Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾವನ್ನು ನಾವು ಮಕಾಡೆ ಮಲಗಿಸುತ್ತಿದ್ದೆವು…ಈಗ ಏನಾಗಿದೆ ನೋಡಿ: ಶೊಯೆಬ್ ಅಖ್ತರ್

India vs Pakistan: ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಟ್ಟು 208 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಪಾಕಿಸ್ತಾನ್ ತಂಡ 88 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಭಾರತ ತಂಡ ಗೆದ್ದಿರುವುದು 76 ಪಂದ್ಯಗಳನ್ನು ಮಾತ್ರ. ಇದಾಗ್ಯೂ 2000 ರಿಂದ ಟೀಮ್ ಇಂಡಿಯಾ ಪಾಕ್ ವಿರುದ್ಧ ಪಾರುಪತ್ಯ ಮರೆಯುತ್ತಾ ಬರುತ್ತಿದೆ.

ಟೀಮ್ ಇಂಡಿಯಾವನ್ನು ನಾವು ಮಕಾಡೆ ಮಲಗಿಸುತ್ತಿದ್ದೆವು...ಈಗ ಏನಾಗಿದೆ ನೋಡಿ: ಶೊಯೆಬ್ ಅಖ್ತರ್
Shoaib Akhtar
Follow us
ಝಾಹಿರ್ ಯೂಸುಫ್
|

Updated on: Mar 11, 2025 | 10:30 AM

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಮೂರು ಬಾರಿ ಚಾಂಪಿಯನ್ಸ್​ ಟ್ರೋಫಿ ಗೆದ್ದ ವಿಶ್ವದ ಏಕೈಕ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ 2002 ರಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ 2013 ರಲ್ಲಿ ಧೋನಿ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿಯಿತು.

ಇಂತಹ ಯಶಸ್ಸಿಗೆ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯ ವ್ಯವಸ್ಥೆ ಎಂದು ಅಭಿಪ್ರಾಯಪಟ್ಟಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್. ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ಬಳಿಕ ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಶೊಯೆಬ್ ಅಖ್ತರ್, 2000 ಕ್ಕಿಂತ ಮೊದಲು 2002 ರವರೆಗೆ ಪಾಕಿಸ್ತಾನ್ ವಿರುದ್ಧ ಗೆಲ್ಲುವ ಬಗ್ಗೆ ಭಾರತಕ್ಕೆ ಯೋಚಿಸಲೂ ಸಾಧ್ಯವಾಗುತ್ತಿರಲಿಲ್ಲ. ಇದಂತು ನಿಜ. ನಾವು ಅವರನ್ನು ಅವರ ಮನೆಯಲ್ಲಿ ಸಾಧ್ಯವಾದಷ್ಟು ಸೋಲಿಸಿದ್ದೆವು. ಆದರೆ ಆ ಬಳಿಕ ಎಲ್ಲವೂ ಬದಲಾಯಿತು.

ಇದ್ದಕ್ಕಿದ್ದಂತೆ ಭಾರತ ತಂಡದ ನಾಯಕ ಬದಲಾಯಿತು. ಟೀಮ್ ಇಂಡಿಯಾಗೆ ಸೌರವ್ ಗಂಗೂಲಿ ನಾಯಕರಾದರು. ಅವರು ಹೊಸ ತಂಡವನ್ನು ಕಟ್ಟಿದರು. ಸೌರವ್ ಗಂಗೂಲಿ ಮುಂದಾಳತ್ವದಲ್ಲಿ ಭಾರತ ತಂಡಕ್ಕೆ ಹೊಸ ಕಾಯಕಲ್ಪ ಲಭಿಸಿತು. ಆ ಬಳಿಕ ಧೋನಿ ನಾಯಕರಾದರು. ಅವರು ಸಹ ಇದೇ ಯೋಜನೆಯನ್ನು ಮುಂದುವರೆಸಿದರು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಹೊಸ ಸಿಬ್ಬಂದಿಗಳು ಬಂದರು. ಹೊಸ ಹೊಸ ಯೋಜನೆಗಳು ರೂಪುಗೊಂಡವು. ಕೋಚ್ ಆಗಿ ಬಂದ ರವಿಶಾಸ್ತ್ರಿ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಿದರು. ಇದೀಗ ಅದರ ಫಲವಾಗಿ ಟೀಮ್ ಇಂಡಿಯಾ ವಿಶ್ವದ ಅತ್ಯುತ್ತಮ ತಂಡವಾಗಿ ಗುರುತಿಸಿಕೊಂಡಿದೆ. ಹೀಗೆ ಬಲಿಷ್ಠ ತಂಡದ ಯಶಸ್ಸಿನ ಹಿಂದೆ ಟೀಮ್ ಇಂಡಿಯಾದ 20 ವರ್ಷಗಳ ಕಠಿಣ ಪರಿಶ್ರಮವಿದೆ ಎಂದು ಶೊಯೆಬ್ ಅಖ್ತರ್ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್​ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ..!

ಈ 20 ವರ್ಷಗಳ ಕಠಿಣ ಪರಿಶ್ರಮದ ಫಲವಾಗಿ ನಾವು ಸತತವಾಗಿ ಸೋಲಿಸುತ್ತಿದ್ದ ಟೀಮ್ ಇಂಡಿಯಾ ಇಂದು ನಮ್ಮ ವಿರುದ್ಧ ಅತ್ಯಂತ ಸುಲಭವಾಗಿ ಗೆಲ್ಲುತ್ತಿದೆ. ವಿಶ್ವದ ಅತ್ಯುತ್ತಮ ತಂಡವಾಗಿ ಗುರುತಿಸಿಕೊಂಡಿದೆ. ಇದಕ್ಕೆ ಸಾಕ್ಷಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿನ ಪ್ರದರ್ಶನ ಎಂದು ಶೊಯೆಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!