AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಈ ಸ್ಟಾರ್ ಬೌಲರ್​ಗೆ ಎಂದ ಅಖ್ತರ್

ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬರು ನೀವು ಬೌಲಿಂಗ್ ಮಾಡಲು ಅತ್ಯಂತ ಕಷ್ಟ ಪಟ್ಟ ಬ್ಯಾಟ್ಸ್​ಮನ್ ಯಾರು ಎಂದು ಕೇಳಿದ್ದರು. ಹೆಚ್ಚಿನವರು ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ ಅಥವಾ ರಿಕಿ ಪಾಂಟಿಂಗ್ ಹೆಸರನ್ನು ಗ್ರಹಿಸಿದ್ದರು. ಆದರೆ,

ನನಗೆ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಈ ಸ್ಟಾರ್ ಬೌಲರ್​ಗೆ ಎಂದ ಅಖ್ತರ್
Shoaib Akhtar
TV9 Web
| Edited By: |

Updated on: Jul 13, 2021 | 11:58 AM

Share

ಪಾಕಿಸ್ತಾನ (Pakistan) ಕ್ರಿಕೆಟ್‌ ಕಂಡ ಶ್ರೇಷ್ಠ ವೇಗಿಗಳಲ್ಲಿ ಶೋಯೆಬ್‌ ಅಖ್ತರ್ (Shoaib Akhtar) ಪ್ರಮುಖರು. 90ರ ದಶಕದಲ್ಲಿ ಬ್ಯಾಟ್ಸ್​ಮನ್​ಗಳು ಇವರ ಬೌಲಿಂಗ್ ಕಂಡರೆ ಒಂದು ಕ್ಷಣ ಯೋಚಿಸುತ್ತಿದ್ದರು. ತಮ್ಮ ವೇಗದ ಬೌಲಿಂಗ್‌ನಿಂದ ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗಳನ್ನು ಕೆಡವಬಲ್ಲ ಸಾಮರ್ಥ್ಯ ಅವರಲ್ಲಿತ್ತು. ಲೈನ್‌ ಅಂಡ್‌ ಲೆನ್ತ್‌ ಮೂಲಕ ಅಖ್ತರ್ ಬೌನ್ಸರ್‌ ಹಾಕಿದರೆ ಬ್ಯಾಟ್ಸ್​ಮನ್ ಭಯ ಪಡುತ್ತಿದ್ದಿದ್ದು ಸುಳ್ಳಲ್ಲ. ಇಂತಹ ಅಪಾಯಕಾರಿ ಬೌಲರ್​ಗೂ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಓರ್ವ ಬೌಲರ್​ಗಂತೆ.

ಹೌದು, ಈ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡಿರುವ ಶೋಯೆಬ್, ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ನನಗೆ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಶ್ರೀಲಂಕಾ ತಂಡ ಲೆಜೆಂಡ್ ಸ್ಪಿನ್ನರ್ ಮುತ್ತಯ್ಯ ಮುರಳೀಧರ್ ಅವರಿಗೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬರು ನೀವು ಬೌಲಿಂಗ್ ಮಾಡಲು ಅತ್ಯಂತ ಕಷ್ಟ ಪಟ್ಟ ಬ್ಯಾಟ್ಸ್​ಮನ್ ಯಾರು ಎಂದು ಕೇಳಿದ್ದರು. ಹೆಚ್ಚಿನವರು ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ ಅಥವಾ ರಿಕಿ ಪಾಂಟಿಂಗ್ ಹೆಸರನ್ನು ಗ್ರಹಿಸಿದ್ದರು. ಆದರೆ, ಈ ಪ್ರಶ್ನೆಗೆ ಅಖ್ತರ್ ನೀಡಿದ ಉತ್ತರ ಅಭಿಮಾನಿಗಳಲ್ಲಿ ಅಚ್ಚರಿಗೆ ಕಾರಣವಾಯಿತು.

“ನಾನು ಬೌಲಿಂಗ್ ಮಾಡಿದ ಕಷ್ಟಪಟ್ಟ ಬ್ಯಾಟ್ಸ್​ಮನ್​ ಎಂದರೆ ಅದು ಮುತ್ತಯ್ಯ ಮುರಳೀಧರನ್. ನಿಜ ನಾನು ತಮಾಷೆ ಮಾಡುತ್ತಿಲ್ಲ. ಮುತರಳೀಧರನ್‌ ಅವರನ್ನು ಔಟ್ ಮಾಡಲು ಹಲವು ಬೌನ್ಸರ್‌ಗಳನ್ನು ಹಾಕಿದೆ. ಆದರೆ ಆ ವೇಳೆ ಅವರು ದಯವಿಟ್ಟು ಬೌನ್ಸರ್‌ಗಳನ್ನು ಹಾಕಬೇಡಿ, ನನಗೆ ಚೆಂಡು ಬಿದ್ದರೆ ನಾನು ಖಂಡಿತಾ ಸಾಯುತ್ತೇನೆ. ನನ್ನ ಹಾದಿಯಲ್ಲಿ ಬೌನ್ಸರ್‌ಗಳನ್ನು ಹಾಕಬೇಡಿ. ಪಿಚ್ ಬಾಲ್ ಹಾಕಿದರೆ ನಾನೇ ನಿನಗೆ ಕ್ಯಾಚ್ ನೀಡುತ್ತೇನೆಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

ಶೋಯೆಬ್‌ ಅಖ್ತರ್‌ ತಮ್ಮ ವೃತ್ತಿ ಜೀವನದಲ್ಲಿ 46 ಟೆಸ್ಟ್ ಪಂದ್ಯಗಳಾಡಿದ್ದು, 178 ವಿಕೆಟ್‌ಗಳನ್ನು ಪಡೆದಿದ್ದಾರೆ ಹಾಗೂ 163 ಏಕದಿನ ಪಂದ್ಯಗಳಿಂದ 247 ವಿಕೆಟ್‌ಗಳನ್ನು ಕಿತ್ತಿದ್ದಾರೆ. 15 ಟಿ-20 ಪಂದ್ಯಗಳಿಂದ 19 ವಿಕೆಟ್‌ಗಳನ್ನು ಸೇರಿಸಿಕೊಂಡಿದ್ದಾರೆ.

Follow Us
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಇಂದು ಈ ರಾಶಿಯವರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ
ಇಂದು ಈ ರಾಶಿಯವರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ
ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್
ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್