AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zimbabwe vs India: ಜಿಂಬಾಬ್ವೆ ನಾಡಲ್ಲಿ ಸರಣಿ ಕ್ಲೀನ್​ಸ್ವೀಪ್: ಡ್ರೆಸ್ಸಿಂಗ್ ರೂಮ್​ನಲ್ಲಿ ಭಾರತೀಯರ ಭರ್ಜರಿ ಡ್ಯಾನ್ಸ್

ಅಂತಿಮ ಮೂರನೇ ಏಕದಿನ ಪಂದ್ಯದಲ್ಲೂ ಕೆಎಲ್ ರಾಹುಲ್ (KL Rahul) ಪಡೆ 13 ರನ್​ಗಳ ರೋಚಕ ಗೆಲುವು ಸಾಧಿಸಿ ಸರಣಿ ಕ್ಲೀನ್​ಸ್ವೀಪ್ ಮಾಡಿದೆ. ಪಂದ್ಯ ಮುಗಿದ ಬಳಿಕ ಆಟಗಾರರ ಸಂಭ್ರಮಾಚರಣೆ ಕೂಡ ಭರ್ಜರಿ ಆಗಿತ್ತು. ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ.

Zimbabwe vs India: ಜಿಂಬಾಬ್ವೆ ನಾಡಲ್ಲಿ ಸರಣಿ ಕ್ಲೀನ್​ಸ್ವೀಪ್: ಡ್ರೆಸ್ಸಿಂಗ್ ರೂಮ್​ನಲ್ಲಿ ಭಾರತೀಯರ ಭರ್ಜರಿ ಡ್ಯಾನ್ಸ್
Team India celebration
TV9 Web
| Edited By: |

Updated on: Aug 23, 2022 | 11:09 AM

Share

ಜಿಂಬಾಬ್ವೆ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿರುವ ಟೀಮ್ ಇಂಡಿಯಾ (Zimbabwe vs India) ಮೂರು ಪಂದ್ಯಗಳ ಏಕದಿನ ಸರಣಿ ಪೈಕಿ ಮೂರರಲ್ಲೂ ಗೆದ್ದು ಸರಣಿ ವಶಪಡಿಸಿಕೊಂಡ ಸಾಧನೆ ಮಾಡಿದೆ. ಮೊದಲ ಪಂದ್ಯದಲ್ಲಿ 10 ವಿಕೆಟ್​ಗಳ ಅಮೋಘ ಗೆಲುವು ಕಂಡರೆ, ದ್ವಿತೀಯ ಪಂದ್ಯದಲ್ಲಿ 5 ವಿಕೆಟ್​ಗಳಿಂದ ಜಯಿಸಿತ್ತು. ಸೋಮವಾರ ನಡೆದ ಅಂತಿಮ ಮೂರನೇ ಏಕದಿನ ಪಂದ್ಯದಲ್ಲೂ ಕೆಎಲ್ ರಾಹುಲ್ (KL Rahul) ಪಡೆ 13 ರನ್​ಗಳ ರೋಚಕ ಗೆಲುವು ಸಾಧಿಸಿ ಸರಣಿ ಕ್ಲೀನ್​ಸ್ವೀಪ್ ಮಾಡಿದೆ. ಪಂದ್ಯ ಮುಗಿದ ಬಳಿಕ ಆಟಗಾರರ ಸಂಭ್ರಮಾಚರಣೆ ಕೂಡ ಭರ್ಜರಿ ಆಗಿತ್ತು. ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಶಿಖರ್ ಧವನ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪಂದ್ಯ ಮುಗಿದ ಬಳಿಕ ಎಲ್ಲ ಆಟಗಾರರು ಡ್ರೆಸ್ಸಿಂಗ್ ರೂಮ್​ನಲ್ಲಿ ಡ್ಯಾನ್ಸ್ ಮಾಡಿ ಸಂಭ್ರಮಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆಟಗಾರರ ನೃತ್ಯಕ್ಕೆ ಧವನ್ ಹಾಗೂ ನಾಯಕ ರಾಹುಲ್ ಚಾಲನೆ ನೀಡಿದರು. ಶುಭ್ಮನ್ ಗಿಲ್ ಹಾಗೂ ಇಶಾನ್ ಕಿಶನ್ ಬೊಂಬಾಟ್ ಸ್ಟೆಪ್ಸ್ ಹಾಕಿ ವಿಶೇಷವಾಗಿ ಕಾಲಾ ಚಶ್ಮಾ ಹಾಡಿಗೆ ಸಂಭ್ರಮಾಚರಣೆ ಮಾಡಿದ್ದಾರೆ. ಈ ವಿಡಿಯೋಕ್ಕೆ 1.1 ಮಿಲಿಯನ್​ಗೂ ಅಧಿಕ ಲೈಕ್ಸ್ ಬಂದಿದೆ. ಯುವರಾಜ್ ಸಿಂಗ್ ಸೇರಿದಂತೆ ಕೆಲ ಮಾಜಿ ಕ್ರಿಕೆಟಿಗರು ಕಮೆಂಟ್ ಕೂಡ ಮಾಡಿದ್ದಾರೆ.

ಇದನ್ನೂ ಓದಿ
Image
Asia Cup 2022: ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್..!
Image
Viral Video: ರನೌಟ್​ಗೆ ಅವಕಾಶವಿದ್ದರೂ ಔಟ್ ಮಾಡದ ದೀಪಕ್ ಚಹರ್..!
Image
IND vs ZIM: ಭಾರತ- ಜಿಂಬಾಬ್ವೆ ತೃತೀಯ ಏಕದಿನ ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ
Image
KL Rahul: ಕ್ಲೀನ್​ಸ್ವೀಪ್ ಸಾಧನೆ ಬಳಿಕ ನಾಯಕ ಕೆಎಲ್ ರಾಹುಲ್ ಆಡಿದ ಮಾತುಗಳೇನು ಕೇಳಿ

ತೃತೀಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಂಡಿತು. 15 ಓವರ್‌ಗಳಲ್ಲಿ 63 ರನ್‌ ಮಾತ್ರ ಗಳಿಸಿತು. ಶಿಖರ್‌ ಧವನ್‌ (40) ಮತ್ತು ಕೆ.ಎಲ್‌.ರಾಹುಲ್‌ (30) ಉತ್ತಮ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ವಿಫಲರಾದರು. ಆದರೆ, ಶುಭ್ಮನ್ ಗಿಲ್ ಮತ್ತು ಇಶಾನ್‌ ಕಿಶನ್‌ ಜತೆಯಾದ ಬಳಿಕ ಸ್ಕೋರಿಂಗ್‌ನ ವೇಗ ಹೆಚ್ಚಿತು. ಮೂರನೇ ವಿಕೆಟ್‌ಗೆ ಇವರು 140ರನ್‌ ಸೇರಿಸಿದರು.

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಮೂರು ವರ್ಷಗಳ ಬಳಿಕ ಗಿಲ್‌ ಚೊಚ್ಚಲ ಶತಕದ ಸಂಭ್ರಮ ಆಚರಿಸಿದರು. ಅಂಗಳದ ಮೂಲೆ ಮೂಲೆಗೆ ಚೆಂಡನ್ನಟ್ಟಿದ ಗಿಲ್ 97 ಎಸೆತಗಳಲ್ಲಿ ಜೀವನಶ್ರೇಷ್ಠ 130 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದ್ದವು. ಇವರಿಗೆ ಸಾಥ್ ನೀಡಿದ ಇಶಾನ್ ಕಿಶನ್ 61 ಎಸೆತಗಳಲ್ಲಿ 6 ಬೌಂಡರಿ ಬಾರಿಸಿ 50 ರನ್ ಗಳಿಸಿ ಮಿಂಚಿದರು. ಭಾರತ 50 ಓವರ್​ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 289 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.

ಗೆಲುವಿಗೆ 290 ರನ್‌ಗಳ ಕಠಿಣ ಗುರಿ ಬೆನ್ನತ್ತಿದ್ದ ಜಿಂಬಾಬ್ವೆ ತಂಡ ಆರಂಭಿಕ ವಿಕೆಟ್‌ಗಳನ್ನು ಕಳೆದುಕೊಂಡು ಸೋಲಿನ ದವಡೆಗೆ ಸಿಲುಕಿತ್ತು. ತಂಡ 145 ರನ್‌ಗೆ 6 ವಿಕೆಟ್‌ಗಳನ್ನು ಕಳೆದುಕೊಂಡ ಜಿಂಬಾಬ್ವೆ ಮತ್ತೊಮ್ಮೆ 200ರ ಒಳಗೆ ಆಲ್‌ಔಟ್‌ ಆಗಲಿದೆ ಎಂದೇ ಎಣಿಸಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದ ಮಧ್ಯಮ ಕ್ರಮಾಂಕದ ಬ್ಯಾಟರ್‌ ಸಿಖಂದರ್‌ ರಾಜಾ, 95 ಎಸೆತಗಳಲ್ಲಿ 9 ಫೋರ್‌ ಮತ್ತು 3 ಸಿಕ್ಸರ್‌ ಸಿಡಿಸಿ 115 ರನ್‌ಗಳನ್ನು ಬಾರಿಸುವ ಮೂಲಕ ತಂಡವನ್ನು ಏಕಾಂಗಿಯಾಗಿ ಜಯದ ದಡ ಮುಟ್ಟಿಸುವ ಪ್ರಯತ್ನ ಮಾಡಿದರು. ಆದರೆ, 49ನೇ ಓವರ್‌ನಲ್ಲಿ ಇವರು ಔಟಾಗುವ ಮೂಲಕ ಜಿಂಬಾಬ್ವೆ 49.3 ಓವರ್‌ಗಳಲ್ಲಿ 276 ರನ್‌ಗಳಿಗೆ ಆಲ್‌ಔಟ್‌ ಆಗಿ ಸೋಲು ಕಂಡಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ