AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shoaib Akhtar: ಇದು ಅನ್ಯಾಯ…ವಾರ್ನರ್​ಗೆ ಪ್ರಶಸ್ತಿ ನೀಡಿದ ಬಗ್ಗೆ ಅಖ್ತರ್ ಆಕ್ರೋಶ

T20 World Cup 2021: ಭಾರತ, ಅಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧ ಅರ್ಧ ಶತಕಗಳನ್ನು ಬಾರಿಸಿದ್ದರು. ಅಂದರೆ ಇಲ್ಲಿ ಡೇವಿಡ್ ವಾರ್ನರ್ 7 ಪಂದ್ಯಗಳಿಂದ 289 ರನ್​ಗಳಿಸಿದರೆ, ಬಾಬರ್ ಆಜಂ 6 ಪಂದ್ಯಗಳಿಂದ 303 ರನ್​ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ.

Shoaib Akhtar: ಇದು ಅನ್ಯಾಯ...ವಾರ್ನರ್​ಗೆ ಪ್ರಶಸ್ತಿ ನೀಡಿದ ಬಗ್ಗೆ ಅಖ್ತರ್ ಆಕ್ರೋಶ
David Warner- Shoaib Akhtar
TV9 Web
| Edited By: |

Updated on: Nov 15, 2021 | 6:03 PM

Share

ಟಿ20 ವಿಶ್ವಕಪ್ (T20 World Cup 2021)​ ಮುಕ್ತಾಯಗೊಂಡಿದೆ. ಅಂತಿಮ ಹಣಾಹಣಿಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ (Australia) ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆಸ್ಟ್ರೇಲಿಯಾ ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಆಸೀಸ್ ಪಾಲಿನ ವಿಶ್ವಕಪ್ ಹೀರೋ ಎನಿಸಿಕೊಂಡಿದ್ದಾರೆ. ಏಕೆಂದರೆ ಕೊನೆಯ ಮೂರು ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸಿದ್ದು ವಾರ್ನರ್. ಅದರಲ್ಲೂ ಅದರಂತೆ ವೆಸ್ಟ್ ಇಂಡೀಸ್ ವಿರುದ್ದ 89*, ಪಾಕಿಸ್ತಾನ್ ವಿರುದ್ದದ ಸೆಮಿಫೈನಲ್​ನಲ್ಲಿ 49 ಮತ್ತು ಫೈನಲ್​ನಲ್ಲಿ 53 ರನ್​ ಬಾರಿಸಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು. ಅಷ್ಟೇ ಅಲ್ಲದೆ 7 ಪಂದ್ಯಗಳಿಂದ 289 ರನ್ ಗಳಿಸಿ ಪ್ಲೇಯರ್​ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ಭಾಜನರಾದರು. ಆದರೆ ಐಸಿಸಿ ಈ ಪ್ರಶಸ್ತಿಯನ್ನು ಡೇವಿಡ್​ ವಾರ್ನರ್​ಗೆ ನೀಡಿರುವ ಬಗ್ಗೆ ಪಾಕಿಸ್ತಾನ್ ಮಾಜಿ ವೇಗಿ ಶೊಯೇಬ್ ಅಖ್ತರ್ (Shoaib Akhtar) ಅಸಮಾಧಾನ ಹೊರಹಾಕಿದ್ದಾರೆ.

ಡೇವಿಡ್ ವಾರ್ನರ್​ಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ ನೀಡಿದ್ದು ಅನ್ಯಾಯ. ನಾನು ನಿಜವಾಗಿಯೂ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಾಕಿಸ್ತಾನ್​ ತಂಡದ ನಾಯಕ ಬಾಬರ್ ಆಜಂಗೆ ಸಿಗುವುದನ್ನು ಎದುರು ನೋಡುತ್ತಿದ್ದೆ. ಆದರೆ ಬಾಬರ್​ ಅನ್ನು ಕಡೆಗಣಿಸಿ ವಾರ್ನರ್​ಗೆ ಟ್ರೋಫಿ ನೀಡಿದ್ದು ಅನ್ಯಾಯ ಎಂದು ಶೊಯೇಬ್ ಅಖ್ತರ್ ಹೇಳಿದ್ದಾರೆ.

ಅಖ್ತರ್ ಇಂತಹದೊಂದು ಹೇಳಿಕೆ ನೀಡಲು ಮುಖ್ಯ ಕಾರಣ ಈ ಬಾರಿಯ ಟೂರ್ನಿಯಲ್ಲಿ ಬಾಬರ್ ಆಜಂ ಅವರ ಪ್ರದರ್ಶನ. 6 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪಾಕ್ ನಾಯಕ 60ರ ಸರಾಸರಿಯಲ್ಲಿ 303 ರನ್ ಗಳಿಸಿದ್ದರು. ಭಾರತ, ಅಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧ ಅರ್ಧ ಶತಕಗಳನ್ನು ಬಾರಿಸಿದ್ದರು. ಅಂದರೆ ಇಲ್ಲಿ ಡೇವಿಡ್ ವಾರ್ನರ್ 7 ಪಂದ್ಯಗಳಿಂದ 289 ರನ್​ಗಳಿಸಿದರೆ, ಬಾಬರ್ ಆಜಂ 6 ಪಂದ್ಯಗಳಿಂದ 303 ರನ್​ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ. ಹೀಗಾಗಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಬಾಬರ್ ಆಜಂಗೆ ಒಲಿಯಬೇಕಿತ್ತು. ಇದು ಅನ್ಯಾಯ ಎಂದು ಶೊಯೇಬ್ ಅಖ್ತರ್ ಹೇಳಿದ್ದಾರೆ.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(Shoaib Akhtar Feels Babar Azam Deserved To “Man Of The Tournament”)

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್