರ್ ಬರೋಬ್ಬರಿ 69 ರನ್ ನೀಡಿದರು. ಈ ಮೂಲಕ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತ್ಯಂತ ದುಬಾರಿ ಸ್ಪೆಲ್ ಎಸೆದ ಬೌಲರ್ ಎನಿಸಿಕೊಂಡರು. ಅಲ್ಲದೆ ರಮೇಶ್ ರಾಹುಲ್ ಹೆಸರಿನಲ್ಲಿದ್ದ ಕಳಪೆ ದಾಖಲೆಯನ್ನು ಸರಿಗಟ್ಟಿದರು.

ನವೆಂಬರ್ 25, 2024 ರಂದು ನಡೆದ ಹರ್ಯಾಣ ವಿರುದ್ದದ ಪಂದ್ಯದಲ್ಲಿ ರಮೇಶ್ ರಾಹುಲ್ 4 ಓವರ್​​ಗಳಲ್ಲಿ 69 ರನ್ ಬಿಟ್ಟುಕೊಟ್ಟಿದ್ದರು. ಇದೀಗ ಶಾರ್ದೂಲ್ ಠಾಕೂರ್ ಕೂಡ ಪ್ರತಿ ಓವರ್​​ಗೆ 17.20 ಸರಾಸರಿಯಲ್ಲಿ ರನ್ ನೀಡುವ ಮೂಲಕ ಈ ಕೆಟ್ಟ ದಾಖಲೆಯನ್ನು ಸರಿಗಟ್ಟಿದ್ದಾರೆ.

ಕೇರಳ ತಂಡಕ್ಕೆ ಜಯ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೇರಳ ತಂಡವು 20 ಓವರ್​​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಪರ ಅಜಿಂಕ್ಯ ರಹಾನೆ 35 ಎಸೆತಗಳಲ್ಲಿ 68 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್​​​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 191 ರನ್​​ ಕಲೆಹಾಕಿ 43 ರನ್​​ಗಳಿಂದ ಸೋಲೊಪ್ಪಿಕೊಂಡಿತು.

ಕೇರಳ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ನಾಯಕ) , ರೋಹನ್ ಕುನ್ನುಮ್ಮಲ್ , ಮೊಹಮ್ಮದ್ ಅಝರುದ್ದೀನ್ , ಸಚಿನ್ ಬೇಬಿ , ವಿಷ್ಣು ವಿನೋದ್ , ಸಲ್ಮಾನ್ ನಿಝಾರ್ , ಅಬ್ದುಲ್ ಬಾಸಿತ್ , ಎಂಡಿ ನಿಧೀಶ್ , ವಿನೋದ್ ಕುಮಾರ್ , ಸುಧೇಶನ್ ಮಿಧುನ್ , ನೆಡುಮಂಕುಝಿ ಬಾಸಿಲ್.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಪಾಕಿಸ್ತಾನ್ ಹೊರಬಿದ್ದರೆ, ಯಾವ ತಂಡಕ್ಕೆ ಚಾನ್ಸ್?

ಮುಂಬೈ ಪ್ಲೇಯಿಂಗ್ 11: ಪೃಥ್ವಿ ಶಾ , ಆಂಗ್​​ಕ್ರಿಶ್ ರಘುವಂಶಿ , ಶ್ರೇಯಸ್ ಅಯ್ಯರ್ (ನಾಯಕ) , ಅಜಿಂಕ್ಯ ರಹಾನೆ , ಸೂರ್ಯಾಂಶ್ ಶೆಡ್ಗೆ , ಶಮ್ಸ್ ಮುಲಾನಿ , ಹಾರ್ದಿಕ್ ತಮೋರೆ ( ವಿಕೆಟ್ ಕೀಪರ್ ) , ತನುಷ್ ಕೋಟ್ಯಾನ್ , ಶಾರ್ದೂಲ್ ಠಾಕೂರ್ , ಮೋಹಿತ್ ಅವಸ್ತಿ , ರಾಯ್​ಸ್ಟನ್ ಡಯಾಸ್.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?