AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCL 2025: ‘ಆಗ ಆಡಿಲ್ಲ ಅಂದ್ರೆ ಮುಂದೇನೂ ಆಡಲ್ಲ’; ಪಾಕ್ ಪತ್ರಕರ್ತನಿಗೆ ಧವನ್ ಖಡಕ್ ರಿಪ್ಲೈ

WCL 2025: ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಮೆಂಟ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಪಂದ್ಯವನ್ನು ಆಡಲು ನಿರಾಕರಿಸಿದೆ. ಶಿಖರ್ ಧವನ್ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಮುಂದಿನ ಸೆಮಿಫೈನಲ್‌ನಲ್ಲೂ ಪಂದ್ಯ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನಿ ಆಟಗಾರರು ಮತ್ತು ಪತ್ರಕರ್ತರ ಆಕ್ರೋಶಕ್ಕೆ ಉತ್ತರಿಸಿರುವ ಧವನ್, ಈ ವಿಷಯದಲ್ಲಿ ತಮ್ಮ ನಿಲುವು ಬದಲಾಗದು ಎಂದು ತಿಳಿಸಿದ್ದಾರೆ.

WCL 2025: ‘ಆಗ ಆಡಿಲ್ಲ ಅಂದ್ರೆ ಮುಂದೇನೂ ಆಡಲ್ಲ’; ಪಾಕ್ ಪತ್ರಕರ್ತನಿಗೆ ಧವನ್ ಖಡಕ್ ರಿಪ್ಲೈ
Shikhar Dhawan
ಪೃಥ್ವಿಶಂಕರ
|

Updated on:Jul 27, 2025 | 6:35 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಎರಡನೇ ಆವೃತ್ತಿಯ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ (Worlds Championship of Legends) ಟೂರ್ನಮೆಂಟ್​ನಲ್ಲಿ ಇಂಡಿಯಾ ಚಾಂಪಿಯನ್ಸ್ (India Champions) ತಂಡ ಇದುವರೆಗೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಹಾಲಿ ಚಾಂಪಿಯನ್ ಆಗಿರುವ ಇಂಡಿಯಾ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಆದಾಗ್ಯೂ ಈ ಲೀಗ್​ನಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡ, ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ ಪಂದ್ಯವನ್ನು ಆಡಲು ನಿರಾಕರಿಸಿತು. ತಂಡದ ಈ ನಿರ್ಧಾರಕ್ಕೆ ಪಾಕ್ ತಂಡದ ಆಟಗಾರರು ಆಕ್ರೋಶ ಹೊರಹಾಕಿದ್ದರು. ಇದೀಗ ಅಂತಹದ್ದೇ ಪ್ರಶ್ನೆಯನ್ನು ಮತ್ತೊಮ್ಮೆ ಕೇಳಲಾಗಿದೆ. ಇದಕ್ಕೆ ತಂಡದ ಆಟಗಾರ ಶಿಖರ್ ಧವನ್ (Shikhar Dhawan) ಕೂಡ ಖಡಕ್ ಉತ್ತರ ನೀಡಿದ್ದಾರೆ.

ವಾಸ್ತವವಾಗಿ ಈ ಟೂರ್ನಮೆಂಟ್​ನ ಲೀಗ್ ಸುತ್ತಿನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಪರಸ್ಪರ ಆಡಬೇಕಿತ್ತು. ಆದರೆಪಂದ್ಯಕ್ಕೆ 12 ಗಂಟೆಗಳ ಮೊದಲು ಭಾರತೀಯ ಆಟಗಾರರು ಪಾಕ್ ವಿರುದ್ಧ ಆಡಲು ನಿರಾಕರಿಸಿದ್ದರಿಂದ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ಇದೀಗ ಮುಂದಿನ ಸುತ್ತಿನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೆ ಎದುರಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಪಂದ್ಯದ ಕುರಿತು ಪತ್ರಕರ್ತರೊಬ್ಬರು ಇಂಡಿಯಾ ಚಾಂಪಿಯನ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಬಳಿ ಈ ಪ್ರಶ್ನೆ ಕೇಳಿದ್ದಾರೆ.

ಶಿಖರ್ ಧವನ್ ಹೇಳಿದ್ದೇನು?

ವಾಸ್ತವವಾಗಿ ಈ ಲೀಗ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ರದ್ದಾಗಲು ಶಿಖರ್ ಧವನ್ ಪ್ರಮುಖ ಕಾರಣ ಎಂದು ಪಾಕಿಸ್ತಾನಿ ಆಟಗಾರರು ದೂಷಿಸಿದ್ದರು. ಇದೀಗ ಪಾಕಿಸ್ತಾನಿ ಪತ್ರಕರ್ತರೊಬ್ಬರು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡ, ಭಾರತದ ಎದುರಾದರೆ ಆ ಪಂದ್ಯವನ್ನು ನೀವು ಆಡುವುದಿಲ್ಲವಾ ಎಂದು ಧವನ್‌ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರವಾಗಿ ಧವನ್,‘ಅಣ್ಣ, ಈ ಪ್ರಶ್ನೆ ಕೇಳಲು ಇದು ಸರಿಯಾದ ಜಾಗವಲ್ಲ. ಆದಾಗ್ಯೂ ನೀವು ಈ ಪ್ರಶ್ನೆಯನ್ನು ಕೇಳುವುದರಿಂದ ನಾನು ಒತ್ತಡಕ್ಕೆ ಸಿಲುಕಿ ಏನಾದರೂ ಹೇಳುತ್ತೇನೆ ಎಂದು ನೀವು ಭಾವಿಸುತ್ತೀರಿ. ಆದರೆ ನಾನು ಆ ರೀತಿಯಾಗಿ ಏನನ್ನು ಹೇಳುವುದಿಲ್ಲ. ನೀವು ಈ ಪ್ರಶ್ನೆಯನ್ನು ಕೇಳಬಾರದಿತ್ತು. ಆದರೂ ಹೇಳುತ್ತೀನಿ ಕೇಳಿ, ನಾವು ಮೊದಲು ಆಡಿಲ್ಲವೆಂದಾಗ, ಈಗಲೂ ಆಡುವುದಿಲ್ಲ ಎಂದಿದ್ದಾರೆ.

ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ

ಶಿಖರ್ ಧವನ್, ಪಾಕಿಸ್ತಾನದೊಂದಿಗೆ ಪಂದ್ಯವನ್ನು ಆಡುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಆದರೆ ಬಿಸಿಸಿಐ ಮಾತ್ರ ಪಾಕಿಸ್ತಾನದ ವಿರುದ್ಧ ಏಷ್ಯಾಕಪ್​ನಲ್ಲಿ ಆಡುವುದನ್ನು ಖಚಿತಪಡಿಸಿದೆ. ಏಷ್ಯಾಕಪ್​ನಲ್ಲಿ ಎರಡೂ ತಂಡಗಳು ಒಂದೇ ಗುಂಪಿನಲ್ಲಿದ್ದು, ಟೂರ್ನಿಯಲ್ಲಿ 3 ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳಿವೆ. ಹೀಗಿರುವಾಗ ಮುಂದಿನ ದಿನಗಳಲ್ಲಿ ಬಿಸಿಸಿಐನ ಈ ನಡೆಗೆ ಭಾರತೀಯರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Sun, 27 July 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ