AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ನಿವೃತ್ತಿ ನೀಡಲಿ ಎಂದ ಪಾಕ್ ಕ್ರಿಕೆಟಿಗ

T20 World Cup 2022: ವಿರಾಟ್ ಕೊಹ್ಲಿ ಆಡಿದ್ರೂ ಸಮಸ್ಯೆ, ಆಡದಿದ್ದರೂ ಸಮಸ್ಯೆ...ಅವರ ಹೆಸರಿನಲ್ಲಿ ಕೆಲವರು ಸದಾ ಚರ್ಚೆಯಲ್ಲಿರುತ್ತಾರೆ. ಅಂತಹವರಲ್ಲಿ ನೀವು ಕೂಡ ಒಬ್ಬರು.

Virat Kohli: ವಿರಾಟ್ ಕೊಹ್ಲಿ ನಿವೃತ್ತಿ ನೀಡಲಿ ಎಂದ ಪಾಕ್ ಕ್ರಿಕೆಟಿಗ
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on:Oct 26, 2022 | 2:26 PM

Share

T20 World Cup 2022: ಟಿ20 ವಿಶ್ವಕಪ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ವಿರಾಟ್ ಕೊಹ್ಲಿ (Virat Kohli) ಮತ್ತೊಮ್ಮೆ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಕೆಲ ತಿಂಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕೊಹ್ಲಿ ಏಷ್ಯಾಕಪ್​ ಮೂಲಕ ಲಯಕ್ಕೆ ಮರಳಿದ್ದರು. ಇದೀಗ ಆಸ್ಟ್ರೇಲಿಯಾ ಪಿಚ್​ನಲ್ಲಿ ಬಲಿಷ್ಠ ವೇಗದ ಬೌಲಿಂಗ್ ಲೈನಪ್ ಹೊಂದಿರುವ ಪಾಕ್ ತಂಡದ ವಿರುದ್ಧವೇ ಅಬ್ಬರಿಸುವ ಮೂಲಕ ತಮ್ಮ ಹಳೆಯ ಖದರ್ ತೋರಿಸಿದ್ದಾರೆ. ಆದರೆ ಈ ಅಬ್ಬರದ ಬೆನ್ನಲ್ಲೇ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಿಂದ ನಿವೃತ್ತಿ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್.

ಪಾಕಿಸ್ತಾನ್​ ವಿರುದ್ಧದ ಟೀಮ್ ಇಂಡಿಯಾ ಗೆಲುವಿನ ಬಳಿಕ ಮಾತನಾಡಿದ ಅಖ್ತರ್, ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಿಂದ ನಿವೃತ್ತರಾದರೆ ಉತ್ತಮ. ಏಕೆಂದರೆ ಆತ ತನ್ನೆಲ್ಲಾ ಎನರ್ಜಿಯನ್ನು ಟಿ20 ಕ್ರಿಕೆಟ್​ನಲ್ಲಿ ಹಾಕುತ್ತಿರುವುದು ನನಗೆ ಯಾಕೋ ಸರಿ ಕಾಣುತ್ತಿಲ್ಲ ಎಂದಿದ್ದಾರೆ.

ಅಷ್ಟೇ ಅಲ್ಲದೆ ಪಾಕಿಸ್ತಾನ್ ವಿರುದ್ಧ ವಿರಾಟ್ ಕೊಹ್ಲಿ ಆಡಿದ ರೀತಿಯನ್ನು ನೋಡಿದರೆ, ಅವರು ಏಕದಿನ ಕ್ರಿಕೆಟ್​ನಲ್ಲಿ 3 ಶತಕ ಬಾರಿಸಬಹುದಿತ್ತು. ಅಂತಹದೊಂದು ಬದ್ಧತೆಯನ್ನು ಅವರು ಆ ಪಂದ್ಯದಲ್ಲಿ ತೋರಿಸಿದ್ದರು. ಹೀಗಾಗಿ ತಮ್ಮೆಲ್ಲಾ ಸಾಮರ್ಥ್ಯವನ್ನು ಟಿ20 ಕ್ರಿಕೆಟ್​ನಲ್ಲಿ ವ್ಯಯಿಸುರುತ್ತಿರುವುದು ನನಗೆ ಸರಿ ಕಾಣುತ್ತಿಲ್ಲ. ಹೀಗಾಗಿ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ನೀಡಿ ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನತ್ತ ಹೆಚ್ಚಿನ ಗಮನ ನೀಡಬೇಕೆಂದು ನಾನು ಬಯಸುತ್ತೇನೆ ಎಂದು ಶೊಯೇಬ್ ಅಖ್ತರ್ ತಿಳಿಸಿದ್ದಾರೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಇತ್ತ ಶೊಯೇಬ್ ಅಖ್ತರ್ ಅವರ ಈ ಹೇಳಿಕೆಯನ್ನು ಇದೀಗ ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ. ಒಬ್ಬ ಆಟಗಾರ ಟಿ20 ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರೆ, ಏಕದಿನ ಕ್ರಿಕೆಟ್​ನಲ್ಲೂ ಲೀಲಾಜಾಲವಾಗಿ ಬ್ಯಾಟ್ ಬೀಸಬಹುದಲ್ಲವೇ ಎಂದು ಅನೇಕರು ಪ್ರಶ್ನಿಸಿದ್ದಾರೆ.

ವಿರಾಟ್ ಕೊಹ್ಲಿ ಆಡಿದ್ರೂ ಸಮಸ್ಯೆ, ಆಡದಿದ್ದರೂ ಸಮಸ್ಯೆ…ಅವರ ಹೆಸರಿನಲ್ಲಿ ಕೆಲವರು ಸದಾ ಚರ್ಚೆಯಲ್ಲಿರುತ್ತಾರೆ. ಅಂತಹವರಲ್ಲಿ ನೀವು ಕೂಡ ಒಬ್ಬರು ಎಂದು ಶೊಯೇಬ್ ಅಖ್ತರ್ ಅವರ ಹೇಳಿಕೆಯನ್ನು ಕೊಹ್ಲಿ ಅಭಿಮಾನಿಯೊಬ್ಬರು ವ್ಯಂಗ್ಯವಾಡಿದ್ದಾರೆ.

Published On - 2:24 pm, Wed, 26 October 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ