AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand 1st Test: ಟೀಮ್ ಇಂಡಿಯಾ ಡಿಕ್ಲೇರ್ ಮಾಡಿದ ಹಿಂದಿನ ರೋಚಕ ಸತ್ಯ ಬಿಚ್ಚಿಟ್ಟ ಶ್ರೇಯಸ್ ಅಯ್ಯರ್

Shreyas Iyer: 4ನೇ ದಿನದಾಟದಲ್ಲಿ ಬೇಗನೆ ಡಿಕ್ಲೇರ್ ಮಾಡಿಕೊಂಡು ನ್ಯೂಜಿಲೆಂಡ್ ತಂಡದ ಹೆಚ್ಚಿನ ವಿಕೆಟ್ ಕಬಳಿಸಿ ಒತ್ತಡಕ್ಕೆ ಸಿಲುಕಿಸುವ ಅವಕಾಶವಿದ್ದರೂ ಭಾರತ ವಿಳಂಬ ಮಾಡಿತು ಎಂಬ ಅಭಿಪ್ರಾಯ ಕೇಳಿಬಂದಿತ್ತು. ಈ ಪ್ರಶ್ನೆಗೆ ಶ್ರೇಯಸ್ ಅಯ್ಯರ್ ಖಡಕ್ ಆಗಿ ಉತ್ತರ ನೀಡಿದ್ದಾರೆ.

India vs New Zealand 1st Test: ಟೀಮ್ ಇಂಡಿಯಾ ಡಿಕ್ಲೇರ್ ಮಾಡಿದ ಹಿಂದಿನ ರೋಚಕ ಸತ್ಯ ಬಿಚ್ಚಿಟ್ಟ ಶ್ರೇಯಸ್ ಅಯ್ಯರ್
Shreyas Iyer India vs New Zealand
TV9 Web
| Edited By: |

Updated on: Nov 29, 2021 | 8:31 AM

Share

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಮೊದಲ ಟೆಸ್ಟ್​ ಪಂದ್ಯದ ಸ್ಪಷ್ಟ ಫಲಿತಾಂಶ ಇಂದು ಹೊರಬೀಳಲಿದೆ. ರೋಚಕ ಘಟ್ಟದಲ್ಲಿರುವ ಕಾನ್ಪುರ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ (Team India) ನ್ಯೂಜಿಲೆಂಡ್‌ ಗೆಲುವಿಗೆ 284 ರನ್​ಗಳ ಗುರಿ ನೀಡಿದೆ. ನಾಲ್ಕನೇ ದಿನದ ಆಟದ ಅಂತ್ಯಕ್ಕೆ ಕೇನ್ ಪಡೆ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 1 ವಿಕೆಟ್ ಕಳೆದುಕೊಂಡು 4 ರನ್ ಗಳಿಸಿದೆ. ಹೀಗಾಗಿ ಕಿವೀಸ್ ಗೆಲುವಿಗೆ ಇನ್ನು 280 ರನ್​ಗಳ ಅವಶ್ಯಕತೆಯಿದ್ದರೆ, ರಹಾನೆ (Ajinkya Rahane) ಪಡೆಗೆ ನ್ಯೂಜಿಲೆಂಡ್​ನ 9 ವಿಕೆಟ್​ಗಳು ಬೇಕಿವೆ. ಎರಡನೇ ಇನ್ನಿಂಗ್ಸ್​ನಲ್ಲಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಭಾರತಕ್ಕೆ ಮತ್ತೆ ಆಸರೆಯಾಗಿದ್ದು ಶ್ರೇಯಸ್ ಅಯ್ಯರ್ (Shreyas Iyer). ಚೊಚ್ಚಲ ಟೆಸ್ಟ್​ನಲ್ಲೇ ವಿಶೇಷ ಸಾಧನೆ ಮಾಡಿ ಮೆರೆದಿರುವ ಅಯ್ಯರ್ ಸದ್ಯ ಭಾರತ ಡಿಕ್ಲೇರ್ (India Declar) ಮಾಡಿಕೊಳ್ಳಲು ವಿಳಂಬ ಮಾಡಿದ್ದೇಕೆ ಎಂಬ ಕಾರಣವನ್ನು ಬಹಿರಂಗ ಪಡಿಸಿದ್ದಾರೆ.

4ನೇ ದಿನದಾಟದಲ್ಲಿ ಬೇಗನೆ ಡಿಕ್ಲೇರ್ ಮಾಡಿಕೊಂಡು ನ್ಯೂಜಿಲೆಂಡ್ ತಂಡದ ಹೆಚ್ಚಿನ ವಿಕೆಟ್ ಕಬಳಿಸಿ ಒತ್ತಡಕ್ಕೆ ಸಿಲುಕಿಸುವ ಅವಕಾಶವಿದ್ದರೂ ಭಾರತ ವಿಳಂಬ ಮಾಡಿತು ಎಂಬ ಅಭಿಪ್ರಾಯ ಕೇಳಿಬಂದಿತ್ತು. ಈ ಬಗ್ಗೆ ಮಾತನಾಡಿದ ಅಯ್ಯರ್, “ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡು 4 ದಿನಗ ಕಳೆದರೂ ಗ್ರೀನ್ ಪಾರ್ಕ್ ಕ್ರೀಡಾಂಗಣದ ಪಿಚ್ ಇನ್ನೂ ಬೌಲರ್‌ಗಳಿಗೆ ಹೆಚ್ಚು ನೆರವಾಗುತ್ತಿಲ್ಲ. ವಿಕೆಟ್ ಕಬಳಿಸುವುದು ಈಗಲೂ ಕಠಿಣವಾಗಿದೆ. ಹೀಗಾಗಿ ಭಾರತ ತಂಡದ ಟೀಮ್ ಮ್ಯಾನೇಜ್‌ಮೆಂಟ್ ನಿರ್ಧಾರದಂತೆ ಡಿಕ್ಲೇರ್ ವಿಳಂಬಗೊಳಿಸಲಾಯಿತು” ಎಂಬ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ.

“ಭಾರತ 250 ರನ್​ಗಳ ಒಟ್ಟಾರೆ ಮುನ್ನಡೆ ಪಡೆಯುವುದು ಗುರಿಯಾಗಿತ್ತು. ಪಿಚ್ ಬೇರೆ ರೀತಿಯಲ್ಲಿ ವರ್ತಿಸುತ್ತಿತ್ತು. ಚೆಂಡು ಹೆಚ್ಚು ಪುಟಿಯುತ್ತಿರಲಿಲ್ಲ. ಒಳ್ಳೆಯ ಮೊತ್ತ ಕಲೆಹಾಕುವುದು ನಮ್ಮ ಉದ್ದೇಶವಾಗಿತ್ತು. ಈಗ ನಾವು ಗಳಿಸಿರುವ ಮುನ್ನಡೆ ನಿಜಕ್ಕೂ ದೊಡ್ಡದೆ. ನಮ್ಮ ಸ್ಪಿನ್ ಶಕ್ತಿಯಿಂದ ಪಂದ್ಯವನ್ನ ಗೆಲ್ಲಬಲ್ಲೆವು” ಎಂದು ಶ್ರೇಯಸ್ ಅಯ್ಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೇಯಸ್ ವಿಶೇಷ ಸಾಧನೆ:

ಶ್ರೇಯಸ್ ಅಯ್ಯರ್ ತಮ್ಮ ಪದಾರ್ಪಣೆಯ ಟೆಸ್ಟ್‌ ಪಂದ್ಯವನ್ನು ಮತ್ತಷ್ಟು ವಿಶೇಷವನ್ನಾಗಿಸಿಕೊಂಡಿದ್ದಾರೆ. ಎರಡನೇ ಇನಿಂಗ್ಸ್‌ನಲ್ಲಿ 51ಕ್ಕೆ 5 ವಿಕೆಟ್‌ಗಳನ್ನು ಕಳೆದುಕೊಂಡು ಅಪಾಯಕ್ಕೆ ಸಿಲುಕಿದ್ದ ತಂಡವನ್ನು ಮತ್ತೆ ಮೇಲೆತ್ತಿದ ಶ್ರೇಯಸ್‌ 125 ಓವರ್‌ಗಳಲ್ಲಿ 65 ರನ್‌ಗಳ ಭರ್ಜರಿ ಇನಿಂಗ್ಸ್‌ ಆಡಿದರು. ಅವರ ಈ ಜವಾಬ್ದಾರಿಯುತ ಇನಿಂಗ್ಸ್‌ನಲ್ಲಿ 8 ಫೋರ್‌ ಮತ್ತೊಂದು ಸಿಕ್ಸರ್‌ ಮೂಡಿಬಂದವು. ಭಾರತ ತಂಡದ ಪರ ಪದಾರ್ಪಣೆಯ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶತಕ ಮತ್ತು ಎರಡನೇ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶೇಷ ದಾಖಲೆ ಶ್ರೇಯಸ್‌ ಅಯ್ಯರ್‌ ಪಾಲಾಗಿದೆ. ಅಷ್ಟೇ ಅಲ್ಲದೆ ಪದಾರ್ಪಣೆಯ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪೈಕಿ ಶ್ರೇಯಸ್‌ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

ಶ್ರೇಯಸ್‌ ಒಟ್ಟು 170 ರನ್‌ಗಳನ್ನು ಗಳಿಸಿದರೆ, 2013ರಲ್ಲಿ ಶಿಖರ್‌ ಧವನ್‌ (187) ಮತ್ತು ರೋಹಿತ್‌ ಶರ್ಮಾ (177) ತಮ್ಮ ಪದಾರ್ಪಣೆಯ ಟೆಸ್ಟ್‌ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಈ ಪಟ್ಟಿಯ ಮೊದಲ ಎರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.

India vs New Zealand 1st Test: ರೋಚಕ ಘಟ್ಟದಲ್ಲಿ ಕಾನ್ಪುರ ಟೆಸ್ಟ್: ಭಾರತದ ಗೆಲುವಿಗೆ ಬೇಕು ನ್ಯೂಜಿಲೆಂಡ್​ನ 9 ವಿಕೆಟ್

(Shreyas Iyer reveals the reason behind on Team India late declaration vs New Zealand 1st Test)

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?