AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

Shreyanka Patil Injury: ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಹಿನ್ನಡೆಯಾಗಿದೆ. ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿ ಸ್ಟ್ರೆಚರ್ ಮೂಲಕ ಹೊರಗೆ ಕರೆದೊಯ್ಯಲ್ಪಟ್ಟಿದ್ದಾರೆ. ಅವರಿಗೆ ನಡೆಯಲು ಸಾಧ್ಯವಾಗದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕ್ಯಾನ್ ವರದಿ ಬಂದ ಬಳಿಕ ಗಾಯದ ತೀವ್ರತೆ ಸ್ಪಷ್ಟವಾಗಲಿದೆ. ಇದು ಭಾರತದ ವಿಶ್ವಕಪ್ ಆಸೆಗಳಿಗೆ ದೊಡ್ಡ ಆಘಾತ ನೀಡಿದೆ.

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ
Shreyanka Patil
ಪೃಥ್ವಿಶಂಕರ
|

Updated on:Jun 17, 2026 | 10:33 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಖಚಿತವಾಗಿ ತಿಳಿಯಲಿದೆ.

ಶ್ರೇಯಾಂಕಾಗೆ ಗಂಭೀರ ಗಾಯ

ಟೀಂ ಇಂಡಿಯಾ ನೀಡಿದ 209 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡದ ಇನ್ನಿಂಗ್ಸ್‌ನ ಆರನೇ ಓವರ್‌ನ ಮೊದಲ ಎಸೆತದಲ್ಲಿ ಈ ದುರಂತ ಸಂಭವಿಸಿತು. ಈ ಪಂದ್ಯದಲ್ಲಿ ಮೊದಲ ಓವರ್ ಬೌಲ್ ಮಾಡಲು ಬಂದ ಶ್ರೇಯಾಂಕ ಪಾಟೀಲ್ ಎಸೆದ ಮೊದಲ ಎಸೆತವನ್ನು ಸ್ಟ್ರೈಕ್‌ನಲ್ಲಿದ್ದ ಮೊಲ್ಕೆನ್‌ಬೋರ್ ಮಿಡ್-ಆನ್ ಕಡೆಗೆ ಆಡಿದರು. ಹೀಗಾಗಿ ಶ್ರೇಯಾಂಕ ಬೌಲಿಂಗ್ ಮಾಡಿದ ಬಳಿಕ ಚೆಂಡನ್ನು ಹಿಡಿಯಲು ಅದರ ಹಿಂದೆ ಓಡಿದರು. ಚೆಂಡಿನ ಬಳಿ ಹೋದ ಶ್ರೇಯಾಂಕ ಅದನ್ನು ತೆಗೆದುಕೊಳ್ಳಲು ಕೆಳಕ್ಕೆ ಬಾಗಿದರು. ಈ ಪ್ರಕ್ರಿಯೆಯಲ್ಲಿ ಶ್ರೇಯಾಂಕ ಸಮತೋಲನ ಕಳೆದುಕೊಂಡರು. ಹೀಗಾಗಿ ಅವರ ಬಲಗಾಲು ತಿರುಚಿತು.

ಇದರಿಂದ ಶ್ರೇಯಾಂಕ ತೀವ್ರ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲು ಶುರು ಮಾಡಿದರು. ಶ್ರೇಯಂಕಾ ನೋವಿನಿಂದ ಬಳಲುತ್ತಿರುವುದನ್ನು ನೋಡಿದ ಅಂಪೈರ್‌ಗಳು ಮತ್ತು ತಂಡದ ಸದಸ್ಯರು ತಕ್ಷಣವೇ ಫಿಸಿಯೋ ಅವರನ್ನು ಮೈದಾನಕ್ಕೆ ಕರೆಸಿದರು. ಶ್ರೇಯಾಂಕ ಅವರನ್ನು ಪರೀಕ್ಷಿಸಿದ ಫಿಸಿಯೋ ಪ್ರಥಮ ಚಿಕಿತ್ಸೆಯ ಬಳಿಕ ಅವರನ್ನು ಡಗೌಟ್​ಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದರು. ಆದರೆ ಶ್ರೇಯಾಂಕಗೆ ಸರಿಯಾಗಿ ನಿಲ್ಲಲು ಸಹ ಸಾಧ್ಯವಾಗಲಿಲ್ಲ.

ಕಣ್ಣೀರಿಡುತ್ತ ಮೈದಾನ ತೊರೆದ ಶ್ರೇಯಾಂಕ

ಹೀಗಾಗಿ ಕಾರ್ಟ್ ಮತ್ತು ಸ್ಟ್ರೆಚರ್ ಅನ್ನು ತಕ್ಷಣವೇ ಮೈದಾನಕ್ಕೆ ತರಬೇಕಾಯಿತು. ಶ್ರೇಯಂಕಾ ಅವರನ್ನು ಸ್ಟ್ರೆಚರ್‌ ಮೇಲೆ ಮಲಗಿಸಿ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು. ಶ್ರೇಯಂಕಾ ಮೈದಾನದಿಂದ ಹೊರಡುವಾಗ ಕಣ್ಣೀರಿಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಹಾಗೆಯೇ ಅವರ ಮುಖದಲ್ಲಿ ನೋವು ಮತ್ತು ನಿರಾಶೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ತಂಡದ ಇತರ ಆಟಗಾರ್ತಿಯರು ಕೂಡ ಶ್ರೇಯಾಂಕರನ್ನು ಬೇಸರದಲ್ಲೇ ಬೀಳ್ಕೊಟ್ಟರು.

Women’s T20 World Cup 2026: ಟಿ20 ವಿಶ್ವಕಪ್​ನಲ್ಲಿ ದಾಖಲೆ ಬರೆದ ಸ್ಮೃತಿ- ಶಫಾಲಿ ಜೋಡಿ

ಈ ಹಿಂದೆಯೂ ಶ್ರೇಯಾಂಕರನ್ನು ಕಾಡಿದ್ದ ಗಾಯ

ಶ್ರೇಯಾಂಕ ಪಾಟೀಲ್ ಗಾಯಕ್ಕೆ ತುತ್ತಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಕಾಲು ಮತ್ತು ಬೆರಳಿನ ಗಾಯಗಳಿಂದ ಬಳಲುತ್ತಿದ್ದರು. ಇದೀಗ ಶ್ರೇಯಾಂಕ ಹೊಸ ಗಾಯಕ್ಕೆ ತುತ್ತಾಗಿರುವುದು ತಂಡವನ್ನು ಸಂಕಷ್ಟಕ್ಕೀಡು ಮಾಡಿದೆ. ಏಕೆಂದರೆ ಶ್ರೇಯಾಂಕ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದರು. ಇದಕ್ಕೂ ಮೊದಲು, 2024 ರ ಏಷ್ಯಾಕಪ್ ಸಮಯದಲ್ಲಿ, ಶ್ರೇಯಾಂಕಾ ಅವರ ಬೆರಳಿಗೆ ಗಂಭೀರವಾದ ಗಾಯವಾಗಿತ್ತು. ಹೀಗಾಗಿ ಅವರು 14 ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ಹೊರಗಿದ್ದರು. ಇದರ ಜೊತೆಗೆ ಐಪಿಎಲ್ ಸಮಯದಲ್ಲೂ ಶ್ರೇಯಾಂಕ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಇದೀಗ ಐಸಿಸಿ ಟೂರ್ನಿಯಲ್ಲಿ ಶ್ರೇಯಾಂಕ ಗಾಯಗೊಂಡಿದ್ದಾರೆ. ದೇವರ ದಯೆಯಿಂದ ಶ್ರೇಯಾಂಕಗೆ ಆಗಿರುವ ಗಾಯ ಗಂಭೀರವಾಗಿರದೆ ಅವರು ತಂಡದ ಪರ ಆದಷ್ಟು ಬೇಗ ಕಣಕ್ಕಿಳಿಯಲಿ ಎಂಬುದು ಕೋಟ್ಯಾಂತರ ಭಾರತೀಯರ ಪ್ರಾರ್ಥನೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:06 pm, Wed, 17 June 26

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!