AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಅಯ್ಯರ್​ಗೆ ತಲೆನೋವಾದ ಪ್ಲೇಯಿಂಗ್ XI: ಮೊದಲ ಪಂದ್ಯಕ್ಕೆ ತಂಡದಲ್ಲಿಲ್ಲ ಸ್ಟಾರ್ ಪ್ಲೇಯರ್ಸ್

KKR Playing XI vs CSK, IPL 2022: ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಾರ್ಚ್ 26 ರಂದು ನಡೆಯಲಿರುವ ಐಪಿಎಲ್ 2022ರ ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಕಣಕ್ಕಿಳಿಯಲಿದೆ. ಹೀಗಿರುವಾಗ ಪ್ರಮುಖ ಆಟಗಾರರ ಗೈರಿನ ನಡುವೆ ಚೆನ್ನೈ ವಿರುದ್ಧದ ಕದನಕ್ಕೆ ಪ್ಲೇಯಿಂಗ್ ಇಲೆವೆನ್ ಹೇಗೆ ಕಟ್ಟಬೇಕು ಎಂಬುದು ಅಯ್ಯರ್​ಗೆ ಟೆನ್ಶನ್ ಶುರುವಾಗಿದೆ.

Shreyas Iyer: ಅಯ್ಯರ್​ಗೆ ತಲೆನೋವಾದ ಪ್ಲೇಯಿಂಗ್ XI: ಮೊದಲ ಪಂದ್ಯಕ್ಕೆ ತಂಡದಲ್ಲಿಲ್ಲ ಸ್ಟಾರ್ ಪ್ಲೇಯರ್ಸ್
TV9 Web
| Updated By: Vinay Bhat|

Updated on: Mar 22, 2022 | 12:04 PM

Share

ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದಲ್ಲಿ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಾರ್ಚ್ 26 ರಂದು ನಡೆಯಲಿರುವ ಐಪಿಎಲ್ 2022ರ (IPL 2022) ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಬಾರಿ ಬಹುದೊಡ್ಡ ಜವಾಬ್ದಾರಿ ಹೊತ್ತ ಶ್ರೇಯಸ್ ಅಯ್ಯರ್​​ಗೆ ಆರಂಭದಲ್ಲೇ ತಲೆನೋವು ಶುರುವಾಗಿದೆ. ತಂಡದ ಸ್ಟಾರ್ ಆಟಗಾರರಾದ ಪ್ಯಾಟ್ ಕಮಿನ್ಸ್, ಆ್ಯರೋನ್ ಫಿಂಚ್ ಸೇರಿದಂತೆ ಇನ್ನೂ ಕೆಲ ಆಟಗಾರರು ಆರಂಭದ ಕೆಲವು ಪಂದ್ಯಗಳಿಗೆ ಗೈರಾಗಲಿದ್ದಾರೆ. ಫಿಂಚ್ ಮತ್ತು ಕಮಿನ್ಸ್ (Pat Cummins) ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಡಲಿರುವ ಕಾರಣ ಸಿಎಸ್​ಕೆ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹಾಲಿ ಚಾಂಪಿಯನ್ ಬಲಿಷ್ಠ ಧೋನಿ ಪಡೆಯನ್ನು ಸೋಲಿಸುವುದು ಸುಲಭದ ಮಾತಲ್ಲ. ಇದಕ್ಕಾಗಿ ತಂಡದಲ್ಲಿ ಅನುಭವಿ ಆಟಗಾರರ ಅವಶ್ಯಕತೆಯಿದೆ. ಹೀಗಿರುವಾಗ ಪ್ರಮುಖ ಆಟಗಾರರ ಗೈರಿನ ನಡುವೆ ಚೆನ್ನೈ ವಿರುದ್ಧದ ಕದನಕ್ಕೆ ಪ್ಲೇಯಿಂಗ್ ಇಲೆವೆನ್ ಹೇಗೆ ಕಟ್ಟಬೇಕು ಎಂಬುದು ಅಯ್ಯರ್​ಗೆ ಟೆನ್ಶನ್ ಶುರುವಾಗಿದೆ.

ಮೆಗಾ ಹರಾಜಿಗೂ ಮುನ್ನ ಕೆಕೆಆರ್ ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನೀಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಅವರನ್ನು ತನ್ನಲ್ಲೇ ಉಳಿಸಿಕೊಂಡಿತ್ತು. ಹರಾಜಿನಲ್ಲಿ ಶಿವಂ ಮಾವಿ ಮತ್ತು ನಿತೀಶ್ ರಾಣರನ್ನು ಮತ್ತೆ ಸೇರಿಸಿಕೊಂಡಿತು. ಕಳೆದ ವರ್ಷ ಕೋಲ್ಕತ್ತಾದ ಭಾಗವಾಗಿದ್ದ ಶುಭ್ಮನ್ ಗಿಲ್ ಗುಜರಾತ್ ಟೈಟಾನ್ಸ್ ಪಾಲಾದರೆ, ರಾಹುಲ್ ತ್ರಿಪಾಠಿ ಸನ್​ರೈಸರ್ಸ್​ ತನ್ನ ತೆಕ್ಕೆಗೆ ಪಡೆದುಕೊಂಡಿತ್ತು. ಹೀಗಾಗಿ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಇನ್ನೂ ಖಚಿತವಾಗಿಲ್ಲ.

ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಣಕ್ಕಿಳಿಯುತ್ತಾರ ಅಥವಾ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಬರುತ್ತಾರ ಎಂಬುದು ಫೈನಲ್ ಆಗಿಲ್ಲ. ಫಾರ್ಮ್​ನಲ್ಲಿ ಇಲ್ಲದ, ಟೀಮ್ ಇಂಡಿಯಾದಿಂದಲೂ ಹೊರಬಿದ್ದಿರುವ ಅಜಿಂಕ್ಯಾ ರಹಾನೆ ಅವರು ಆ್ಯರೋನ್ ಫಿಂಚ್ ಅನುಪಸ್ಥಿತಿಯಲ್ಲಿ ಓಪನರ್ ಆಗಿ ಆಡಬೇಕಿದೆ. ನಿತೀಶ್ ರಾಣ ಮತ್ತು ಶ್ರೇಯಸ್ ಅಯ್ಯರ್ ಮೂರು ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಸ್ಯಾಮ್ ಬಿಲ್ಲಿಂಗ್ಸ್ ಮುಂದಿನ ಸ್ಥಾನದಲ್ಲಿ ಆಡಲಿದ್ದಾರೆ. ಇತರೆ ಆಯ್ಕೆ ಇಲ್ಲದ ಕಾರಣ ಇವರೇ ವಿಕೆಟ್ ಕೀಪಿಂಗ್ ಜವಾಬ್ದಾರಿ ಕೂಡ ನಿರ್ವಹಿಸಲಿದ್ದಾರೆ.

ಸುನೀಲ್ ನರೈನ್ ಮತ್ತು ಆಂಡ್ರೆ ರಸೆಲ್ ಮೂಲಕ ಕೆಕೆಆರ್ ಬ್ಯಾಟಿಂಗ್ ಆಯ್ಕೆ ಮುಕ್ತಾಯಗೊಳ್ಳಲಿದೆ. ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಟಿಮ್ ಸೌಥೀ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಉಮೇಶ್ ಯಾದವ್, ಶಿವಂ ಮಾವಿ ಮತ್ತು ವರುಣ್ ಚಕ್ರವರ್ತಿ ಇವರಿಗೆ ಸಾಥ್ ನೀಡಬೇಕಿದೆ. ಹೀಗೆ ಪ್ರಮುಖ ಅನುಭವಿ ಆಟಗಾರರ ಗೈರಿನ ನಡುವೆ ಕೆಕೆಆರ್ ತಂಡ ಐಪಿಎಲ್ 2022ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲು ತಯಾರಾಗಿದೆ.

ಕೆಕೆಆರ್ ಸಂಭಾವ್ಯ ಪ್ಲೇಯಿಂಗ್ XI: ವೆಂಕಟೇಶ್ ಅಯ್ಯರ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ನಿತೀಶ್ ರಾಣ, ಸ್ಯಾಮ್ ಬಿಲ್ಲಿಂಗ್ಸ್, ಆಂಡ್ರೆ ರಸೆಲ್, ಸುನೀಲ್ ನರೈನ್, ಟಿಮ್ ಸೌಥೀ, ಶಿವಂ ಮಾವಿ, ವರುಣ್ ಚಕ್ರವರ್ತಿ, ಉಮೇಶ್ ಯಾದವ್.

ಈ ಸಲ್ ಕಮ್ ನಮ್ದೆ ಎಂದ ಉಮೇಶ್ ಯಾದವ್:

ಐಪಿಎಲ್ 2022 ಹರಾಜಿನಲ್ಲಿ 2 ಕೋಟಿಗೆ ಕೆಕೆಆರ್ ಪಾಲಾದ ಮಾಜಿ ಆರ್​ಸಿಬಿ ಆಟಗಾರ ಉಮೇಶ್ ಯಾದವ್ ಕೊಲ್ಕತ್ತಾ ನೈಟ್ ರೈಸರ್ಸ್ ತಂಡ ಈ ಬಾರಿ ಕಪ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕೆಕೆಆರ್ ತಂಡಕ್ಕೆ ಮತ್ತೆ ವಾಪಸ್ ಆಗಿದ್ದಕ್ಕೆ ತುಂಬಾ ಖುಷಿಯಾಗಿದೆ. ಈ ಬಾರಿ ಕಪ್ ಗೆಲ್ಲೋದೆ ನಮ್ಮ ಗುರಿ. 2014 ರಲ್ಲಿ ನಾನು ಕೆಕೆಆರ್ ಪರ ಮಾಡಿದಾಗ ಟ್ರೋಫಿ ಗೆದ್ದಿದ್ದೇವು. ಕೆಕೆಆರ್ ನನ್ನ ಪಾಲಿಗೆ ಅದೃಷ್ಟದ ತಂಡ. ನನ್ನ ಫಿಟ್ನೆಸ್ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ನಾನು ಚೆನ್ನಾಗಿದ್ದೇನೆ. ಹಾಗಾಗಿ ಈ ಸೀಸನ್‌ಗಾಗಿ ಎದುರು ನೋಡುತ್ತಿದ್ದೇವೆ”, ಎಂದು ಉಮೇಶ್ ಹೇಳಿದ್ದಾರೆ.

RCB: ಶಾಕಿಂಗ್: ಆರ್​ಸಿಬಿ ತಂಡ ಸೇರಿದ ಒಂದೇ ಒಂದು ಪಂದ್ಯವನ್ನಾಡದ 18 ವರ್ಷದ ಆಟಗಾರ

Virat Kohli: ಎದುರಾಳಿಗರಲ್ಲಿ ಭಯ ಶುರು: ಹೊಸದಾಗಿ ಆರ್​ಸಿಬಿ ತಂಡ ಸೇರಿಕೊಂಡಿದ್ದು ಯಾರು ನೋಡಿ

ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್