AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಶಿಖರ್, ಋತುರಾಜ್, ಶ್ರೇಯಸ್ ಸೇರಿ 8 ಮಂದಿಗೆ ಕೊವಿಡ್ ಪಾಸಿಟಿವ್; ವೆಸ್ಟ್ ಇಂಡೀಸ್ ಸರಣಿಯ ಭವಿಷ್ಯವೇನು?

Ruturaj Gaikwad | Shreyas Iyer: ಭಾರತ ತಂಡದ 8 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಇದರಲ್ಲಿ ಭಾರತ ತಂಡದ ಅನುಭವಿ ಆಟಗಾರ ಶಿಖರ್ ಧವನ್ ಕೂಡ ಸೇರಿದ್ದಾರೆ.

Breaking: ಶಿಖರ್, ಋತುರಾಜ್, ಶ್ರೇಯಸ್ ಸೇರಿ 8 ಮಂದಿಗೆ ಕೊವಿಡ್ ಪಾಸಿಟಿವ್; ವೆಸ್ಟ್ ಇಂಡೀಸ್ ಸರಣಿಯ ಭವಿಷ್ಯವೇನು?
ಶಿಖರ್, ಋತುರಾಜ್, ಶ್ರೇಯಸ್ ಐಯ್ಯರ್
TV9 Web
| Edited By: |

Updated on:Feb 02, 2022 | 10:05 PM

Share

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಕ್ರಿಕೆಟ್ ಸರಣಿ ಮುಂದೂಡಲ್ಪಡುವ ಆತಂಕ ಎದುರಾಗಿದೆ. ಕಾರಣ, ಭಾರತ ತಂಡದ ಬ್ಯಾಟರ್​ಗಳಾದ ಶಿಖರ್ ಧವನ್ (Shikhar Dhawan), ಋತುರಾಜ್ ಗಾಯಕ್ವಾಡ್ (Ruturaj Gaikwad) ಹಾಗೂ ಶ್ರೇಯಸ್ ಐಯ್ಯರ್ (Shreyas Iyer) ಕೊವಿಡ್ ಸೋಂಕಿಗೆ ತುತ್ತಾಗಿದ್ದಾರೆ. ತಂಡದ ಒಟ್ಟು 8 ಮಂದಿಗೆ ಕೊವಿಡ್ ಸೋಂಕು ತಗುಲಿದೆ. ಈ ಕುರಿತು ಸ್ಪೋರ್ಟ್ಸ್​​​ಸ್ಟಾರ್ ವರದಿ ಮಾಡಿದೆ. ಪ್ರಸ್ತುತ ಗುಜರಾತ್​ನ ಅಹಮದಾಬಾದ್​ನಲ್ಲಿ ಟೀಂ ಇಂಡಿಯಾ ಆಟಗಾರರಿದ್ದಾರೆ. ಭಾರತ ತಂಡದ ಆಟಗಾರರು ಸೋಮವಾರ ಮೂರು ಏಕದಿನ ಪಂದ್ಯಗಳಲ್ಲಿ ಭಾಗವಹಿಸಲು ಅಹಮದಾಬಾದ್‌ಗೆ ತಲುಪಿದ್ದರು. ಆಗಮನದ ನಂತರ ಕೊವಿಡ್ ಪರೀಕ್ಷೆ ನಡೆಸಲಾಗಿದ್ದು, ಕೆಲ ಆಟಗಾರರಿಗೆ ಸೋಂಕು ಕಾಣಿಸಿಕೊಂಡಿದೆ. ಬಿಸಿಸಿಐ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ಬದಲಿ ಆಟಗಾರರನ್ನು ಪ್ರಕಟಿಸಲಿದೆ. ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಮತ್ತು 3 ಟಿ20 ಪಂದ್ಯ ಆಡಲಿದೆ. ಫೆ.6ರಂದು ಅಹಮದಾಬಾದ್‌ನಲ್ಲಿ ಏಕದಿನ ಸರಣಿ ಆರಂಭವಾಗಲಿದೆ. ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಸರಣಿಯ ದಿನಾಂಕದ ಬಗ್ಗೆ ಬಿಸಿಸಿಐ ಅಧಿಕೃತ ಸ್ಪಷ್ಟನೆ ನೀಡಬೇಕಿದೆ.

ಆಟಗಾರರಿಗೆ ಕೊವಿಡ್ ಕಾಣಿಸಿಕೊಂಡ ಕುರಿತು ಬಿಸಿಸಿಐ ಎಎನ್​ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದು, ‘ಕೆಲವು ಆಟಗಾರರು ಹಾಗೂ ತಂಡದ ಸಹಾಯಕ ಸಿಬ್ಬಂದಿಗಳಿಗೆ ಕೊರೊನಾ ದೃಢಪಟ್ಟಿದೆ. ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ’ ಎಂದು ತಿಳಿಸಿದೆ. ಈ ಕುರಿತು ಬಿಸಿಸಿಐ ಖಜಾಂಚಿ ಅರುಣ್ ಕುಮಾರ್ ಧಮಾಲ್ ಹೇಳಿಕೆ ನೀಡಿದ್ದಾರೆ.

ಎಎನ್​​ಐ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಈ ಹಿಂದೆ ಫೆಬ್ರವರಿ 6ರಂದು ಏಕದಿನ ಸರಣಿಯ ಆರಂಭ ಹಾಗೂ ಫೆಬ್ರವರಿ 16ರಂದು ಟಿ20 ರಣಿಯ ಆರಂಭ ಎಂದು ಘೋಷಿಸಲಾಗಿತ್ತು. ಇದೀಗ ಬದಲಾದ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಬದಲಿ ಆಟಗಾರರನ್ನು ಕಣಕ್ಕಿಳಿಸಲಿದೆಯೇ ಅಥವಾ ಸರಣಿಯನ್ನು ಕೆಲ ದಿನ ಮುಂದೂಡಲಿದೆಯೇ ಎಂಬುದರ ಕುರಿತು ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

ಇದನ್ನೂ ಓದಿ:

IND vs WI: ಈ ಬಾರಿ ಟೀಮ್ ಇಂಡಿಯಾಗೆ ಕಠಿಣ ಸವಾಲು: ವೆಸ್ಟ್ ಇಂಡೀಸ್ ಈ ಹಿಂದಿಗಿಂತಲೂ ಡೇಂಜರಸ್..!

ವೆಸ್ಟ್ ಇಂಡೀಸ್ ತಂಡದಲ್ಲಿ ಒಡಕು: ಟೀಮ್ ಇಂಡಿಯಾ ಸರಣಿಗೂ ಮುನ್ನ ಹೊಸ ಚಿಂತೆ ಶುರು

Published On - 9:39 pm, Wed, 2 February 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ