AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: ಟಿ20 ರ‍್ಯಾಂಕಿಂಗ್​ನಲ್ಲಿ 27 ಸ್ಥಾನ ಮೇಲಕ್ಕೇರಿದ ಶ್ರೇಯಸ್; ಟಾಪ್ 10 ರಿಂದ ಕೊಹ್ಲಿ ಔಟ್!

Shreyas Iyer: ಶ್ರೇಯಸ್ ಅಯ್ಯರ್ ಈಗ ಟಿ20 ರ್ಯಾಂಕಿಂಗ್‌ನಲ್ಲಿ 18ನೇ ಸ್ಥಾನಕ್ಕೇರಿದ್ದಾರೆ. ಅದೇ ಸಮಯದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಟಾಪ್-10 ರ‍್ಯಾಂಕಿಂಗ್‌ನಿಂದ ಹೊರಬಿದ್ದಿದ್ದಾರೆ.

ICC T20 Rankings: ಟಿ20 ರ‍್ಯಾಂಕಿಂಗ್​ನಲ್ಲಿ 27 ಸ್ಥಾನ ಮೇಲಕ್ಕೇರಿದ ಶ್ರೇಯಸ್; ಟಾಪ್ 10 ರಿಂದ ಕೊಹ್ಲಿ ಔಟ್!
ಶ್ರೇಯಸ್
TV9 Web
| Edited By: |

Updated on:Mar 02, 2022 | 3:27 PM

Share

ಐಸಿಸಿ ಟಿ20 ಶ್ರೇಯಾಂಕದಲ್ಲಿ (ICC T20 Rankings) ಶ್ರೇಯಸ್ ಅಯ್ಯರ್ ದೊಡ್ಡ ಲಾಭ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ತಮ್ಮ ಅಮೋಘ ಪ್ರದರ್ಶನದಿಂದ 27 ಸ್ಥಾನ ಮೇಲಕ್ಕೇರಿದ್ದಾರೆ. ಶ್ರೇಯಸ್ ಅಯ್ಯರ್ (Shreyas Iyer) ಈಗ ಟಿ20 ರ್ಯಾಂಕಿಂಗ್‌ನಲ್ಲಿ 18ನೇ ಸ್ಥಾನಕ್ಕೇರಿದ್ದಾರೆ. ಅದೇ ಸಮಯದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಟಾಪ್-10 ರ‍್ಯಾಂಕಿಂಗ್‌ನಿಂದ ಹೊರಬಿದ್ದಿದ್ದಾರೆ. ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯ ಭಾಗವಾಗಿರಲಿಲ್ಲ. ಹೀಗಾಗಿ ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಜಯ ಸಾಧಿಸಿತು. ಇದು ಆಟಗಾರರ ಶ್ರೇಯಾಂಕದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಶ್ರೇಯಸ್ ಅಯ್ಯರ್ ಸರಣಿಯಲ್ಲಿ 174 ಸ್ಟ್ರೈಕ್ ರೇಟ್‌ನಲ್ಲಿ 204 ರನ್ ಗಳಿಸಿದರು.

ಮತ್ತೊಂದೆಡೆ, ಭುವನೇಶ್ವರ್ ಕುಮಾರ್ ಬೌಲರ್‌ಗಳಲ್ಲಿ ಮೂರು ಸ್ಥಾನ ಮೇಲಕ್ಕೆ ಜಿಗಿದಿದ್ದಾರೆ. ಇದೀಗ ಅವರು 17ನೇ ಸ್ಥಾನದಲ್ಲಿದ್ದಾರೆ. ಭಾರತ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾದ ಪಾತುಮ್ ನಿಸಂಕಾ 75 ರನ್ ಗಳಿಸಿದ್ದರು. ಇದರಿಂದಾಗಿ ಆರು ಸ್ಥಾನ ಮೇಲೇರಿ ಒಂಬತ್ತನೇ ಸ್ಥಾನಕ್ಕೆ ಬಂದಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಮೊಹಮ್ಮದ್ ವಾಸಿಮ್ ಕೂಡ ಟಿ 20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶ್ರೇಯಾಂಕ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಐಸಿಸಿ ಪುರುಷರ T20 ವಿಶ್ವಕಪ್ ಕ್ವಾಲಿಫೈಯರ್ A ನ ಫೈನಲ್‌ನಲ್ಲಿ ಐರ್ಲೆಂಡ್ ವಿರುದ್ಧ ಅಜೇಯ ಶತಕವು 12 ನೇ ಸ್ಥಾನವನ್ನು ತಲುಪಲು ಸಹಾಯ ಮಾಡಿತು. ಇದು ಯಾವುದೇ ಯುಎಇ ಬ್ಯಾಟ್ಸ್‌ಮನ್‌ನ ಅತ್ಯುತ್ತಮ ಶ್ರೇಯಾಂಕವಾಗಿದೆ, ಇದಕ್ಕೂ ಮೊದಲು ಶೈಮನ್ ಅನ್ವರ್ 2017 ರಲ್ಲಿ 13 ನೇ ಸ್ಥಾನ ಗಳಿಸಿದ್ದರು.

ಬೌಲರ್‌ಗಳ ಪಟ್ಟಿ

ಶ್ರೀಲಂಕಾದ ಲಹಿರು ಕುಮಾರ ಮೊದಲ ಬಾರಿಗೆ ಅಗ್ರ 40 ಬೌಲರ್‌ಗಳ ಪಟ್ಟಿಗೆ ಪ್ರವೇಶಿಸಿದ್ದಾರೆ. ಯುಎಇ ಬೌಲರ್ ಜಹ್ರು ಖಾನ್ 17 ಸ್ಥಾನ ಮೇಲೇರಿ 42ನೇ ಹಾಗೂ ಐರ್ಲೆಂಡ್‌ನ ಜೋಶ್ ಲಿಟಲ್ 27 ಸ್ಥಾನ ಮೇಲೇರಿ 49ನೇ ಸ್ಥಾನ ಪಡೆದಿದ್ದಾರೆ. ರೋಹನ್ ಮುಸ್ತಫಾ ಆಲ್‌ರೌಂಡರ್ ಶ್ರೇಯಾಂಕದಲ್ಲಿ ಆರನೇ ಸ್ಥಾನಕ್ಕೆ ಏರಿದ್ದಾರೆ. ಫೆಬ್ರವರಿ 2020 ರಲ್ಲಿ ಐದನೇ ಶ್ರೇಯಾಂಕದ ಅವರ ಅತ್ಯುತ್ತಮ ಶ್ರೇಯಾಂಕಕ್ಕಿಂತ ಕೇವಲ ಒಂದು ಸ್ಥಾನಕ್ಕಿಂತ ಕೆಳಗಿದ್ದಾರೆ.

ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಟೆಸ್ಟ್ ಶ್ರೇಯಾಂಕದಲ್ಲಿ ಅತಿದೊಡ್ಡ ಜಿಗಿತ ಮಾಡಿದ್ದಾರೆ, ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನದ ನಂತರ ಮೂರು ಸ್ಥಾನಗಳ ಏರಿಕೆಯೊಂದಿಗೆ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಎರಡು ಪಂದ್ಯಗಳ ಸರಣಿಯಲ್ಲಿ ರಬಾಡ 10 ವಿಕೆಟ್ ಕಬಳಿಸಿದರು. ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್ ಐದನೇ ಮತ್ತು ಟಿಮ್ ಸೌಥಿ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಟೆಸ್ಟ್ ಬ್ಯಾಟ್ಸ್‌ಮನ್ ಪಟ್ಟಿ

ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರ ಶ್ರೇಯಾಂಕದ ಟೆಸ್ಟ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ. ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಆರು ಸ್ಥಾನಗಳನ್ನು ಗಳಿಸಿ 17 ನೇ ಸ್ಥಾನದಲ್ಲಿದ್ದಾರೆ. ODI ಶ್ರೇಯಾಂಕದಲ್ಲಿ, ಬಾಂಗ್ಲಾದೇಶ ವಿರುದ್ಧದ ಇತ್ತೀಚಿನ ಮೂರು ಪಂದ್ಯಗಳ ಸರಣಿಯ ನಂತರ ಅಫ್ಘಾನಿಸ್ತಾನದ ಅನುಭವಿ ಸ್ಪಿನ್ನರ್ ರಶೀದ್ ಖಾನ್ ಟಾಪ್ 10 ಬೌಲರ್‌ಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಅವರು ಆರು ಸ್ಥಾನ ಮೇಲೇರಿ ಒಂಬತ್ತನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶದ ಮೆಹದಿ ಹಸನ್ ಮಿರಾಜ್ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ.

ಶ್ರೀಲಂಕಾದ ಲಿಟನ್ ದಾಸ್ ಅವರು ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ನಡುವಿನ ODI ಸರಣಿಯಲ್ಲಿ ಟಾಪ್ ರನ್ ಸ್ಕೋರರ್ ಆಗಿದ್ದು, ಅವರ ವೃತ್ತಿಜೀವನದ ಅತ್ಯುತ್ತಮ 32 ನೇ ಶ್ರೇಯಾಂಕವನ್ನು ತಲುಪಿದ್ದಾರೆ. ಟ್ರೆಂಟ್ ಬೌಲ್ಟ್ ಏಕದಿನ ಬೌಲರ್‌ಗಳಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದರೆ, ಪಾಕಿಸ್ತಾನದ ಬಾಬರ್ ಅಜಮ್ ಬ್ಯಾಟ್ಸ್‌ಮನ್‌ಗಳಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ:ICC T20 Rankings: ಟಿ20 ರ‍್ಯಾಂಕಿಂಗ್​ನಲ್ಲಿ 27 ಸ್ಥಾನ ಮೇಲಕ್ಕೇರಿದ ಶ್ರೇಯಸ್; ಟಾಪ್ 10 ರಿಂದ ಕೊಹ್ಲಿ ಔಟ್!

Published On - 3:16 pm, Wed, 2 March 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ