AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Squad for IRE T20Is: ಕಣಕ್ಕಿಳಿಯಲು ಇನ್ನೂ ಸಿದ್ಧರಾಗಿಲ್ಲ: ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗದ ರಾಹುಲ್, ಅಯ್ಯರ್

India vs Ireland T20I: ಭಾರತ ಹಾಗೂ ವೆಸ್ಟ್ ಇಂಡೀಸ್ ಸರಣಿಯ ಮುಕ್ತಾಯದ ನಂತರ, ಜಸ್​ಪ್ರೀತ್ ಬುಮ್ರಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲು ಐರ್ಲೆಂಡ್‌ಗೆ ಪ್ರಯಾಣಿಸಲಿದೆ.ಆದರೆ, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಈ ಸರಣಿಯಿಂದ ಕೂಡ ಹೊರಗುಳಿಯಲಿದ್ದಾರೆ.

IND Squad for IRE T20Is: ಕಣಕ್ಕಿಳಿಯಲು ಇನ್ನೂ ಸಿದ್ಧರಾಗಿಲ್ಲ: ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗದ ರಾಹುಲ್, ಅಯ್ಯರ್
Iyer Rahul and bumrah
Vinay Bhat
|

Updated on: Aug 01, 2023 | 10:11 AM

Share

ಭಾರತ ಕ್ರಿಕೆಟ್ ತಂಡ ಸದ್ಯ ಕೆರಿಬಿನ್ ಪ್ರವಾಸದಲ್ಲಿದೆ. ಇದಾದ ಬಳಿಕ ಐರ್ಲೆಂಡ್​ಗೆ (India vs Ireland) ತೆರಳಲಿದೆ. ಇದರ ನಡುವೆ ಮುಂಬರುವ ಭಾರತ ಹಾಗೂ ಐರ್ಲೆಂಡ್ ನಡುವಣ ಸರಣಿಗೆ ಟೀಮ್ ಇಂಡಿಯಾವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ತಂಡಕ್ಕೆ ಮರಳಿದ್ದು ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಆದರೆ, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ (KL Rahul) ಈ ಸರಣಿಯಿಂದ ಕೂಡ ಹೊರಗುಳಿಯಲಿದ್ದಾರೆ. ಇವರಿಬ್ಬರು ಇನ್ನೂ ಕ್ರಿಕೆಟ್ ಆಡಲು ಸಾಕಷ್ಟು ಫಿಟ್ ಆಗಿಲ್ಲ ಎಂದು ವರದಿ ಆಗಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ಸರಣಿಯ ಮುಕ್ತಾಯದ ನಂತರ, ಜಸ್​ಪ್ರೀತ್ ಬುಮ್ರಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲು ಐರ್ಲೆಂಡ್‌ಗೆ ಪ್ರಯಾಣಿಸಲಿದೆ. ಈ ಪಂದ್ಯಾವಳಿಗೆ ಬಿಸಿಸಿಐ ಹೆಚ್ಚು ಯುವ ಆಟಗಾರರನ್ನೇ ಆಯ್ಕೆ ಮಾಡಿದ್ದು, ರುತುರಾಜ್ ಗಾಯಕ್ವಾಡ್​ಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಇದು ಮುಂಬರುವ ಏಷ್ಯಾಕಪ್ ಮತ್ತು ಐಸಿಸಿ ಏಕದಿನ ವಿಶ್ವಕಪ್‌ಗೆ ತಂಡವನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.

Virat Kohli: ಮೂರನೇ ಏಕದಿನ ಪಂದ್ಯಕ್ಕೂ ವಿರಾಟ್ ಕೊಹ್ಲಿ ಡೌಟ್..!

ಇದನ್ನೂ ಓದಿ
Image
Brian Lara Stadium Pitch Report: ಭಾರತ-ವೆಸ್ಟ್ ಇಂಡೀಸ್ ಹೈವೋಲ್ಟೇಜ್ 3ನೇ ಏಕದಿನ ಪಂದ್ಯ ನಡೆಯಲಿರುವ ಪಿಚ್ ಹೇಗಿದೆ?
Image
WI squad T20 vs IND: ಭಾರತ ವಿರುದ್ಧದ ಟಿ20 ಸರಣಿ ವೆಸ್ಟ್ ಇಂಡೀಸ್ ತಂಡ ಪ್ರಕಟ; ಇಬ್ಬರು ಸ್ಫೋಟಕ ಬ್ಯಾಟರ್ಸ್ ಸೇರ್ಪಡೆ
Image
IND vs WI 3rd ODI: ಇಂದು ಭಾರತ-ವೆಸ್ಟ್ ಇಂಡೀಸ್ ಕೊನೆಯ ಏಕದಿನ: ಉಭಯ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ
Image
Ashes 2023: ರಣರೋಚಕ ಪಂದ್ಯದಲ್ಲಿ ಗೆದ್ದ ಇಂಗ್ಲೆಂಡ್: ಸ್ಟುವರ್ಟ್​ ಬ್ರಾಡ್​ಗೆ ಗೆಲುವಿನ ವಿದಾಯ

ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಇಬ್ಬರೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಬ್ಯಾಟಿಂಗ್ ಅಭ್ಯಾಸವನ್ನು ಪುನರಾರಂಭಿಸಿದ್ದಾರೆ. ಆದರೆ, ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಂಪೂರ್ಣ ಫಿಟ್ ಆಗಿಲ್ಲವಂತೆ. ಆದಾಗ್ಯೂ, ಇವರಿಬ್ಬರು ಏಷ್ಯಾಕಪ್‌ಗೆ ಮರಳುವ ಸಾಧ್ಯತೆಯಿದೆ. ರಾಹುಲ್ ಅವರು ಏಕದಿನದಲ್ಲಿ ಭಾರತದ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ. ಅಯ್ಯರ್ ಏಷ್ಯಾಕಪ್‌ನಲ್ಲಿ ಆಡಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಿದೆ. ಈ ಮೂಲಕ ಇವರಿಬ್ಬರು ವಿಶ್ವಕಪ್‌ಗೆ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಕಾಯುತ್ತಿದ್ದಾರೆ.

ಇದರ ನಡವೆ ಕೆಎಲ್ ರಾಹುಲ್ ಕೆಲ ದಿನಗಳ ವರೆಗೆ ಎನ್‌ಸಿಎಯಿಂದ ವಿರಾಮ ತೆಗೆದುಕೊಳ್ಳಲಿದ್ದಾರಂತೆ. ಅಯ್ಯರ್ ಅವರು ಬೆಂಗಳೂರಿನಲ್ಲಿ ತಮ್ಮ ಪುನರ್ವಸತಿ ಮುಂದುವರಿಸಿದ್ದಾರೆ. ಕೆಎಲ್ ರಾಹುಲ್ ಐಪಿಎಲ್ 2023 ರ ಸಂದರ್ಭದಲ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು, ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಮತ್ತೊಂದೆಡೆ, ಅಯ್ಯರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು.

ಭಾರತ-ಐರ್ಲೆಂಡ್ ಸರಣಿ ವೇಳಾಪಟ್ಟಿ:

  • ಒಟ್ಟು ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ
  • ಆಗಸ್ಟ್ 18 ರಂದು ಮೊದಲ ಟಿ20 ಪಂದ್ಯ
  • 2ನೇ ಪಂದ್ಯವು ಆಗಸ್ಟ್ 20 ರಂದು ಜರುಗಲಿದೆ
  • 3ನೇ ಪಂದ್ಯ ಆಗಸ್ಟ್ 22 ರಂದು ಆಯೋಜಿಸಲಾಗಿದೆ
  • ಈ ಎಲ್ಲಾ ಪಂದ್ಯಗಳಿಗೆ ಡಬ್ಲಿನ್​ನ ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ

ಐರ್ಲೆಂಡ್ ಸರಣಿಗೆ ಭಾರತ ಟಿ20 ತಂಡ:

ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಶಹಬಾಝ್ ಅಹ್ಮದ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ