AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತು ಕಣಕ್ಕಿಳಿಯಲ್ಲ ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್​ಮನ್: ಟಿ20 ವಿಶ್ವಕಪ್​ಗೂ ಡೌಟ್..!

Shreyas Iyer: ಇದಾಗ್ಯೂ ಯುಎಇನಲ್ಲಿ ನಡೆಯಲಿರುವ ಐಪಿಎಲ್​ನ ಎರಡನೇ ಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವ ವಿಶ್ವಾಸದಲ್ಲಿದ್ದಾರೆ ಶ್ರೇಯಸ್ ಅಯ್ಯರ್. ಐಪಿಎಲ್​ 2ನೇ ಭಾಗವು ಸೆಪ್ಟೆಂಬರ್ 19 ರಿಂದ ಶುರುವಾಗಲಿದ್ದು, ಅಕ್ಟೋಬರ್ 15ರವರೆಗೆ ನಡೆಯಲಿದೆ. ಈ ವೇಳೆಗೆ ಸಂಪೂರ್ಣ ಚೇತರಿಸಿಕೊಂಡು ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವುದಾಗಿ ಅಯ್ಯರ್ ತಿಳಿಸಿದ್ದಾರೆ. ಒಂದು ವೇಳೆ ಐಪಿಎಲ್​ ವೇಳೆ ಕಣಕ್ಕಿಳಿಯದಿದ್ದರೆ ಟಿ20 ವಿಶ್ವಕಪ್ ತಂಡದಲ್ಲಿ ಶ್ರೇಯಸ್ ಅಯ್ಯರ್​ಗೆ ಸ್ಥಾನ ಸಿಗೋದು ಬಹುತೇಕ ಅನುಮಾನ ಎನ್ನಬಹುದು.

ಸದ್ಯಕ್ಕಂತು ಕಣಕ್ಕಿಳಿಯಲ್ಲ ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್​ಮನ್: ಟಿ20 ವಿಶ್ವಕಪ್​ಗೂ ಡೌಟ್..!
Shreyas Iyer
TV9 Web
| Updated By: Digi Tech Desk|

Updated on:Jul 19, 2021 | 10:06 PM

Share

ಒಂದೆಡೆ ಟೀಮ್ ಇಂಡಿಯಾ ಹಿರಿಯರ ತಂಡ ಇಂಗ್ಲೆಂಡ್​ ವಿರುದ್ದದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದರೆ, ಮತ್ತೊಂದೆಡೆ ಟೀಮ್ ಇಂಡಿಯಾ ಯುವ ಪಡೆ ಶ್ರೀಲಂಕಾ ವಿರುದ್ದ ಗೆಲುವಿನೊಂದಿಗೆ ಏಕದಿನ ಸರಣಿ ಅಭಿಯಾನ ಆರಂಭಿಸಿದೆ. ಆದರೆ ಈ ಎರಡೂ ತಂಡಗಳಲ್ಲೂ ಭಾರತದ ಭವಿಷ್ಯದ ನಾಯಕ ಎಂದು ಬಿಂಬಿತವಾಗಿರುವ ಸ್ಟಾರ್ ಬ್ಯಾಟ್ಸ್​ಮನ್ ಶ್ರೇಯಸ್ ಅಯ್ಯರ್ ಇಲ್ಲ ಎಂಬುದೇ ಸತ್ಯ.

ಹೌದು, 26 ವರ್ಷ ಅಯ್ಯರ್ ಕ್ರಿಕೆಟ್​ ಅಂಗಳ ತೊರೆದು 4 ತಿಂಗಳುಗಳಾಗಿವೆ. ಇಂಗ್ಲೆಂಡ್​ ವಿರುದ್ದದ ಏಕದಿನ ಸರಣಿಯ ಮೊದಲ ಪಂದ್ಯದ ಫೀಲ್ಡಿಂಗ್ ವೇಳೆ ಬಿದ್ದು ಅಯ್ಯರ್ ಗಾಯಗೊಂಡಿದ್ದರು. ಚೆಂಡು ತಡೆಯುವ ಯತ್ನದಲ್ಲಿ ಡೈವ್ ಹೊಡೆದಿದ್ದ ಶ್ರೇಯಸ್ ಅವರ ಎಡಭುಜದ ಕೀಲು ತಪ್ಪಿತ್ತು. ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಷ್ಟೇ ಅಲ್ಲದೆ ಐಪಿಎಲ್​ನ ಮೊದಲಾರ್ಧದಲ್ಲೂ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ.

ಇದಾಗ್ಯೂ ಇತ್ತೀಚೆಗಷ್ಟೇ ಬಲಗೈ ದಾಂಡಿಗ, ಶೀಘ್ರದಲ್ಲೇ ಕಂಬ್ಯಾಕ್ ಮಾಡುವುದಾಗಿ ತಿಳಿಸಿದ್ದರು. ಅದರಂತೆ ಇಂಗ್ಲೆಂಡ್​ನಲ್ಲಿ ನಡೆಯಲಿರುವ ಕೌಂಟಿ ಕ್ರಿಕೆಟ್​ ಮೂಲಕ ಮತ್ತೆ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಲಂಕಾಶೈರ್ ತಂಡದ ಪರ ಒಪ್ಪಂದ ಮಾಡಿಕೊಂಡಿದ್ದ ಶ್ರೇಯಸ್ ತಮ್ಮ ಒಪ್ಪಂದವನ್ನು ರದ್ದುಗೊಳಿಸಿದ್ದಾರೆ.

ಲಂಡನ್ ಕಪ್ ಹೆಸರಿನಲ್ಲಿರುವ ನಡೆಯಲಿರುವ ಕೌಂಟಿ ಒನ್​ಡೇ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಲಂಕಾಶೈರ್ ಪರ ಕಣಕ್ಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಲಂಕಾಶೈರ್ ತಂಡವು, ಲಂಡನ್​ ಕಪ್ ಸರಣಿಗೆ ಭಾರತದ ಬ್ಯಾಟ್ಸಮನ್​ ಶ್ರೇಯಸ್ ಅಯ್ಯರ್ ಅಲಭ್ಯತೆಯನ್ನು ದೃಢಪಡಿಸಿದ್ದಾರೆ. ಇದರೊಂದಿಗೆ ಕೌಂಟಿ ಕ್ರಿಕೆಟ್ ಮೂಲಕ ಮತ್ತೆ ಮೈದಾನಕ್ಕಿಳಿಯುವ ಅಯ್ಯರ್ ಕನಸು ಭಗ್ನಗೊಂಡಿದೆ. ಭುಜದ ನೋವು ಸಂಪೂರ್ಣ ಗುಣವಾಗದ ಕಾರಣ ಕೌಂಟಿ ಟೂರ್ನಿಯಿಂದ ಶ್ರೇಯಸ್ ಅಯ್ಯರ್ ಹಿಂದೆ ಸರಿದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೇಯಸ್ ಅಯ್ಯರ್, ಈ ಬೇಸಿಗೆಯಲ್ಲಿ ಲಂಕಾಶೈರ್ ಪರ ಆಡಲು ಸಾಧ್ಯವಿಲ್ಲ ಎಂಬುದು ಖಚಿತವಾಗಿದೆ. ಲಂಕಾಶೈರ್ ತನ್ನದೆಯಾದ ಇತಿಹಾಸ ಮತ್ತು ಮಹತ್ವಾಕಾಂಕ್ಷೆಯನ್ನು ಹೊಂದಿರುವ ಕ್ರಿಕೆಟ್ ಕ್ಲಬ್. ಭವಿಷ್ಯದಲ್ಲಿ ಲಂಕಾಶೈರ್ ಪರ ಎಮಿರೇಟ್ಸ್​ ಓಲ್ಡ್ ಟ್ರಾಫೋರ್ಡ್​​ ಮೈದಾನದಲ್ಲಿ ಆಡುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದ್ದಾರೆ.

ಇದಾಗ್ಯೂ ಯುಎಇನಲ್ಲಿ ನಡೆಯಲಿರುವ ಐಪಿಎಲ್​ನ ಎರಡನೇ ಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವ ವಿಶ್ವಾಸದಲ್ಲಿದ್ದಾರೆ ಶ್ರೇಯಸ್ ಅಯ್ಯರ್. ಐಪಿಎಲ್​ 2ನೇ ಭಾಗವು ಸೆಪ್ಟೆಂಬರ್ 19 ರಿಂದ ಶುರುವಾಗಲಿದ್ದು, ಅಕ್ಟೋಬರ್ 15ರವರೆಗೆ ನಡೆಯಲಿದೆ. ಈ ವೇಳೆಗೆ ಸಂಪೂರ್ಣ ಚೇತರಿಸಿಕೊಂಡು ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವುದಾಗಿ ಅಯ್ಯರ್ ತಿಳಿಸಿದ್ದಾರೆ. ಒಂದು ವೇಳೆ ಐಪಿಎಲ್​ ವೇಳೆ ಕಣಕ್ಕಿಳಿಯದಿದ್ದರೆ ಟಿ20 ವಿಶ್ವಕಪ್ ತಂಡದಲ್ಲಿ ಶ್ರೇಯಸ್ ಅಯ್ಯರ್​ಗೆ ಸ್ಥಾನ ಸಿಗೋದು ಬಹುತೇಕ ಅನುಮಾನ ಎನ್ನಬಹುದು.

Published On - 6:56 pm, Mon, 19 July 21

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ