AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಕ್ಯಾಚ್ ಹಿಡಿದ ಖುಷಿಯಲ್ಲಿ ಶ್ರೇಯಸ್ ಅಯ್ಯರ್ ಬೊಂಬಾಟ್ ಡ್ಯಾನ್ಸ್: ವಿಡಿಯೋ ವೈರಲ್

IND vs WI 1st ODI: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರು ಕ್ರೀಸ್ ಕಚ್ಚಿ ಆಡಿ ಭಾರತಕ್ಕೆ ಮಾರಕವಾಗಿದ್ದ ಶಮರ್ ಬ್ರೂಕ್ಸ್ ಅವರನ್ನು ಔಟ್ ಮಾಡಿದಾಗ ಖುಷಿಯಿಂದ ಡ್ಯಾನ್ಸ್ ಕೂಡ ಮಾಡಿದರು.

Shreyas Iyer: ಕ್ಯಾಚ್ ಹಿಡಿದ ಖುಷಿಯಲ್ಲಿ ಶ್ರೇಯಸ್ ಅಯ್ಯರ್ ಬೊಂಬಾಟ್ ಡ್ಯಾನ್ಸ್: ವಿಡಿಯೋ ವೈರಲ್
Shreyas Iyer IND vs WI 1st ODI
TV9 Web
| Edited By: |

Updated on:Jul 23, 2022 | 10:34 AM

Share

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಕೊನೆಯ ಓವರ್​ನಲ್ಲಿ ನಡೆದ ಹೈಡ್ರಾಮದಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸಿತು. ಅಂತಿಮ ಹಂತದ ವರೆಗೂ ಕೆರಿಬಿಯನ್ ಬ್ಯಾಟರ್​ಗಳು ಗೆಲುವಿಗೆ ಕಠಿಣ ಹೋರಾಟ ನಡೆಸಿದರು. ಆದರೆ, ಮೊಹಮ್ಮದ್ ಸಿರಾಜ್ ಎಸೆತದ 50ನೇ ಓವರ್ ಹಾಗೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (Sanju Samson) ಅವರ ಚುರುಕುತನ ಪಂದ್ಯದ ಗತಿಯನ್ನೇ ಬದಲಾಯಿಸಿತು. ಶ್ರೇಯಸ್ ಅಯ್ಯರ್ (Shreyas Iyer) ಕೂಡ ಈ ಪಂದ್ಯದಲ್ಲಿ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು. ಬ್ಯಾಟಿಂಗ್​ನಲ್ಲಿ 57 ಎಸೆತಗಳನ್ನು ಎದುರಿಸಿದ ಅಯ್ಯರ್ 5 ಫೋರ್ ಹಾಗೂ 2 ಸಿಕ್ಸರ್ ಸಿಡಿಸಿ 54 ರನ್​ಗಳ ಕಾಣಿಕೆ ನೀಡಿದರು. ಜೊತೆಗೆ ಫೀಲ್ಡಿಂಗ್​ನಲ್ಲೂ ಎರಡು ಕ್ಯಾಚ್ ಹಿಡಿದು ತಂಡಕ್ಕೆ ನೆರವಾದರು.

ಅದರಲ್ಲೂ ಅಯ್ಯರ್ ಅವರು ಕ್ರೀಸ್ ಕಚ್ಚಿ ಆಡಿ ಭಾರತಕ್ಕೆ ಮಾರಕವಾಗಿದ್ದ ಶಮರ್ ಬ್ರೂಕ್ಸ್ ಅವರನ್ನು ಔಟ್ ಮಾಡಿದಾಗ ಖುಷಿಯಿಂದ ಡ್ಯಾನ್ಸ್ ಕೂಡ ಮಾಡಿದರು. ಅರ್ಧಶತಕದ ಅಂಚಿನಲ್ಲಿ ಬ್ಯಾಟ್ ಬೀಸುತ್ತಿದ್ದ ಬ್ರೂಕ್ಸ್ 24ನೇ ಓವರ್​ನ ಶಾರ್ದೂಲ್ ಠಾಕೂರ್ ಬೌಲಿಂಗ್​ನಲ್ಲಿ ಪುಲ್ ಶಾಟ್ ಹೊಡೆಯುವ ಪ್ರಯತ್ನ ಮಾಡಿದರು. ಆದರೆ, ಚೆಂಡು ಬ್ಯಾಟ್​ಗೆ ಸರಿಯಾಗಿ ಟೈಮ್ ಆಗದ ಕಾರಣ ದೂರ ಸಾಗಲಿಲ್ಲ. ಡೀಪ್ ಸ್ಕ್ವೇರ್​ ಲೆಗ್​ನಲ್ಲಿ ನಿಂತಿದ್ದ ಅಯ್ಯರ್ ಕ್ಯಾಚ್ ಹಿಡಿದರು. ಈ ಸಂದರ್ಭ ಅಯ್ಯರ್ ಖುಷಿಯಿಂದ ನೃತ್ಯ ಮಾಡುತ್ತಾ ಸಂಭ್ರಮಾಚರಣೆ ಮಾಡಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
IND vs WI: ಭಾರತ-ವೆಸ್ಟ್​ ಇಂಡೀಸ್ ಮೊದಲ ಏಕದಿನ ಪಂದ್ಯದ ಕೆಲ ರೋಚಕ ಫೋಟೋಗಳು
Image
Shikhar Dhawan: ರಣ ರೋಚಕ ಜಯದ ಬಳಿಕ ನಾಯಕ ಶಿಖರ್ ಧವನ್ ಏನು ಹೇಳಿದರು ನೋಡಿ
Image
IND vs WI ODI: 50ನೇ ಓವರ್, 6 ಬಾಲ್, 15 ರನ್: ಭಾರತಕ್ಕೆ ರೋಚಕ ಜಯ ತಂದುಕೊಟ್ಟ ಸ್ಯಾಮ್ಸನ್-ಸಿರಾಜ್

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ಓಪನರ್​ಗಳಾದ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ 119 ರನ್​ ಬಾರಿಸಿದರು. ಗಿಲ್ ಅರ್ಧಶತಕ ಸಿಡಿಸಿ ಔಟಾದರೆ, ನಂತರ ಶ್ರೇಯಸ್ ಅಯ್ಯರ್ ಜೊತೆಯಾದ ಧವನ್ ಮತ್ತೊಂದು ಅಮೋಘ ಇನ್ನಿಂಗ್ಸ್​ ಕಟ್ಟಿದರು. ಧವನ್ 97 ರನ್​ಗೆ ಬ್ಯಾಟ್ ಕೆಳಗಿಟ್ಟರು. ಇದರ ಬೆನ್ನಲ್ಲೆ ಅರ್ಧಶತಕ ಸಿಡಿಸಿ ಅಯ್ಯರ್ ಕೂಡ ನಿರ್ಗಮಿಸಿದರು. ಭಾರತ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿತು.

309 ರನ್‌ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ ನಂತರ ಖೈಲ್ ಮೇಯೆಯರ್ಸ್ (75) ಹಾಗೂ ಶಮರ್ ಬ್ರೂಕ್ಸ್ (46) ಭರ್ಜರಿ ಬ್ಯಾಟಿಂಗ್ ನಡೆಸಿದರು. ಬ್ರಾಂಡನ್ ಕಿಂಗ್ ಕೂಡ 66 ಎಸೆತಗಳಲ್ಲಿ 54 ರನ್ ಗಳಿಸಿದರು. ಅಖೆಲ್ ಹುಸೈನ್ (32*) ಹಾಗೂ ರೊಮಾರಿಯೊ ಶೆಫೆರ್ಡ್ (39*) ಕೊನೆ ಕ್ಷಣದಲ್ಲಿ ಜಯಕ್ಕೆ ಸಾಕಷ್ಟು ಹೋರಾಟ ನಡೆಸಿದರೂ ಅದು ಸಾಧ್ಯವಾಗಲಿಲ್ಲ. ವಿಂಡೀಸ್ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 305 ರನ್ ಗಳಿಸಿ ಸೋಲು ಕಂಡಿತು.

Published On - 10:34 am, Sat, 23 July 22

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ