AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಾಡಿದ್ರೆ ಸರಿ ಹೋಗ್ಬಹುದು: ಜಡೇಜಾ-ಧವನ್ ವಿಡಿಯೋ ವೈರಲ್

Shikhar Dhawan - Ravindra Jadeja: ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಶಿಖರ್ ಧವನ್ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

Viral Video: ಮದುವೆ ಮಾಡಿದ್ರೆ ಸರಿ ಹೋಗ್ಬಹುದು: ಜಡೇಜಾ-ಧವನ್ ವಿಡಿಯೋ ವೈರಲ್
shikhar dhawan and ravindra jadeja
TV9 Web
| Edited By: |

Updated on: Sep 24, 2022 | 4:35 PM

Share

ಟೀಮ್ ಇಂಡಿಯಾ (Team India) ಆಸ್ಟ್ರೇಲಿಯಾ (India vs Australia) ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯಿಂದ ಹೊರಗುಳಿದ ಇಬ್ಬರು ಸ್ಟಾರ್ ಆಟಗಾರರೆಂದರೆ ರವೀಂದ್ರ ಜಡೇಜಾ ಹಾಗೂ ಶಿಖರ್ ಧವನ್. ಜಡೇಜಾ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದರೆ ಧವನ್ ಅವರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಿಲ್ಲ. ಹೀಗಾಗಿ ಈ ಬಾರಿಯ ಸರಣಿಯಲ್ಲಿ ಇಬ್ಬರು ಎಡಗೈ ದಾಂಡಿಗರು ಕಾಣಿಸಿಕೊಂಡಿಲ್ಲ. ಇದಾಗ್ಯೂ ಧವನ್-ಜಡೇಜಾ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಜೊತೆಯಾಗುವ ಮೂಲಕ ಅಭಿಮಾನಿಗಳನ್ನು ರಂಜಿಸುವ ಪ್ರಯತ್ನ ಮಾಡಿದ್ದಾರೆ.

ಮೊಣಕಾಲಿನ ಗಾಯದ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಚಿಕಿತ್ಸೆ ಪಡೆಯುತ್ತಿರುವ ಜಡೇಜಾರನ್ನು ಶಿಖರ್ ಧವನ್ ಭೇಟಿಯಾಗಿದ್ದಾರೆ. ಈ ವಿಡಿಯೋ ಸೆರೆ ಹಿಡಿಲಾದ ವಿಡಿಯೋವನ್ನು ಧವನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ವಿಡಿಯೋದಲ್ಲಿ ಶಿಖರ್ ಧವನ್​ ಡ್ಯಾನ್ಸ್ ಮಾಡುತ್ತಿದ್ದರೆ. ಜಡೇಜಾ, ಇವನಿಗೆ ಮದುವೆ ಮಾಡಿ ನೋಡಿ, ಜವಾಬ್ದಾರಿ ಬಂದ ಬಳಿಕ ಸುಧಾರಿಸಿಕೊಳ್ಳಬಹುದು ಎಂಬ ಬಾಲಿವುಡ್ ಚಿತ್ರದ ಡೈಲಾಗ್​ಗೆ ಲಿಪ್ ಸಿಂಕ್ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟೀಮ್ ಇಂಡಿಯಾ ಆಟಗಾರರಾದ ಅರ್ಷದೀಪ್ ಸಿಂಗ್ ಹಾಗೂ ಖಲೀಲ್ ಅಹ್ಮದ್ ಜಡ್ಡು-ಧವನ್ ಹಾಸ್ಯಾತ್ಮಕ ವಿಡಿಯೋಗೆ ನಗುವಿನ ಇಮೋಜಿ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಶಿಖರ್ ಧವನ್ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಧವನ್ ಕಾಣಿಸಿಕೊಂಡಿದ್ದರು. ಹೀಗಾಗಿ 50 ಓವರ್​ಗಳ ಪಂದ್ಯದಲ್ಲಿ ಶಿಖರ್ ಧವನ್ ಅವಕಾಶ ಪಡೆಯುವುದು ಖಚಿತ ಎನ್ನಬಹುದು. ಇನ್ನು ಗಾಯಗೊಂಡಿರುವ ರವೀಂದ್ರ ಜಡೇಜಾ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಗಲಿದೆ. ಈಗಾಗಲೇ ಟಿ20 ವಿಶ್ವಕಪ್​ಗೆ ತಂಡವನ್ನು ಘೋಷಿಸಲಾಗಿದ್ದು, ಹೀಗಾಗಿ ಜಡೇಜಾ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?