AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಶ್ರೇಯಸ್ ಅಯ್ಯರ್ ಇಂಜುರಿ: ಆಫ್ರಿಕಾ ವಿರುದ್ಧದ ಸರಣಿಗಾಗಿ 4ನೇ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ

India vs South Africa ODI Series: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಗಂಭೀರ ಗಾಯಕ್ಕೆ ಒಳಗಾಗಿದ್ದು, ದಕ್ಷಿಣ ಆಫ್ರಿಕಾ ಸರಣಿಗೆ ಅವರ ಬದಲಿಗೆ ಯಾರು ಆಡಲಿದ್ದಾರೆ ಎಂಬ ಅನುಮಾನ ಮೂಡಿದೆ. ಇವರ ಸ್ಥಾನಕ್ಕೆ ಯಾವ ಆಟಗಾರ ಎಂಬ ಕುರಿತು ಚರ್ಚೆಗಳು ಪ್ರಾರಂಭವಾಗಿವೆ. ಈ ವರದಿಯಲ್ಲಿ, ನಾವು ಅಂತಹ ಮೂವರು ಆಟಗಾರರು ಯಾರು ಎಂಬುದನ್ನು ನೋಡೋಣ.

Shreyas Iyer: ಶ್ರೇಯಸ್ ಅಯ್ಯರ್ ಇಂಜುರಿ: ಆಫ್ರಿಕಾ ವಿರುದ್ಧದ ಸರಣಿಗಾಗಿ 4ನೇ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ
Shreyas Iyer And Tilak Varma
ಮಾಲಾಶ್ರೀ ಅಂಚನ್​
| Edited By: |

Updated on:Oct 28, 2025 | 5:20 PM

Share

ಬೆಂಗಳೂರು (ಅ. 28): ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (Shreyas Iyer) ಗಾಯಗೊಂಡರು. ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ಅವರು ವೈದ್ಯಕೀಯವಾಗಿ ಸ್ಥಿರವಾಗಿದ್ದರೂ, ಬಿಸಿಸಿಐ ವೈದ್ಯಕೀಯ ತಂಡದ ಸದಸ್ಯರು ಸಿಡ್ನಿಯಲ್ಲಿ ಅವರೊಂದಿಗೆ ಇದ್ದಾರೆ. ಅಯ್ಯರ್ ಚೇತರಿಕೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಇದರ ಮಧ್ಯೆ ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಮುಂದಿನ ಏಕದಿನ ಸರಣಿ ನವೆಂಬರ್ 30 ರಂದು ತವರಿನಲ್ಲಿ ಆರಂಭವಾಗಲಿದೆ. ಅಯ್ಯರ್ ಈ ಸರಣಿಗೆ ಅಲಭ್ಯರಾದರೆ ಇವರ ಸ್ಥಾನಕ್ಕೆ ಯಾವ ಆಟಗಾರ ಎಂಬ ಕುರಿತು ಚರ್ಚೆಗಳು ಪ್ರಾರಂಭವಾಗಿವೆ. ಈ ವರದಿಯಲ್ಲಿ, ನಾವು ಅಂತಹ ಮೂವರು ಆಟಗಾರರು ಯಾರು ಎಂಬುದನ್ನು ನೋಡೋಣ.

ಸಂಜು ಸ್ಯಾಮ್ಸನ್ ಮೊದಲ ಆಯ್ಕೆ

ಮೊದಲ ಮತ್ತು ಪ್ರಮುಖ ಆಯ್ಕೆ ಸಂಜು ಸ್ಯಾಮ್ಸನ್. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ ಅವರು ಆಯ್ಕೆ ಆಗಲಿದ್ದಾರೆ, ಅವರು ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಅವರನ್ನು ತಂಡದಿಂದ ಹೊರಗಿಡಲಾಯಿತು. ಈಗ ನಾಲ್ಕನೇ ಸ್ಥಾನ ಖಾಲಿಯಾಗಿರುವುದರಿಂದ ಸ್ಯಾಮ್ಸನ್‌ಗೆ ಅವಕಾಶ ಸಿಗುವ ಸಂಭವವಿದೆ. ವಿಶೇಷವಾಗಿ ಕಳೆದ ಏಕದಿನ ಸರಣಿಯಲ್ಲಿ ಅವರು ಪ್ರದರ್ಶಿಸಿದ ಫಾರ್ಮ್ ಅನ್ನು ಪರಿಗಣಿಸಿದರೆ, ಉತ್ತಮ ಆಯ್ಕೆ ಎನ್ನಬಹುದು. ಸ್ಯಾಮ್ಸನ್ ಇಲ್ಲಿಯವರೆಗೆ 16 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು 56.66 ರ ಪ್ರಭಾವಶಾಲಿ ಸರಾಸರಿಯಲ್ಲಿ 510 ರನ್ ಗಳಿಸಿದ್ದಾರೆ. ಅವರ ಹೆಸರಿಗೆ ಒಂದು ಶತಕ ಮತ್ತು ಮೂರು ಅರ್ಧಶತಕಗಳಿವೆ. ಅವರು ಅಯ್ಯರ್ ಬದಲಿಗೆ ನಾಲ್ಕನೇ ಸ್ಥಾನದಲ್ಲಿ ಸುಲಭವಾಗಿ ಹೊಂದಿಕೊಳ್ಳಬಹುದು ಮತ್ತು ಸಾಕಷ್ಟು ರನ್ ಗಳಿಸಬಹುದು.

ತಿಲಕ್ ವರ್ಮಾಗೆ ಏಕದಿನ ಪಂದ್ಯಗಳಲ್ಲಿ ಅವಕಾಶ ಸಿಗುತ್ತದೆಯೇ?

ಇನ್ನೊಂದು ಹೆಸರು ತಿಲಕ್ ವರ್ಮಾ. ಕಳೆದ ತಿಂಗಳು ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್‌ನೊಂದಿಗೆ ತಿಲಕ್ ವರ್ಮಾ ಸ್ಟಾರ್ ಆದರು. ಅವರು 2023 ರಲ್ಲಿ ಬಾಂಗ್ಲಾದೇಶ ವಿರುದ್ಧ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಇಲ್ಲಿಯವರೆಗೆ, ಅವರು ನಾಲ್ಕು ಪಂದ್ಯಗಳಲ್ಲಿ ಕೇವಲ 68 ರನ್ ಗಳಿಸಿದ್ದಾರೆ. ಏಷ್ಯಾ ಕಪ್‌ನಲ್ಲಿ ಅವರ ಅದ್ಭುತ ಪ್ರದರ್ಶನದ ನಂತರ, ಅವರು ಉತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ಆತ್ಮವಿಶ್ವಾಸದಿಂದ ತುಂಬಿದ್ದಾರೆ.

ಇದನ್ನೂ ಓದಿ
Image
WPL 2026: RCB ಉಳಿಸಿಕೊಳ್ಳುವ 5 ಆಟಗಾರ್ತಿಯರು ಇವರೇ..!
Image
ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ: ಯಾರಿಗೆ ಚಾನ್ಸ್​?
Image
IND vs AUS: ತಂಡದಲ್ಲಿ ಇರದ ವಿರಾಟ್ ಕೊಹ್ಲಿಯೇ ನಂಬರ್ ೧
Image
ಗ್ರೀನ್ ಹೋಗಿ ಪಿಂಕಾದ ಪಾಕ್ ಜೆರ್ಸಿ: ಕಾರಣವೇನು ಗೊತ್ತಾ?

WPL 2026: RCB ಉಳಿಸಿಕೊಳ್ಳುವ 5 ಆಟಗಾರ್ತಿಯರು ಇವರೇ..!

ರಿಯಾನ್ ಪರಾಗ್ ಮತ್ತೆ ಸಿಗುತ್ತ ಅವಕಾಶ?

ಮೂರನೇ ಆಯ್ಕೆ ರಿಯಾನ್ ಪರಾಗ್. ರಿಯಾನ್ ಪರಾಗ್ ಕಳೆದ ವರ್ಷ ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಗಾಯದ ಕಾರಣದಿಂದಾಗಿ ಅವರನ್ನು ಹೊರಗಿಡಲಾಯಿತು. ಅವರು ಕೇವಲ ಒಂದು ಪಂದ್ಯವನ್ನು ಆಡಿದರಷ್ಟೆ. ಇದರಲ್ಲಿ 15 ರನ್ ಗಳಿಸಿದರು ಮತ್ತು ಮೂರು ವಿಕೆಟ್‌ಗಳನ್ನು ಪಡೆದರು. ಅವರು ಭಾರತಕ್ಕಾಗಿ ಒಂಬತ್ತು ಟಿ 20 ಪಂದ್ಯಗಳನ್ನು ಆಡಿದ್ದಾರೆ, ಆರು ಇನ್ನಿಂಗ್ಸ್‌ಗಳಲ್ಲಿ 106 ರನ್ ಗಳಿಸಿ, ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ. ಪರಾಗ್ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು ಮತ್ತು ಹೆಚ್ಚುವರಿ ಬೌಲಿಂಗ್ ಆಯ್ಕೆಯನ್ನು ಒದಗಿಸುತ್ತಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Tue, 28 October 25

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ