AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

Vijay Hazare Trophy 2024-25: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಮ್ಯಾಚ್​ನಲ್ಲೇ ಅಬ್ಬರಿಸಿದ್ದಾರೆ. ಅದು ಕೂಡ ಸ್ಪೋಟಕ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಶತಕದೊಂದಿಗೆ ಮುಂಬೈ ತಂಡ ಕರ್ನಾಟಕ ವಿರುದ್ಧ ಬೃಹತ್ ಮೊತ್ತ ಪೇರಿಸಿದೆ.

10 ಭರ್ಜರಿ ಸಿಕ್ಸರ್​ಗಳೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್
Shreyas Iyer
ಝಾಹಿರ್ ಯೂಸುಫ್
|

Updated on: Dec 21, 2024 | 1:23 PM

Share

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಅಂಗ್​ಕ್ರಿಶ್ ರಘುವಂಶಿ ಕೇವಲ 6 ರನ್​ಗಳಿಸಿ ವಿದ್ಯಾಧರ್ ಪಾಟೀಲ್​ಗೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಜೊತೆಗೂಡಿ ಆಯುಷ್ ಮ್ಹಾತ್ರೆ (78) ಹಾಗೂ ಹಾರ್ದಿಕ್ ತಮೋರ್ (84) 2ನೇ ವಿಕೆಟ್​ಗೆ 141 ರನ್​ಗಳ ಜೊತೆಯಾಟವಾಡಿದರು.

ಅಯ್ಯರ್ ಅಬ್ಬರ ಸಿಡಿಲಬ್ಬರ:

ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಅಯ್ಯರ್ ಕರ್ನಾಟಕ ಬೌಲರ್​ಗಳನ್ನು ಹಿಗ್ಗಮುಗ್ಗಾ ದಂಡಿಸಿದರು. ಪರಿಣಾಮ ಶ್ರೇಯಸ್ ಬ್ಯಾಟ್​ನಿಂದ 10 ಭರ್ಜರಿ ಸಿಕ್ಸ್​ಗಳು ಮೂಡಿಬಂದವು.

ಈ ಸಿಡಿಲಬ್ಬರದೊಂದಿಗೆ ಶ್ರೇಯಸ್ ಅಯ್ಯರ್ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ ಅಯ್ಯರ್ 55 ಎಸೆತಗಳಲ್ಲಿ 5 ಫೋರ್ ಹಾಗೂ 10 ಸಿಕ್ಸ್​ಗಳೊಂದಿಗೆ ಅಜೇಯ 114 ರನ್ ಬಾರಿಸಿದರು. ಈ ಭರ್ಜರಿ ಶತಕದ ನೆರವಿನೊಂದಿಗೆ ಮುಂಬೈ ತಂಡವು 50 ಓವರ್​​ಗಳಲ್ಲಿ 4 ವಿಕೆಟ್ ಕಳೆದುಕೊಂಡು 382 ರನ್ ಕಲೆಹಾಕಿದೆ.

ಈ ಪಂದ್ಯವನ್ನು ಗೆಲ್ಲಲು ಕರ್ನಾಟಕ ತಂಡವು 50 ಓವರ್​ಗಳಲ್ಲಿ 382 ರನ್​ ಕಲೆಹಾಕಬೇಕಿದೆ. ಈ ಮೊತ್ತವನ್ನು ಚೇಸ್ ಮಾಡಿದರೆ ಕರ್ನಾಟಕ ತಂಡದ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ.

ಮುಂಬೈ ಪ್ಲೇಯಿಂಗ್ 11: ಅಂಗ್​ಕ್ರಿಶ್ ರಘುವಂಶಿ , ಆಯುಷ್ ಮ್ಹಾತ್ರೆ , ಶ್ರೇಯಸ್ ಅಯ್ಯರ್ (ನಾಯಕ) , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ತಮೋರೆ (ವಿಕೆಟ್ ಕೀಪರ್) , ಶಿವಂ ದುಬೆ , ಸೂರ್ಯಾಂಶ್ ಶೆಡ್ಗೆ , ಅಥರ್ವ ಅಂಕೋಲೇಕರ್ , ತನುಷ್ ಕೋಟ್ಯಾನ್ , ಶಾರ್ದೂಲ್ ಠಾಕೂರ್ , ಜುನೇದ್ ಖಾನ್.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ಅನೀಶ್ ಕೆವಿ , ನಿಕಿನ್ ಜೋಸ್ , ಸ್ಮರಣ್ ರವಿಚಂದ್ರನ್ , ಅಭಿನವ್ ಮನೋಹರ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಶ್ರೇಯಸ್ ಗೋಪಾಲ್ , ವೈಶಾಕ್ ವಿಜಯಕುಮಾರ್ , ಪ್ರವೀಣ್ ದುಬೆ , ವಾಸುಕಿ ಕೌಶಿಕ್ , ವಿದ್ಯಾಧರ್ ಪಾಟೀಲ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!